Bigg Boss Tamil 7: ಬಿಗ್‌ ಬಾಸ್‌ ಟ್ರೋಫಿ ಮುಡಿಗೇರಿಸಿಕೊಂಡ ವೈಲ್ಡ್‌ ಕಾರ್ಡ್‌ ಸ್ಪರ್ಧಿ


Team Udayavani, Jan 15, 2024, 12:47 PM IST

Bigg Boss Tamil 7: ಬಿಗ್‌ ಬಾಸ್‌ ಟ್ರೋಫಿ ಮುಡಿಗೇರಿಸಿಕೊಂಡ ವೈಲ್ಡ್‌ ಕಾರ್ಡ್‌ ಸ್ಪರ್ಧಿ

ಚೆನ್ನೈ: ದಿಗ್ಗಜ ನಟ ಕಮಲ್‌ ಹಾಸನ್‌ ನಡೆಸಿಕೊಡುವ ʼಬಿಗ್ ಬಾಸ್‌ʼ 7ನೇ ಸೀಸನ್‌ ನ ಫಿನಾಲೆ ವಿಜೇತ ಸ್ಪರ್ಧಿಯ ಘೋಷಣೆ ಮೂಲಕ ಭಾನುವಾರ (ಜ.14 ರಂದು) ಮುಕ್ತಾಯ ಕಂಡಿದೆ.

ಬಿಗ್‌ ಬಾಸ್‌ ತಮಿಳಿನ ಇತಿಹಾಸದಲ್ಲೇ ಮೊದಲ ಬಾರಿ ವೈಲ್ಡ್‌ ಕಾರ್ಡ್‌ ಎಂಟ್ರಿಯಾಗಿ ದೊಡ್ಮನೆಯೊಳಗೆ ಪ್ರವೇಶ ಪಡೆದ ಸ್ಪರ್ಧಿಯೊಬ್ಬರು ಬಿಗ್‌ ಬಾಸ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಣ್ಮನ ಸೆಳೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಿಗ್‌ ಬಾಸ್‌ ತಮಳು -7 ಸಮಾಪ್ತಿ ಕಂಡಿದೆ. ಫಿನಾಲೆಯ ವೇದಿಕೆಯಲ್ಲಿ ಒಂದೊಂದೇ ಸ್ಪರ್ಧಿಗಳು ಎಲಿಮಿನೇಟ್‌ ಆಗಿ ಕೊನೆಯದಾಗಿ ಉಳಿದ ಇಬ್ಬರಲ್ಲಿ ವಿಜೇತರನ್ನು ಘೋಷಿಸಲಾಗಿದೆ.

ಕಾರ್ಯಕ್ರಮಕ್ಕೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಯಾಗಿ ಪ್ರವೇಶ ಪಡೆದಿದ್ದ ಕಿರುತೆರೆ ನಟಿ ಅರ್ಚನಾ ರವಿಚಂದ್ರನ್ ಬಿಗ್‌ ಬಾಸ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಮೊದಲ ಬಾರಿ ಬಿಗ್ ಬಾಸ್‌ ತಮಿಳಿನ ಕಾರ್ಯಕ್ರಮದಲ್ಲಿ ವೈಲ್ಡ್‌ ಕಾರ್ಡ್ ಸ್ಪರ್ಧಿಯೊಬ್ಬರು ಫಿನಾಲೆ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ರನ್ನರ್ ಅಪ್ ಆಗಿ ಡ್ಯಾನ್ಸರ್‌ ಮಾಯಾ ಕೃಷ್ಣ ಹೊರಹೊಮ್ಮಿದ್ದಾರೆ.

ವಿಜೇತೆ ಅರ್ಚನಾ ಅವರಿಗೆ 50 ಲಕ್ಷ ರೂ. ನಗದು, 15 ಲಕ್ಷ ರೂ. ಮೌಲ್ಯದ ನಿವೇಶನ ಹಾಗೂ ಮಾರುತಿ ನೆಕ್ಸಾ ಗ್ರಾಂಡ್ ವಿಟಾರಾ ಕಾರನ್ನು ಪಡೆದುಕೊಂಡಿದ್ದಾರೆ.

ಅರ್ಚನಾ ಅವರೊಂದಿಗೆ ಮಾಯಾ ಕೃಷ್ಣನ್, ಮಣಿಚಂದ್ರ, ವಿಷ್ಣು ಮತ್ತು ದಿನೇಶ್ ಫಿನಾಲೆಯಲ್ಲಿ ಸ್ಪರ್ಧಿಗಳಾಗಿದ್ದರು.

“ನಾನು ಕೇವಲ ಎರಡು ವಾರಗಳವರೆಗೆ ಮಾತ್ರ ಯೋಜಿಸಿದೆ. ಇಷ್ಟು ದಿನ ನಾನು ಪ್ಲಾನ್ ಮಾಡಿರಲಿಲ್ಲ. ಒಂದೊಂದು ದಿನ ಎಂಜಾಯ್ ಮಾಡುತ್ತಿದ್ದೆ. ನನ್ನ ಶಾಲಾ ದಿನಗಳು ಮತ್ತು ಕಾಲೇಜು ದಿನಗಳಿಂದಲೂ ನನ್ನ ಹತ್ತಿರ ಯಾರೂ ಇರಲಿಲ್ಲ. ಆದರೆ ಈ ಶೋ ನಂತರ, ನಾನು ಹಿಂತಿರುಗಿ ನೋಡಿದಾಗ, ನಾನು ತುಂಬಾ ಜನರನ್ನು ನೋಡುತ್ತೇನೆ. ನಾನು ಈ ಬಗ್ಗೆ ಕನಸು ಕಂಡಿರಲಿಲ್ಲ. ನನ್ನ ಕುಟುಂಬ ಮತ್ತು ಕಮಲ್ ಸರ್ ಗೆ ಧನ್ಯವಾದಗಳು. ಈ ಗೆಲುವಿನಲ್ಲಿ ನಿಮ್ಮ ಪಾಲೂ ಇದೆ ಸರ್, ನಾನು ನಿಮ್ಮನ್ನು ಗುರುವಾಗಿ ತೆಗೆದುಕೊಂಡೆ. ಮತ್ತು ಪ್ರತಿ ಕ್ಷಣವೂ ನನ್ನನ್ನು ತಳ್ಳಿದ್ದಕ್ಕಾಗಿ ನನ್ನ ಸಹ ಸ್ಪರ್ಧಿಗಳಿಗೆ. ಎಲ್ಲರಿಗೂ ಧನ್ಯವಾದಗಳು. ನಾನು ಮೂಕನಾಗಿದ್ದೇನೆ.” ಎಂದು ವೇದಿಕೆಯಲ್ಲಿ ಅರ್ಚನಾ ಹೇಳಿದ್ದಾರೆ.

 

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಪಿಕ್ಸ್

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಫಿಕ್ಸ್

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.