Minu Muneer: ನಟ ಜಯಸೂರ್ಯ, ಮುಕೇಶ್‌ ಸೇರಿ 6 ಮಂದಿಯ ವಿರುದ್ಧ ಕಿರುಕುಳದ ಆರೋಪ ಮಾಡಿದ ನಟಿ


Team Udayavani, Aug 26, 2024, 1:20 PM IST

7

ಕೊಚ್ಚಿ: ಹೇಮಾ ಸಮಿತಿ ವರದಿಯ (Hema Committee Report) ಬೆನ್ನಲ್ಲೇ ಮಾಲಿವುಡ್ ನಲ್ಲಿ ಮಹಿಳಾ ಕಲಾವಿದರ ಮೇಲೆ ನಡೆದಿದ್ದ ಒಂದೊಂದೇ ಕೃತ್ಯಗಳು ಬೆಳಕಿಗೆ ಬರುತ್ತಿದೆ. ಈ ಹಿಂದೆ ತಮ್ಮ ಮೇಲಾದ ಕಿರುಕುಳ ಹಾಗೂ ದೌರ್ಜನ್ಯದ ಬಗ್ಗೆ ನಟಿಯರು ಬಹಿರಂಗವಾಗಿ ಹೇಳಿಕೆಯನ್ನು ನೀಡಿ, ಆರೋಪವನ್ನು ಮಾಡುತ್ತಿದ್ದಾರೆ.

ಮಲಯಾಳಂ ನಿರ್ದೇಶಕ ರಂಜಿತ್ (Malayalam director Ranjith), ಹಿರಿಯ ನಟ ಸಿದ್ದೀಕ್ (Actor Siddique) ಕಾಲಿವುಡ್‌ – ಮಾಲಿವುಡ್‌ ನಟ ರಿಯಾಜ್ ಖಾನ್ (Actor Riyaz Khan) ವಿರುದ್ಧ ಅಸಭ್ಯ ವರ್ತನೆ ಹಾಗೂ ಕಿರುಕುಳದ ಆರೋಪ ಕೇಳಿ ಬಂದಿದೆ.

ಇದೀಗ ನಟಿಯೊಬ್ಬರು ಮಾಲಿವುಡ್ ಸಿನಿಮಾರಂಗದಲ್ಲಿ ತಮಗಾದ ಕಿರುಕುಳದ ಬಗ್ಗೆ ಹೇಳಿದ್ದು, ಖ್ಯಾತ ನಟರು ಹಾಗೂ ತಂತ್ರಜ್ಞರ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಮಲಯಾಳಂ ನಟಿ ಮಿನು ಮುನೀರ್ (Minu Muneer) ತನ್ನ ಸಹ ನಟರು ಮತ್ತು ತಂತ್ರಜ್ಞರ ವಿರುದ್ಧ ಆರೋಪಗಳನ್ನು ಮಾಡಿದ್ದು, ಪ್ರಾಜೆಕ್ಟ್‌ಗಾಗಿ ಕೆಲಸ ಮಾಡುವಾಗ ಮೌಖಿಕ ಮತ್ತು ದೈಹಿಕ ನಿಂದನೆಯನ್ನು ಎದುರಿಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್‌ ನಲ್ಲಿ ಏನಿದೆ?:

“ನಾನು ಅನುಭವಿಸಿದ ದೈಹಿಕ ಮತ್ತು ಮೌಖಿಕ ನಿಂದನೆಯ ಘಟನೆಗಳ ಬಗ್ಗೆ ಬರೆಯುತ್ತಿದ್ದೇನೆ. ನಾನು ಇವರುಗಳ ಕೈಯಲ್ಲಿ ಬಳಲುತ್ತಿದ್ದೆ, ನಟ ಮುಕೇಶ್‌, ಮಣಿಯನ್ ಪಿಳ್ಳ ರಾಜು, ನಟ ಜಯಸೂರ್ಯ, ಚಂದ್ರಶೇಖರನ್, ಮಲಯಾಳಂ ಚಲನಚಿತ್ರೋದ್ಯಮದ ಪ್ರೊಡಕ್ಷನ್‌ ಕಂಟ್ರೋಲರ್ ನೋಬಲ್ ಮತ್ತು ವಿಚು” ಎನ್ನುವವರು ತಮಗೆ ದೈಹಿಕ ಹಾಗೂ ಮೌಖಿಕವಾಗಿ ನಿಂದಿಸಿ ಕಿರುಕುಳ ನೀಡಿದ್ದಾರೆ ಎಂದು ಅವರು ಫೋಟೋಗಳ ಸಮೇತ ಪೋಸ್ಟ್‌ ಹಾಕಿ ಆರೋಪಿಸಿದ್ದಾರೆ.

ಇದನ್ನೂ ಓದಿ: Mollywood: ನಟ ರಿಯಾಜ್ ಫೋನ್‌ ಮಾಡಿ ಲೈಂಗಿಕ ಆಸಕ್ತಿ ಬಗ್ಗೆ ಮಾತನಾಡಿದ್ದರು.. ನಟಿಯ ಆರೋಪ

“2013 ರಲ್ಲಿ ನಾನು ಪ್ರಾಜೆಕ್ಟ್‌ವೊಂದರಲ್ಲಿ ಕೆಲಸ ಮಾಡುವಾಗ ಈ ವ್ಯಕ್ತಿಗಳಿಂದ ದೈಹಿಕ ಮತ್ತು ಮೌಖಿಕ ನಿಂದನೆಗೆ ಒಳಗಾಗಿದ್ದೆ. ನಾನು ಸಹಕರಿಸಲು ಮತ್ತು ಕೆಲಸವನ್ನು ಮುಂದುವರಿಸಲು ಪ್ರಯತ್ನಿಸಿದೆ. ಆದರೆ ನಿಂದನೆಯನ್ನು ಸಹಿಸಲಾಗಲಿಲ್ಲ. ಪರಿಣಾಮವಾಗಿ ನಾನು ಮಲಯಾಳಂ ಚಲನಚಿತ್ರೋದ್ಯಮವನ್ನು ತೊರೆದು ಚೆನ್ನೈಗೆ ಸ್ಥಳಾಂತರಗೊಳ್ಳಬೇಕಾಯಿತು” ಎಂದು ಬರೆದುಕೊಂಡಿದ್ದಾರೆ.

“ನಾನು ಅನುಭವಿಸಿದ ಆಘಾತ ಮತ್ತು ನೋವಿಗೆ ನ್ಯಾಯವನ್ನು ಹುಡುಕುತ್ತಿದ್ದೇನೆ. ಅವರ ಹೇಯ ಕೃತ್ಯಗಳ ವಿರುದ್ಧ ಕ್ರಮ ಕೈಗೊಳ್ಳಲು ನಿಮ್ಮ ಸಹಾಯವನ್ನು ಕೋರುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಸದಸ್ಯತ್ವಕ್ಕಾಗಿ ಇಡವೆಲಾ ಬಾಬು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದರು ಎಂದು ಈ ಹಿಂದೆ ಮಿನು ಆರೋಪಿಸಿದ್ದರು.

‘ದೇ ಥಡಿಯಾ’ ಚಿತ್ರದ ಚಿತ್ರೀಕರಣದ ವೇಳೆ ನಟ ಜಯಸೂರ್ಯ (Jayasurya) ಅನುಚಿತವಾಗಿ ವರ್ತಿಸಿದ್ದರು. ಹಿರಿಯ ನಟ ಮಣಿಯನ್ ಪಿಳ್ಳ ರಾಜು (Maniyan pilla Raju) ರಾತ್ರಿ ನನ್ನ ಹೋಟೆಲ್ ಕೊಠಡಿಯ ಬಾಗಿಲು ತಟ್ಟಿ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು.

ಟಾಪ್ ನ್ಯೂಸ್

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.