ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

ಮೃತ ಚಂದ್ರಕಾಂತ್‌ ಪತ್ನಿಯ ಶಾಕಿಂಗ್‌ ಹೇಳಿಕೆ

Team Udayavani, May 18, 2024, 12:18 PM IST

Untitled-1

ಹೈದರಾಬಾದ್:‌ ನಟಿ ಪವಿತ್ರಾ ಜಯರಾಂ ಕಾರು ಅಪಘಾತದ ಸಂದರ್ಭದಲ್ಲಿ ಅವರ ಜೊತೆಯಲ್ಲಿದ್ದ ಗೆಳೆಯ ಚಂದ್ರಕಾಂತ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲುಗು ಕಿರುತೆರೆ ಲೋಕಕ್ಕೆ ಆಘಾತವನ್ನೀಡಿದೆ. ಕೆಲವೇ ದಿನದ ಅಂತರದಲ್ಲಿ ಇಬ್ಬರು ಖ್ಯಾತ ಕಿರುತೆರೆ ನಟರು ಇಹಲೋಕ ತ್ಯಜಿಸಿದ್ದಾರೆ.

ಶುಕ್ರವಾರ(ಮೇ.17 ರಂದು) ನೇಣು ಬಿಗಿದುಕೊಂಡು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮೀಯ ಸ್ನೇಹಿತೆ ಪವಿತ್ರಾ ಅವರ ಸಾವಿನಿಂದ ಕುಗ್ಗಿಹೋಗಿದ್ದ ಚಂದು ನೇಣಿಗೆ ಶರಣಾಗಿದ್ದಾರೆ. ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ತನ್ನ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದು ಹಾಗೂ ಪವಿತ್ರಾ ಅವರ ಸ್ನೇಹ ಬರೀ ಸ್ನೇಹವಾಗಿಲ್ಲ. ಅವರಿಬ್ಬರು ತುಂಬಾ ಆತ್ಮೀಯರಾಗಿದ್ದರು. ಇಬ್ಬರು ಗಂಡ – ಹೆಂಡತಿಯಂತೆ ಇದ್ದರು ಎಂದು ಚಂದು ಪತ್ನಿ ಶಿಲ್ಪಾ ಶಾಕಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ.

ತೆಲುಗು ವೆಬ್‌ ಸೈಟ್‌ ವೊಂದಕ್ಕೆ ನೀಡಿರುವ ಅವರ ಹೇಳಿಕೆಗಳು ವೈರಲ್‌ ಆಗಿದೆ.

“2004 ರಲ್ಲಿ ನನ್ನ ಹಾಗೂ ಚಂದು ಪರಿಚಯವಾಗಿತ್ತು. ಸ್ನೇಹ ಪ್ರೀತಿಯಾಯಿತು. ಆದರೆ ನಮ್ಮ ಸಂಬಂಧವನ್ನು ಮನೆಯವರು ಒಪ್ಪಿರಲಿಲ್ಲ. ಆಮೇಲೆ ಅವರೇ ಬೇಕೆಂದು ಹಠ ಹಿಡಿದು ಮದುವೆ ಆಗಿದ್ದೆ. ಮನೆಯವರು 2015 ರಲ್ಲಿ ಅದ್ಧೂರಿಯಾಗಿ ನಮ್ಮ ಮದುವೆ ಮಾಡಿಕೊಟ್ಟಿದ್ದರು. ನನಗೀಗ 8 ವರ್ಷದ ಮಗಳು, 4 ವರ್ಷದ ಮಗನಿದ್ದಾನೆ. ಚಂದು ಪವಿತ್ರಾ ಅವರ ಪರಿಚಯ ಆದ ಬಳಿಕ ಮನೆಗೆ ಬರುವುದು ಅಪರೂಪವಾಗಿತ್ತು” ಎಂದಿದ್ದಾರೆ.

“ಲಾಕ್‌ ಡೌನ್‌ ಬಳಿಕ ಚಂದು – ಪವಿತ್ರಾ ನಡುವೆ ರಿಲೇಷನ್‌ ಆರಂಭವಾಗಿತ್ತು. ಚಂದು ಆಕೆಯ ಪರಿಚಯದ ಬಳಿಕ ನನ್ನ ಜೊತೆ ಅಷ್ಟಾಗಿ ಮಾತನಾಡುತ್ತಿರಲಿಲ್ಲ. ಯಾವಾಗಲೂ ಸಿಟ್ಟಿನಿಂದಲೇ ಮಾತನಾಡುತ್ತಿದ್ದರು. ನನ್ನ ಮೇಲೆ ದೌರ್ಜನ್ಯವನ್ನು ಮಾಡುತ್ತಿದ್ದರು. ಆದರೆ ನಾನು ನನ್ನ ಗಂಡನೇ ನನಗೆ ಎಲ್ಲವೆಂದು ಸಹಿಸಿಕೊಂಡು ಬದುಕುತ್ತಿದ್ದೆ. ಆದರೆ ಅವರು ಇವತ್ತು ನನ್ನನ್ನು ಬಿಟ್ಟುಹೋಗಿದ್ದಾರೆ” ಎಂದು ಭಾವುಕರಾಗಿದ್ದಾರೆ.

“ಪವಿತ್ರಾ ಅವರ ವಿಚಾರ ಗೊತ್ತಾದ ಮೇಲೆ ಮನೆಯಲ್ಲಿ ಆಗಾಗ ನಮ್ಮ ನಡುವೆ ಜಗಳವಾಗುತ್ತಿತ್ತು. ಪವಿತ್ರಾ ಫೋನ್‌ ಮಾಡಿ ನನಗೆ ಬೆದರಿಕೆ ಹಾಕಿದ್ದರು. ಚಂದ್ರಕಾಂತ್‌ ನನ್ನ ಗಂಡ ಕಣೇ ನಿನಗೇನು ಎಂದು ಅವರು ಬೆದರಿಕೆ ಹಾಕಿದ್ದರು. ಇದರ ಬಗ್ಗೆ ಪವಿತ್ರಾ ಅವರ ಮಗನ ಬಳಿಯೂ ಹೇಳಿದ್ದೆ ಆದರೆ ಆತ ಕೂಡ ನನಗೆ ವಾಪಾಸ್‌ ಜೋರು ಮಾಡಿದ್ದ. ಚಂದು ಯಾವಾಗಲೂ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ಯಾವಾಗಲೂ ಪವಿತ್ರಾಳ ಬಗ್ಗೆ ಮಾತನಾಡುತ್ತಿದ್ದ. ಈ ಬಗ್ಗೆ ನಾನು ಮಹಿಳಾ ಮಂಡಳಿಯಲ್ಲಿ ದೂರು ನೀಡಿದ್ದೆ. ಅಲ್ಲಿ ಕೂಡ ಚಂದು ಪವಿತ್ರಾಳೇ ನನ್ನ ಲೈಫ್‌ ಎಂದು ಹೇಳಿದ್ದ. ನಾನು ನನ್ನ ಮಕ್ಕಳಿಗೆ ತಂದೆ ಬೇಕೆಂದು ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೆ” ಎಂದು ಹೇಳಿದ್ದಾರೆ.

ಪವಿತ್ರಾನಿಗಾಗಿ ನನ್ನ ಜೀವವನ್ನೇ ತ್ಯಾಗ ಮಾಡಿದ್ದೇನೆ. ಆಕೆ ಇಲ್ಲದೆ ಬದುಕಲು ಸಾಧ್ಯನೇ ಇಲ್ಲವೆಂದು ಚಂದು ತಮ್ಮ ಬಳಿ ಹೇಳಿದ್ದರೆಂದು ಪವಿತ್ರಾ ಅವರ ಸಂಬಂಧಿ ಲೊಕೇಶ್‌ ಅವರು ಮಾಧ್ಯಮಕ್ಕೆ ಹೇಳಿದ್ದಾರೆ.

ಪವಿತ್ರಾ ಹಾಗೂ ಚಂದು ತೆಲುಗಿನ ʼತ್ರಿನಯನಿʼ ಧಾರಾವಾಹಿಯಲ್ಲಿ ಜೊತೆಯಾಗಿ ನಟಿಸಿದ್ದರು.

 

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

BBK11:‌ ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ

BBK11:‌ ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.