Indian 3: ʼಇಂಡಿಯನ್ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?
Team Udayavani, Oct 3, 2024, 3:15 PM IST
ಚೆನ್ನೈ: ನಟ ಕಮಲ್ ಹಾಸನ್ (Actor Kamal) ಪ್ರಧಾನ ಭೂಮಿಕೆಯ ಬಹು ನಿರೀಕ್ಷೆ ಹುಟ್ಟಿಸಿದ್ದ ʼಇಂಡಿಯನ್ -2ʼ (Indian 2) ಹೀನಾಯವಾಗಿ ಸೋತಿತು. ಆ ಮೂಲಕ ಶಂಕರ್ – ಕಮಲ್ ʼಇಂಡಿಯನ್ʼ ಬಳಿಕ ಮತ್ತೆ ಮೋಡಿ ಮಾಡುತ್ತಾರೆ ಎನ್ನುವ ನಿರೀಕ್ಷೆ ಹುಸಿಯಾಯಿತು.
ಇದನ್ನೂ ಓದಿ: Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್ ಆಕ್ರೋಶ
ಥಿಯೇಟರ್ನಲ್ಲಿ ಮುಗ್ಗರಿಸಿದ ಬಳಿಕ ಓಟಿಟಿಯಲ್ಲಿ ಬಂದಿದ್ದ ಶಂಕರ್ (Director Shankar) ನಿರ್ದೇಶನದ ʼಇಂಡಿಯನ್ -2ʼ ಅಲ್ಲೂ ಕೂಡ ಅಷ್ಟಾಗಿ ಸದ್ದು ಮಾಡಿಲ್ಲ. ಸದ್ಯ ಕಮಲ್ ಹಾಸನ್ ʼಥಗ್ ಲೈಫ್ʼ (Thug Life) ಸಿನಿಮಾದತ್ತ ಮುಖ ಮಾಡಿದ್ದಾರೆ. ಆದರೆ ಅವರ ʼಇಂಡಿಯನ್-3ʼ (Indian 3) ಸಿನಿಮಾದ ಬಗ್ಗೆ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ.
ʼಇಂಡಿಯನ್ -2ʼ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಳಪೆ ಪ್ರದರ್ಶನ ನೀಡಿದ ಬಳಿಕ ಚಿತ್ರತಂಡ ʼಇಂಡಿಯನ್-3ʼ ಬಗ್ಗೆ ಎಚ್ಚರಿಕೆ ವಹಿಸಲು ಶುರು ಮಾಡಿದೆ. ʼಇಂಡಿಯನ್ -2ʼ ಸಿನಿಮಾದಿಂದ ಉಂಟಾದ ನಷ್ಟವನ್ನು ಪರಿಗಣಿಸಿಕೊಂಡು ನಿರ್ಮಾಪಕರು ʼಇಂಡಿಯನ್ -3ʼ ಸಿನಿಮಾವನ್ನು ನೇರವಾಗಿ ಓಟಿಟಿಯಲ್ಲೇ ರಿಲೀಸ್ ಮಾಡುವ ಯೋಜನೆಯ ಬಗ್ಗೆ ಆಲೋಚನೆ ಮಾಡಿದ್ದಾರೆ ಎಂದು ʼಡೆಕ್ಕನ್ ಹೆರಾಲ್ಡ್ʼ ವರದಿ ಮಾಡಿದೆ.
ಈ ಬಗ್ಗೆ ಚಿತ್ರತಂಡದಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ನೆಟ್ ಫ್ಲಿಕ್ಸ್ ನಲ್ಲಿ ʼಇಂಡಿಯನ್ -3 ನೇರವಾಗಿ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಮಲ್ ಹಾಸನ್ ಮಣಿರತ್ನಂ ಅವರ ʼಥಗ್ ಲೈಫ್ʼ ಮತ್ತು KH 237 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಇನ್ನೊಂದೆಡೆ ಶಂಕರ್ ರಾಮ್ ಚರಣ್ ಅವರ ʼಗೇಮ್ ಚೇಂಜರ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್ ಆಕ್ರೋಶ
ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ
ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ
Vettaiyan Trailer: ಪಾಪಿಗಳ ಎನ್ಕೌಂಟರ್ ಮಾಡಲು ಖಾಕಿ ತೊಟ್ಟು ಬಂದ ʼತಲೈವಾʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್
ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್ ಠಾಣೆ!
Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.