AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್ಬಾಸ್ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್
Team Udayavani, Sep 30, 2024, 10:48 AM IST
ಮುಂಬಯಿ: ಸಹೋದರಿಯ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಆರೋಪದ ಕೇಳಿ ಬಂದ ಹಿನ್ನೆಲೆ ಜನಪ್ರಿಯ ಯೂಟ್ಯೂಬರ್ ಮತ್ತು ಬಿಗ್ ಬಾಸ್ ಓಟಿಟಿ-3 ( Bigg Boss OTT 3) ಖ್ಯಾತಿಯ ಅದ್ನಾನ್ ಶೇಖ್ (Adnaan Shaikh) ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅದ್ನಾನ್ ಶೇಖ್ ಸಹೋದರಿ ಆಯೇಷಾ ಗೋರೆಗಾಂವ್ನ ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
“ಕೊನೆಗೆ ನನ್ನ ದೂರನ್ನು ಪೊಲೀಸರು ದಾಖಲಿಸಿದ್ದಾರೆ ಮತ್ತು ನನ್ನನ್ನು ಥಳಿಸಿದ ನನ್ನ ಸಹೋದರನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ” ಎಂದು ಅದ್ನಾನ್ ಸಹೋದರಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು ಹೇಳಿದ್ದಾರೆ.
ಇದನ್ನೂ ಓದಿ: BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
ಕೆಲ ಸಮಯದಿಂದ ಹಿಂದೆ ಅದ್ನಾನ್ ತನ್ನ ಸಹೋದರಿ ಆಯೇಷಾ ಹಾಗೂ ಅವರ ಮಾವನ ಮೇಲೆ ಹಲ್ಲೆ ನಡೆಸಿದ್ದಾರೆ. ಸಹೋದರಿಗೆ ಹಿಗ್ಗಾಮುಗ್ಗಾವಾಗಿ ಥಳಿಸಿದ್ದಾರೆ. ಮೊದಮೊದಲು ಕುಟುಂಬಕ್ಕೆ ಸಂಬಂಧಿಸಿದ ವಿಚಾರವಾಗಿ ಮನೆಯಲ್ಲೇ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸಲಾಗಿದೆ ಆದರೆ ಆದಾದ ಬಳಿಕವೂ ಅದ್ನಾನ್ ಅದೇ ರೀತಿಯಾಗಿ ವರ್ತಿಸಿದ್ದು ಸಹೋದರಿ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮೊದಲಿಗೆ ಪೊಲೀಸರು ಅದ್ನಾನ್ ಮೇಲೆ ದೂರು ದಾಖಲಿಸಲು ಹಿಂಜರಿದಿದ್ದು, ಅವರು ಪ್ರಭಾವಿ ವ್ಯಕ್ತಿಗಳನ್ನು ಬಳಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಆಯೇಷಾ ಹೇಳಿದ್ದಾರೆ. ಆ ಬಳಿಕ ಆಯೇಷಾ ಸಾಮಾಜಿಕ ಕಾರ್ಯಕರ್ತರೊಬ್ಬರ ಜತೆ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಯಾವ ಕಾರಣಕ್ಕಾಗಿ ಅದ್ನಾನ್ ಸಹೋದರಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.
ಅದ್ನಾನ್ ಶೇಖ್ ಟಿಕ್ಟಾಕ್ನಲ್ಲಿ ಟೀಮ್ 07 ಗುಂಪಿನ ಭಾಗವಾಗಿ ಖ್ಯಾತಿ ಆಗಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸಿದೆ. ಬಿಗ್ ಬಾಸ್ ಓಟಿಟಿ-3 ಮೂಲಕ ಖ್ಯಾತಿಯಾದ ಅವರು ಇತ್ತೀಚೆಗೆ ಬಹುಕಾಲದ ಗೆಳತಿ ರಿದ್ಧಿ ಅವರನ್ನು ಮದುವೆಯಾಗಿದ್ದರು. ರಿದ್ದಿ ಮದುವೆ ಬಳಿಕ ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ಅವರ ಹೆಸರನ್ನು ಆಯೇಷಾ ಶೇಕ್ ಎಂದು ಬದಲಾಯಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ
BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…
BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ
BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ
Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್ ಖೇರ್ ಫೋಟೊ!
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ
Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.