ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

ಮೃತ ಚಂದ್ರಕಾಂತ್‌ ಪತ್ನಿಯ ಶಾಕಿಂಗ್‌ ಹೇಳಿಕೆ

Team Udayavani, May 18, 2024, 12:18 PM IST

Untitled-1

ಹೈದರಾಬಾದ್:‌ ನಟಿ ಪವಿತ್ರಾ ಜಯರಾಂ ಕಾರು ಅಪಘಾತದ ಸಂದರ್ಭದಲ್ಲಿ ಅವರ ಜೊತೆಯಲ್ಲಿದ್ದ ಗೆಳೆಯ ಚಂದ್ರಕಾಂತ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲುಗು ಕಿರುತೆರೆ ಲೋಕಕ್ಕೆ ಆಘಾತವನ್ನೀಡಿದೆ. ಕೆಲವೇ ದಿನದ ಅಂತರದಲ್ಲಿ ಇಬ್ಬರು ಖ್ಯಾತ ಕಿರುತೆರೆ ನಟರು ಇಹಲೋಕ ತ್ಯಜಿಸಿದ್ದಾರೆ.

ಶುಕ್ರವಾರ(ಮೇ.17 ರಂದು) ನೇಣು ಬಿಗಿದುಕೊಂಡು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮೀಯ ಸ್ನೇಹಿತೆ ಪವಿತ್ರಾ ಅವರ ಸಾವಿನಿಂದ ಕುಗ್ಗಿಹೋಗಿದ್ದ ಚಂದು ನೇಣಿಗೆ ಶರಣಾಗಿದ್ದಾರೆ. ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ತನ್ನ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದು ಹಾಗೂ ಪವಿತ್ರಾ ಅವರ ಸ್ನೇಹ ಬರೀ ಸ್ನೇಹವಾಗಿಲ್ಲ. ಅವರಿಬ್ಬರು ತುಂಬಾ ಆತ್ಮೀಯರಾಗಿದ್ದರು. ಇಬ್ಬರು ಗಂಡ – ಹೆಂಡತಿಯಂತೆ ಇದ್ದರು ಎಂದು ಚಂದು ಪತ್ನಿ ಶಿಲ್ಪಾ ಶಾಕಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ.

ತೆಲುಗು ವೆಬ್‌ ಸೈಟ್‌ ವೊಂದಕ್ಕೆ ನೀಡಿರುವ ಅವರ ಹೇಳಿಕೆಗಳು ವೈರಲ್‌ ಆಗಿದೆ.

“2004 ರಲ್ಲಿ ನನ್ನ ಹಾಗೂ ಚಂದು ಪರಿಚಯವಾಗಿತ್ತು. ಸ್ನೇಹ ಪ್ರೀತಿಯಾಯಿತು. ಆದರೆ ನಮ್ಮ ಸಂಬಂಧವನ್ನು ಮನೆಯವರು ಒಪ್ಪಿರಲಿಲ್ಲ. ಆಮೇಲೆ ಅವರೇ ಬೇಕೆಂದು ಹಠ ಹಿಡಿದು ಮದುವೆ ಆಗಿದ್ದೆ. ಮನೆಯವರು 2015 ರಲ್ಲಿ ಅದ್ಧೂರಿಯಾಗಿ ನಮ್ಮ ಮದುವೆ ಮಾಡಿಕೊಟ್ಟಿದ್ದರು. ನನಗೀಗ 8 ವರ್ಷದ ಮಗಳು, 4 ವರ್ಷದ ಮಗನಿದ್ದಾನೆ. ಚಂದು ಪವಿತ್ರಾ ಅವರ ಪರಿಚಯ ಆದ ಬಳಿಕ ಮನೆಗೆ ಬರುವುದು ಅಪರೂಪವಾಗಿತ್ತು” ಎಂದಿದ್ದಾರೆ.

“ಲಾಕ್‌ ಡೌನ್‌ ಬಳಿಕ ಚಂದು – ಪವಿತ್ರಾ ನಡುವೆ ರಿಲೇಷನ್‌ ಆರಂಭವಾಗಿತ್ತು. ಚಂದು ಆಕೆಯ ಪರಿಚಯದ ಬಳಿಕ ನನ್ನ ಜೊತೆ ಅಷ್ಟಾಗಿ ಮಾತನಾಡುತ್ತಿರಲಿಲ್ಲ. ಯಾವಾಗಲೂ ಸಿಟ್ಟಿನಿಂದಲೇ ಮಾತನಾಡುತ್ತಿದ್ದರು. ನನ್ನ ಮೇಲೆ ದೌರ್ಜನ್ಯವನ್ನು ಮಾಡುತ್ತಿದ್ದರು. ಆದರೆ ನಾನು ನನ್ನ ಗಂಡನೇ ನನಗೆ ಎಲ್ಲವೆಂದು ಸಹಿಸಿಕೊಂಡು ಬದುಕುತ್ತಿದ್ದೆ. ಆದರೆ ಅವರು ಇವತ್ತು ನನ್ನನ್ನು ಬಿಟ್ಟುಹೋಗಿದ್ದಾರೆ” ಎಂದು ಭಾವುಕರಾಗಿದ್ದಾರೆ.

“ಪವಿತ್ರಾ ಅವರ ವಿಚಾರ ಗೊತ್ತಾದ ಮೇಲೆ ಮನೆಯಲ್ಲಿ ಆಗಾಗ ನಮ್ಮ ನಡುವೆ ಜಗಳವಾಗುತ್ತಿತ್ತು. ಪವಿತ್ರಾ ಫೋನ್‌ ಮಾಡಿ ನನಗೆ ಬೆದರಿಕೆ ಹಾಕಿದ್ದರು. ಚಂದ್ರಕಾಂತ್‌ ನನ್ನ ಗಂಡ ಕಣೇ ನಿನಗೇನು ಎಂದು ಅವರು ಬೆದರಿಕೆ ಹಾಕಿದ್ದರು. ಇದರ ಬಗ್ಗೆ ಪವಿತ್ರಾ ಅವರ ಮಗನ ಬಳಿಯೂ ಹೇಳಿದ್ದೆ ಆದರೆ ಆತ ಕೂಡ ನನಗೆ ವಾಪಾಸ್‌ ಜೋರು ಮಾಡಿದ್ದ. ಚಂದು ಯಾವಾಗಲೂ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ಯಾವಾಗಲೂ ಪವಿತ್ರಾಳ ಬಗ್ಗೆ ಮಾತನಾಡುತ್ತಿದ್ದ. ಈ ಬಗ್ಗೆ ನಾನು ಮಹಿಳಾ ಮಂಡಳಿಯಲ್ಲಿ ದೂರು ನೀಡಿದ್ದೆ. ಅಲ್ಲಿ ಕೂಡ ಚಂದು ಪವಿತ್ರಾಳೇ ನನ್ನ ಲೈಫ್‌ ಎಂದು ಹೇಳಿದ್ದ. ನಾನು ನನ್ನ ಮಕ್ಕಳಿಗೆ ತಂದೆ ಬೇಕೆಂದು ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೆ” ಎಂದು ಹೇಳಿದ್ದಾರೆ.

ಪವಿತ್ರಾನಿಗಾಗಿ ನನ್ನ ಜೀವವನ್ನೇ ತ್ಯಾಗ ಮಾಡಿದ್ದೇನೆ. ಆಕೆ ಇಲ್ಲದೆ ಬದುಕಲು ಸಾಧ್ಯನೇ ಇಲ್ಲವೆಂದು ಚಂದು ತಮ್ಮ ಬಳಿ ಹೇಳಿದ್ದರೆಂದು ಪವಿತ್ರಾ ಅವರ ಸಂಬಂಧಿ ಲೊಕೇಶ್‌ ಅವರು ಮಾಧ್ಯಮಕ್ಕೆ ಹೇಳಿದ್ದಾರೆ.

ಪವಿತ್ರಾ ಹಾಗೂ ಚಂದು ತೆಲುಗಿನ ʼತ್ರಿನಯನಿʼ ಧಾರಾವಾಹಿಯಲ್ಲಿ ಜೊತೆಯಾಗಿ ನಟಿಸಿದ್ದರು.

 

ಟಾಪ್ ನ್ಯೂಸ್

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

4

ಇಬ್ಬರು ಪತ್ನಿಯರೊಂದಿಗೆ ಬಿಗ್‌ ಬಾಸ್‌ ಮನೆಗೆ ಬಂದ ಯೂಟ್ಯೂಬರ್:‌ ಯಾರು ಈ ಅರ್ಮಾನ್ ಮಲಿಕ್?

Bigg Boss OTT: ಓಟಿಟಿಯಲ್ಲಿ ಶುರುವಾಯಿತು ಮಿನಿ ಬಿಗ್‌ ಬಾಸ್; ಇಲ್ಲಿದೆ ಸ್ಪರ್ಧಿಗಳ ವಿವರ

Bigg Boss OTT: ಓಟಿಟಿಯಲ್ಲಿ ಶುರುವಾಯಿತು ಮಿನಿ ಬಿಗ್‌ ಬಾಸ್; ಇಲ್ಲಿದೆ ಸ್ಪರ್ಧಿಗಳ ವಿವರ

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

OTT release: ರಿಲೀಸ್‌ ಆದ 15 ದಿನಕ್ಕೆ ಓಟಿಟಿಗೆ ಬರಲಿದೆ ʼಗ್ಯಾಂಗ್ಸ್‌ ಆಫ್‌ ಗೋದಾವರಿʼ

OTT release: ರಿಲೀಸ್‌ ಆದ 15 ದಿನಕ್ಕೆ ಓಟಿಟಿಗೆ ಬರಲಿದೆ ʼಗ್ಯಾಂಗ್ಸ್‌ ಆಫ್‌ ಗೋದಾವರಿʼ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.