Huli Karthik: ಜಾತಿ ನಿಂದನೆ ಆರೋಪ; ಹಾಸ್ಯ ನಟ ಹುಲಿ ಕಾರ್ತಿಕ್‌ ಸೇರಿ ನಾಲ್ವರ ವಿರುದ್ಧ FIR


Team Udayavani, Oct 8, 2024, 3:12 PM IST

Huli Karthik: ಜಾತಿ ನಿಂದನೆ ಆರೋಪ; ಹಾಸ್ಯ ನಟ ಹುಲಿ ಕಾರ್ತಿಕ್‌ ಸೇರಿ ನಾಲ್ವರ ವಿರುದ್ಧ FIR

ಬೆಂಗಳೂರು:  ʼಗಿಚ್ಚಿ ಗಿಲಿ ಗಿಲಿ-3ʼ (Gicchi Gili Gili-3) ಕಾರ್ಯಕ್ರಮದ ವಿಜೇತ ಹುಲಿ ಕಾರ್ತಿಕ್‌ (Huli Karthik) ಸೇರಿದಂತೆ  ನಾಲ್ವರ ವಿರುದ್ಧ ಎಫ್ ಐಆರ್‌ (FIR) ದಾಖಲಾಗಿದೆ.

ʼಗಿಚ್ಚಿ ಗಿಲಿ ಗಿಲಿ-3ʼ ಕಾರ್ಯಕ್ರಮದಲ್ಲಿ ತನ್ನ ಹಾಸ್ಯದ ಮೂಲಕವೇ ಅಪಾರ ಪ್ರೇಕ್ಷಕರನ್ನು ರಂಜಿಸಿ ವಿನ್ನರ್‌ ಆಗಿ ಹೊರಹೊಮ್ಮಿದ ಹುಲಿ ಕಾರ್ತಿಕ್, ಬಿಗ್‌ ಬಾಸ್‌ ಕನ್ನಡ-11 (Bigg Boss Kannada-11) ದಲ್ಲಿ ಸ್ಪರ್ಧಿಯಾಗಿ ಭಾಗಿಯಾಗುತ್ತಾರೆ ಎನ್ನಲಾಗಿತ್ತು. ಆದರೆ ಅದು ಬರೀ ವದಂತಿ ಆಗಿತ್ತು.

ಇದೀಗ ಅವಾರ್ಡ್‌ ಕಾರ್ಯಕ್ರಮದಲ್ಲಿ ಹುಲಿ ಕಾರ್ತಿಕ್‌ ಮಾತನಾಡಿದ ವಿಚಾರಕ್ಕೆ ಅವರ ಮೇಲೆ ಎಫ್‌ ಐಆರ್‌ ದಾಖಲಿಸಲಾಗಿದೆ.

ಖಾಸಗಿ ವಾಹಿನಿಯ ‘ಅನುಬಂಧʼ ಎನ್ನುವ ಅವಾರ್ಡ್ಸ್‌ ಕಾರ್ಯಕ್ರಮದಲ್ಲಿ ಬೋವಿ ಜನಾಂಗಕ್ಕೆ ನೋವುಂಟು ಮಾಡುವ ಪದವನ್ನು ಉಪಯೋಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಾರ್ತಿಕ್‌ ಹೇಳಿದ್ದೇನು?: ಯಾವುದೋ ರೋಡಲ್ಲಿ ಬಿದ್ದಿರುವ ವಡ್ಡನ ತರ ಇದ್ಯಾ. ಈ ಬೆಲ್ಟ್‌ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಸ್ಕ್ರಿಪ್ಟ್‌ ಕಾರಣವೆಂದು ಸ್ಕ್ರಿಪ್ಟ್‌ ರೈಟರ್‌ ಸಂದೀಪ್‌ ಅವರಿಗೆ ಧನ್ಯವಾದ ತಿಳಿಸಿದ್ದರು.

ಈ ಹೇಳಿಕೆ ಬೋವಿ ಸಮುದಾಯಕ್ಕೆ ನೋವುಂಟು ಮಾಡುವ ರೀತಿಯಿದ್ದು, ಇವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಲೋಕೇಶ್‌ ಎನ್ನುವವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಜಾತಿ ನಿಂದನೆ (Atrocity Case) ಆರೋಪದ ಮೇಲೆ ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ ಅವಾರ್ಡ್ಸ್ʼ​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್  ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕರಾಗಿದ್ದಾರೆ.

ಸದ್ಯ ಹುಲಿ ಕಾರ್ತಿಕ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

 

ಟಾಪ್ ನ್ಯೂಸ್

Bangladesh Cricket: Another senior player announced his farewell in the midst of the India series

Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

6-madikeri

Madikeri: ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bangladesh Cricket: Another senior player announced his farewell in the midst of the India series

Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ

Maski; ಚಿರತೆಗೆ ಹೊಲುವ ಕಾಡು ಬೆಕ್ಕು ಪ್ರತ್ಯಕ್ಷ; ಗ್ರಾಮಸ್ಥರ ಆತಂಕ

Maski; ಚಿರತೆಗೆ ಹೊಲುವ ಕಾಡು ಬೆಕ್ಕು ಪ್ರತ್ಯಕ್ಷ; ಗ್ರಾಮಸ್ಥರ ಆತಂಕ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ

Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ

Jammu Kashmir Result: ಓಮರ್‌ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಸಿಎಂ: ಫಾರೂಖ್ ಅಬ್ದುಲ್ಲಾ

Jammu Kashmir Poll:ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಜನರು ಒಪ್ಪಿಲ್ಲ: ಫಾರೂಖ್ ಅಬ್ದುಲ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.