Mahanati Grand Finale: ಮೈಸೂರಿನ ಪ್ರಿಯಾಂಕಗೆ ʼಮಹಾನಟಿʼ ಪಟ್ಟ; ಗೆದ್ದ ಬಹುಮಾನವೇನು?


Team Udayavani, Jul 15, 2024, 1:11 PM IST

Mahanati Grand Finale: ಮೈಸೂರಿನ ಪ್ರಿಯಾಂಕಗೆ ʼಮಹಾನಟಿʼ ಪಟ್ಟ; ಗೆದ್ದ ಬಹುಮಾನವೇನು?

ಬೆಂಗಳೂರು: ರಮೇಶ್‌ ಅರವಿಂದ್‌ , ಪ್ರೇಮಾ, ತರುಣ್‌ ಸುಧೀರ್‌ ಹಾಗೂ  ನಿಶ್ವಿಕಾ ನಾಯ್ಡು ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದ ಕನ್ನಡ ಕಿರುತೆರೆಯ ʼಮಹಾನಟಿʼ(Mahanati) ಕಾರ್ಯಕ್ರಮಕ್ಕೆ ತೆರೆಬಿದ್ದಿದೆ.

ಸಾಂಸ್ಕೃತಿಕ ಕಾರ್ಯಕ್ರಮ, ಹಾಸ್ಯ, ಡ್ರಾಮಾ, ವಿಜೇತೆ ಯಾರು ಎನ್ನುವುದರ ಕುತೂಹಲದಿಂದ ʼಮಹಾನಟಿʼ ಗ್ರ್ಯಾಂಡ್‌ ಫಿನಾಲೆ ಮುಕ್ತಾಯ ಕಂಡಿದೆ.

ರಾಜ್ಯದ ಅನೇಕ ಕಡೆಯಿಂದ ಸ್ಪರ್ಧಿಗಳು ಭಾಗಿಯಾಗಿದ್ದರು. ಅನೇಕ ಪ್ರದರ್ಶನಗಳು ವೇದಿಕೆಯಲ್ಲಿ ತೀರ್ಪುಗಾರರನ್ನು ಭಾವನಾತ್ಮಕವಾಗಿ ಸೆಳೆದಿತ್ತು. ಕಡೆಯದಾಗಿ ಗಗನಾ, ಶ್ವೇತಾ ಭಟ್, ಧನ್ಯಶ್ರೀ, ಪ್ರಿಯಾಂಕ, ಆರಾಧನಾ ಭಟ್ ಐವರು ಫಿನಾಲೆ ವೇದಿಕೆಗೆ ಹತ್ತಿದ್ದರು. ಈ ಐವರಲ್ಲಿ ಒಬ್ಬರಿಗೆ ʼಮಹಾನಟಿʼ ಚಿನ್ನದ ಕಿರೀಟ ಲಭಿಸಿದೆ.

ಐವರಲ್ಲಿ ಕೊನೆಯದಾಗಿ ತರೀಕೆರೆಯ ಧನ್ಯಶ್ರೀ , ಮೈಸೂರಿನ ಪ್ರಿಯಾಂಕಾ ಫಿನಾಲೆ ವೇದಿಕೆಯಲ್ಲಿ ನಿಂತಿದ್ದಾರೆ. ರಮೇಶ್‌ ಅರವಿಂದ್ ಒಂದಷ್ಟು ಕುತೂಹಲ ಹುಟ್ಟಿಸಿ ವಿನ್ನರ್‌ ಹೆಸರನ್ನು ಘೋಷಿಸಿದ್ದಾರೆ.

ಮೈಸೂರಿನ ಪ್ರಿಯಾಂಕ ʼಮಹಾನಟಿʼ ಸೀಸನ್‌ -1 ರ ವಿನ್ನರ್‌ ಆಗಿ ಹೊರಹೊಮ್ಮಿದ್ದಾರೆ. ಆ ಮೂಲಕ 15 ಲಕ್ಷ ಮೌಲ್ಯದ ಬಂಗಾರದ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ತರೀಕೆರೆಯ ಧನ್ಯಶ್ರೀ ರನ್ನರ್‌ ಅಪ್‌ ಆಗಿದ್ದಾರೆ. ಅವರಿಗೆ 10 ಲಕ್ಷ ರೂ. ಬಹುಮಾನವನ್ನು ಪಡೆದುಕೊಂಡಿದ್ದಾರೆ.

ಪ್ರಿಯಾಂಕ ಹಾಗೂ ಧನ್ಯಶ್ರೀ ಇಬ್ಬರು ತಮ್ಮದೇ ಆದ ನಟನಾ ಕೌಶಲ್ಯದಿಂದ ಪ್ರೇಕ್ಷಕರನ್ನು ರಂಜಿಸಿದ್ದರು.

ಇನ್ನು ʼಮಹಾನಟಿʼ ಫಿನಾಲೆ ಸ್ಪರ್ಧಿಗಳಿಗಾಗಿ ಶಾರ್ಟ್‌ ಫಿಲ್ಮ್ ಗಳನ್ನು ಮಾಡಲಾಗಿತ್ತು. ನಿರ್ದೇಶಕರಾದ ಜಯತೀರ್ಥ, ಶಶಾಂಕ್, ಸಂತು, ಪನ್ನಗಾಭರಣ, ಮಂನ್ಸೋರೆ ಅವರು ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದರು.

‘ಈ ಗೆಲುವು ನನ್ನದು ಮಾತ್ರವಲ್ಲ ಎಲ್ಲರದ್ದು. ಈ ಸ್ಕ್ರೀನ್ ಮೇಲೆ ನಾನು ಚೆನ್ನಾಗಿ ಕಾಣಬೇಕು ಅಂದ್ರೆ ಎಲ್ಲಾ ಟೆಕ್ನಿಷಿಯನ್ಸ್ ಕೂಡ ಕಾರಣ. ಇಂದು ವೋಟ್ ಹಾಕಿ ಇಲ್ಲಿಯ ತನಕ ತಂದು ನಿಲ್ಲಿಸಿದ ಪ್ರತಿಯೊಬ್ಬರಿಗೂ ಥ್ಯಾಂಕ್ಯೂ. ಏನೇ ಸಾಧನೆ ಮಾಡಿದರೂ ಅದು ಜೀ ಕನ್ನಡದಿಂದ ಮಾತ್ರ ಸಾಧ್ಯ. ಥ್ಯಾಂಕ್ಯೂ ಜೀ ಕನ್ನಡ’ ಎಂದು ಗೆಲುವಿನ ಬಳಿಕ ಪ್ರಿಯಾಂಕ ಹೇಳಿದರು.

 

View this post on Instagram

 

A post shared by ZEE5 Kannada (@zee5kannada)

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

ಅ.19-20ರಂದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ja

BBK11: ನೀವು ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು, ಜನರ ಮನಸ್ಸು ಗೆಲ್ಲೋದು ನಾನೇ.. ಜಗದೀಶ್

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.