Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
Team Udayavani, Sep 26, 2024, 4:59 PM IST
ಹೈದರಾಬಾದ್: ಟಾಲಿವುಡ್ ಸ್ಟಾರ್ ಪ್ರಭಾಸ್ (Prabhas) ʼಸಲಾರ್ʼ(Salaar: Part 1 – Ceasefire) ಹಾಗೂ ʼಕಲ್ಕಿʼ(Kalki 2898 AD) ಬಳಿಕ ಮತ್ತೊಮ್ಮೆ ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿದ್ದಾರೆ.
ಇತ್ತೀಚೆಗೆ ಹನು ರಾಘವಪುಡಿ (Hanu Raghavapudi) ನಿರ್ದೇಶನದ ʼಫೌಜಿʼ(Fauji) ಸಿನಿಮಾದ ಮುಹೂರ್ತದಲ್ಲಿ ಪ್ರಭಾಸ್ ಭಾಗಿಯಾಗಿದ್ದರು. ಪ್ರಭಾಸ್ ಮುಂದೆ ದೊಡ್ಡ ಸಿನಿಮಾಗಳಲ್ಲಿ ಬ್ಯುಸಿಯಾಗಲಿದ್ದಾರೆ.
ʼರಾಜಾಸಾಬ್ʼ (Rajasaab) ಬಳಿಕ ಪ್ರಭಾಸ್ ʼಅನಿಮಲ್ʼ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರ ʼಸ್ಪಿರಿಟ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: Ranveer Allahbadia: ಖ್ಯಾತ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಯೂಟ್ಯೂಬ್ ಖಾತೆ ಹ್ಯಾಕ್
ʼಸ್ಪಿರಿಟ್ʼ ಸೆಟ್ಟೇರುವ ಮುನ್ನವೇ ಸದ್ದು ಮಾಡುತ್ತಿದೆ. ಇತ್ತೀಚೆಗೆ ಈ ಸಿನಿಮಾದಲ್ಲಿ ಬಹುಭಾಷಾ ನಟಿ ತ್ರಿಷಾ ಕೃಷ್ಣನ್ (Trisha Krishnan) ಸಿನಿಮಾದಲ್ಲಿ ನಾಯಕಿಯಾಗಲಿದ್ದಾರೆ ಎಂದು ವರದಿಯಾಗಿತ್ತು.
ಇದೀಗ ʼಸ್ಪಿರಿಟ್ʼ ಪಾತ್ರವರ್ಗದ ಬಗ್ಗೆ ಮತ್ತೊಂದು ಅಪ್ಡೇಟ್ ಹೊರಬಿದ್ದಿದೆ. ಬಾಲಿವುಡ್ ದಂಪತಿ ಸೈಪ್ ಅಲಿಖಾನ್ (Saif Ali Khan) ಹಾಗೂ ಕರೀನಾ ಕಪೂರ್ ಖಾನ್ (Kareena Kapoor Khan) ಪವರ್ ಫುಲ್ ನೆಗೆಟಿವ್ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ವರದಿಯಾಗಿದೆ.
ಆದರೆ ಈ ಬಗ್ಗೆ ಸಿನಿಮಾ ತಂಡದಿಂದ ಇನ್ನೂ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯ ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದೆ.
ಪಾತ್ರ ವರ್ಗದ ವಿಚಾರಕ್ಕೆ ಬಂದರೆ ತ್ರಿಷಾ, ಸೈಫ್, ಕರೀನಾ ಮಾತ್ರವಲ್ಲದೆ ಭಾರತ ಸೇರಿದಂತೆ ಪ್ಯಾನ್ ಏಷ್ಯಾದಲ್ಲಿ ರಿಲೀಸ್ ಆಗಲಿರುವ ʼಸ್ಪಿರಿಟ್ʼ ನಲ್ಲಿ ಖ್ಯಾತ ಕೊರಿಯನ್ ನಟ ಮಾ ಡಾಂಗ್ ಸಿಯೋಕ್ (Korean actor Ma Dong- Seok) ಅವರು ವಿಲನ್ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ʼಸ್ಪಿರಿಟ್ʼ ನಲ್ಲಿ ಪ್ರಭಾಸ್ ಡಬಲ್ ರೋಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕ ಹಾಗೂ ವಿಲನ್ ಆಗಿ ಪ್ರಭಾಸ್ ಅವರೇ ಬಣ್ಣ ಹಚ್ಚಲಿದ್ದಾರೆ. ಪೊಲೀಸ್ ಆಗಿ ನಾಯಕನ ಪಾತ್ರವನ್ನು ಮಾಡಲಿದ್ದು, ನೆಗೆಟಿವ್ ಪಾತ್ರದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ ಎಂದು ವರದಿಯಾಗಿದೆ.
ಸೈಫ್ ಅಲಿಖಾನ್ ʼದೇವರʼ ಸಿನಿಮಾದ ಮೂಲಕ ಸೌತ್ ಸಿನಿರಂಗಕ್ಕೆ ಎಂಟ್ರಿ ಆಗಿದ್ದಾರೆ. ಇತ್ತ ಕರೀನಾ ಕಪೂರ್ ಯಶ್ ಅವರ ʼಟಾಕ್ಸಿಕ್ʼ ಸಿನಿಮಾದಲ್ಲಿ ನಟಿಸುತ್ತಾರೆ ಎನ್ನಲಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ. ಇತ್ತೀಚೆಗೆ ಅವರ ʼಬಕಿಂಗ್ಹ್ಯಾಮ್ ಮರ್ಡರ್ಸ್ʼ ಚಿತ್ರ ತೆರೆಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ
ಶಂಕರ್ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್
Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್
Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ದೂರು ದಾಖಲು
Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.