BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Team Udayavani, Oct 24, 2024, 1:34 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭರ್ಜರಿ ಸದ್ದು ಮಾಡಿದ್ದ ಲಾಯರ್ ಜಗದೀಶ್ (Lawyer Jagadish) ಮತ್ತೆ ʼಬಿಗ್ ಬಾಸ್ʼ ನಡೆಸಿಕೊಡುವ ಕಲರ್ಸ್ ವಾಹಿನಿಯಲ್ಲಿ ಕಾಣಿಸಿಕೊಂಡಿದ್ದಾರೆ.
ದೊಡ್ಮನೆಗೆ ಎಂಟ್ರಿ ಕೊಟ್ಟು ಸಹ ಸ್ಪರ್ಧಿಗಳಿಗೆ ಟಾಂಗ್ ಕೊಡುತ್ತಾ ಅವರೊಂದಿಗೆ ವಾಗ್ವಾದಕ್ಕಿಳಿದು ಕಿರಿಕ್ ಮಾಡಿಕೊಂಡಿದ್ದ ಜಗದೀಶ್ ಅವರನ್ನು ಮಹಿಳಾ ಸ್ಪರ್ಧಿಗಳ ಮೇಲೆ ನಿಂದನೀಯ ಪದಗಳ ಬಳಕೆ ಮಾಡಿದ ಆರೋಪದ ಮೇಲೆ ಬಿಗ್ ಬಾಸ್ ಮನೆಯಿಂದ ಆಚೆ ಹಾಕಲಾಗಿತ್ತು. ಇವರೊಂದಿಗೆ ಜಗದೀಶ್ ಮೇಲೆ ದೈಹಿಕ ಹಲ್ಲೆಗೆ ಮುಂದಾದ ರಂಜಿತ್ ಅವರನ್ನು ಸಹ ಹೊರಗೆ ಹಾಕಲಾಗಿತ್ತು.
ಬಿಗ್ಬಾಸ್ನಿಂದ ಆಚೆ ಬಂದ ಬಳಿಕ ಜಗದೀಶ್ ʼಕ್ರಷ್ ಆಫ್ ಕರ್ನಾಟಕʼ ಆಗಿ ಫೇಮ್ ಗಿಟ್ಟಿಸಿಕೊಂಡಿದ್ದಾರೆ. ಅವರು ಮತ್ತೆ ಬಿಗ್ ಬಾಸ್ ಗೆ ಬರಬೇಕೆನ್ನುವ ಕೂಗು ಒಂದು ಕಡೆ ಕೇಳಿ ಬರುತ್ತಿದ್ದು, ಇನ್ನೊಂದು ಕಡೆ ಈ ಬಗ್ಗೆ ಮೌನವಾಗಿರುವ ಜಗದೀಶ್ ಹತ್ತಾರು ವಾಹಿನಿಗಳಿಗೆ ಸಂದರ್ಶನ ನೀಡುತ್ತಿದ್ದಾರೆ.
View this post on Instagram
ಇದೀಗ ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಅಡುಗೆ ಕಾರ್ಯಕ್ರಮ ʼಸವಿರುಚಿ ಸೀಸನ್ -3ʼ ರಲ್ಲಿ ಜಗದೀಶ್ ಅವರು ಅತಿಥಿಯಾಗಿ ಆಗಮಿಸಿದ್ದು, ಕಾರ್ಯಕ್ರಮದ ಪ್ರೋಮೊ ರಿಲೀಸ್ ಮಾಡಲಾಗಿದೆ.
“ನಾನು ನಿಮ್ಮ ಪ್ರೀತಿಯ ಜಗದೀಶ್” ಎಂದು ಸ್ಟೈಲ್ ಆಗಿಯೇ ʼಕ್ರಷ್ ಆಫ್ ಕರ್ನಾಟಕʼ ಕಲರ್ಸ್ ಕಿಚನ್ಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ವಿಶೇಷ ರೆಸಿಪಿ ಮಾಡುತ್ತಾ ಅವರು ಬಿಗ್ ಬಾಸ್ ಮನೆಯಲ್ಲಿನ ಅನೇಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ.
ಮಜ್ಜಿಗೆ ನೋಡಿದರೆ ತಿವಿಕ್ರಮ್ ಹಾಗೂ ರಂಜಿತ್ ಅವರು ನೆನಪು ಆಗುತ್ತಾರೆ ಅವರು ಹಂಸಾನ ಕಿತ್ತುಕೊಂಡರು ಎಂದು ಹೇಳಿದ್ದಾರೆ. ಹಂಸ ಮೇಲೆ ನಿಮಗೆ ಲವ್ ಆಗಿತ್ತಾ ಎನ್ನುವ ಪ್ರಶ್ನೆಗೆ ಜಗದೀಶ್ ಅವರು ಜೋರಾಗಿ ನಕ್ಕಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ
Bigg Boss: ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?
BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ
BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.