BBK-11: ಕಿಚ್ಚನ ಹೆಸರು ತೆಗೆದು ಹಾಕಿದ ವಾಹಿನಿ; ಬಿಗ್‌ ಬಾಸ್‌ಗೆ ಸುದೀಪ್‌ ಅನುಮಾನ?


Team Udayavani, Sep 10, 2024, 10:47 AM IST

3

ಬೆಂಗಳೂರು: ಕಿರುತೆರೆ ಪ್ರೇಕ್ಷಕರ ಮೆಚ್ಚಿನ ಶೋಗಳಲ್ಲಿ ಒಂದಾಗಿರುವ ಬಿಗ್ ಬಾಸ್ ಕನ್ನಡ -11 (Bigg Boss Kannada -11) ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಇತ್ತೀಚೆಗೆ ಕಲರ್ಸ್ ಕನ್ನಡ ವಾಹಿನಿ ಅಧಿಕೃತವಾಗಿ ಹೊಸ ಸೀಸನ್ ಹೊಸ ಲೋಗೋವನ್ನು ಪರಿಚಯಿಸಿತು.

ಪ್ರತಿ ವರ್ಷಕ್ಕಿಂತ ಈ ವರ್ಷದ ಬಿಗ್‌ ಬಾಸ್‌ ಆರಂಭಕ್ಕೆ ಹೆಚ್ಚಿನ ಕುತೂಹಲವಿದೆ. ಅದಕ್ಕೆ ಮುಖ್ಯ ಕಾರಣವೆಂದರೆ ಈ ಬಾರಿ ನಿರೂಪಕನ ವಿಚಾರದಲ್ಲಿ ಹುಟ್ಟಿ‌ಕೊಂಡಿರುವ ಪ್ರಶ್ನೆ. ಕಿಚ್ಚ ಸುದೀಪ್‌‌ (Kiccha Sudeep) ಅವರು ಈ ಬಾರಿ ಬಿಗ್‌ ಬಾಸ್ ನಡೆಸಿಕೊಡುವುದು ಅನುಮಾನವೆನ್ನಲಾಗುತ್ತಿದೆ.

ಆದರೆ ಈ ಗೊಂದಲದ ನಡುವೆಯೇ ವಾಹಿನಿ ರಿವೀಲ್‌ ಮಾಡಿದ್ದ ಹೊಸ ಲೋಗೋ ವಿಡಿಯೋದಲ್ಲಿ ಕಿಚ್ಚ ಸುದೀಪ್‌ ಅವರ ಹೆಸರನ್ನು ಹ್ಯಾಷ್‌ ಟ್ಯಾಗ್‌ ಆಗಿ ಬಳಸಲಾಗಿತ್ತು. ಇದರಿಂದ ಕಿಚ್ಚ ಅವರೇ ಶೋ ನಡೆಸಿಕೊಡಲಿದ್ದಾರೆ ಎನ್ನುವ ಮಾತು ಮತ್ತೆ ಮುನ್ನೆಲೆಗೆ ಬಂದಿತ್ತು.

ಆದರೆ ಇದೀಗ ಈ ಲೋಗೋ ವಿಡಿಯೋದಿಂದ ಕಿಚ್ಚ ಸುದೀಪ್‌ ಅವರ ಹೆಸರನ್ನು ತೆಗೆಯಲಾಗಿದೆ. ಹಾಗಾಗಿ ಅವರು ಶೋ ನಡೆಸಿಕೊಡುವ ಬಗೆಗಿನ ಚರ್ಚೆ ಮತ್ತೆ ಶುರುವಾಗಿದೆ.

ಇತ್ತೀಚೆಗೆ ಕಿಚ್ಚ ಸುದ್ದಿಗೋಷ್ಟಿಯಲ್ಲಿ ಬಿಗ್‌ ಬಾಸ್‌ ಬಗ್ಗೆ ಮಾತನಾಡುತ್ತಾ, “ಕಳೆದ 10 ಸೀಸನ್ ನಾನು ಬಿಗ್ ಬಾಸ್ ನಡೆಸಿಕೊಟ್ಟಿದ್ದೇನೆ ಅನ್ನೋದು ಮಾತ್ರ ಎಲ್ಲರಿಗೂ ಗೊತ್ತು. ಆದರೆ ಅದರ ಹಿಂದಿನ ಕಷ್ಟ ಎಲ್ಲರಿಗೂ ಗೊತ್ತಿಲ್ಲ. ಬಿಗ್ ಬಾಸ್ ಸೀಸನ್ -11 ಕ್ಕೆ ಬೇರೆಯವರೂ ಬರಲಿ ಅಂತಾ ಕಾಯ್ತಾ ಇದೀನಿ. ಬಿಗ್ ಬಾಸ್‌ನ 10 ಸೀಸನ್‌ಗಳನ್ನು ನಾನು ಡೆಡಿಕೇಟ್ ಮಾಡಿದ್ದೀನಿ. ಕಳೆದ 10 ಸೀಸನ್‌ಗಳನ್ನು ನಾನು ನಡೆಸಿಕೊಂಡು ಬಂದಿದ್ದೀನಿ. ನಾನು ಬಿಗ್ ಬಾಸ್ ನಡೆಸಿಕೊಡ್ತೀನಿ ಅಂತಾ ಎಲ್ಲರಿಗೂ ಗೊತ್ತಿದೆ. ಆದರೆ ನಾನು ಹೇಗೆ ನಡೆಸಿಕೊಡುತ್ತಿದ್ದೆ ಅಂತಾ ಯಾರಿಗಾದರೂ ಗೊತ್ತಿದ್ಯಾ? ಬಿಗ್ ಬಾಸ್‌ಗಾಗಿ ನಾನು ಎಲ್ಲಿದ್ದರೂ ಬರಬೇಕಾಗುತ್ತದೆ. ಬಿಗ್ ಬಾಸ್ ನಡೆಸಬೇಕಾದರೆ ಅದರ ಹಿಂದಿನ ಸ್ಥಿತಿ ಹೇಗಿರುತ್ತದೆ ಅಂತಾ ನನಗೆ ಗೊತ್ತಿದೆ ” ಎಂದು ಹೇಳಿದ್ದರು.

ಇತ್ತ ಜಿಯೋ ಸಿನಿಮಾ ಬಿಗ್‌ ಬಾಸ್‌ ಕನ್ನಡ ಸೀಸನ್‌ -11ರ ಟೀಸರ್‌ ಶೀಘ್ರದಲ್ಲಿ ಬರಲಿದೆ ಎಂದು ಹಾಕಿಕೊಂಡಿದೆ.

ಕಿಚ್ಚ ಸುದೀಪ್‌ ಹೊಸ ಸಿನಿಮಾಗಳಿಗೆ ಗ್ರೀನ್‌ ಸಿಗ್ನಲ್‌ ನೀಡಿದ್ದು, ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಬಿಗ್‌ ಬಾಸ್‌ ಗಾಗಿ ಟೈಮ್‌ ಹೇಗೆ ಬಳಸಿಕೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಬಿಗ್‌ ಬಾಸ್‌ ಕನ್ನಡ ಸೀಸನ್‌ -11 ನಿರೂಪಕರ ಹೆಸರಿನಲ್ಲಿ ರಮೇಶ್‌ ಅರವಿಂದ್‌ ಅವರ ಹೆಸರು ಕೂಡ ಕೇಳಿ ಬರುತ್ತಿದೆ. ಇನ್ನಷ್ಟೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಪಿಕ್ಸ್

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಫಿಕ್ಸ್

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

1

Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್‌ ಮೇಲೆ ಕೇಸ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.