Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಆರೋಪ
Team Udayavani, Sep 22, 2024, 4:56 PM IST
ಚೆನ್ನೈ: ಮನೆ ಕೆಲಸದವನ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆರೋಪದ ಮೇಲೆ ಬಹುಭಾಷಾ ನಟಿ ಪಾರ್ವತಿ ನಾಯರ್ (Parvati Nair) ಸೇರಿದಂತೆ 7 ಮಂದಿ ವಿರುದ್ಧ ದೂರು ದಾಖಲಾಗಿದೆ.
ಏನಿದು ಘಟನೆ?:
2022ರಲ್ಲಿ ನಟಿ ಪಾರ್ವತಿ ಅವರ ಮನೆಯಲ್ಲಿ ಹಣ, ಚಿನ್ನಾಭರಣ ಕಳ್ಳತನವಾಗಿತ್ತು. ಈ ಸಂಬಂಧ ನಟಿ ತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸುಭಾಷ್ ಚಂದ್ರಬೋಸ್ ಎನ್ನುವಾತನ ಮೇಲೆ ತನಗೆ ಸಂಶಯವಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು.
ಅದೇ ಸಮಯದಲ್ಲಿ ಸುಭಾಷ್ ಚಂದ್ರಬೋಸ್ ಅವರು ನಟಿ ಹಾಗೂ ಅವರ ಸ್ನೇಹಿತರು ತನ್ನ ಮೇಲೆ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ಎಂದು ಪೊಲೀಸರ ಬಳಿ ಹೇಳಿ ದೂರು ದಾಖಲಿಸಿದ್ದರು. ಆದರೆ ಆ ಸಮಯದಲ್ಲಿ ಪೊಲೀಸರು ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ.
ಇದೀಗ ಪ್ರಕರಣ ಸಂಬಂಧ ಸುಭಾಸ್ ಮುಂದೆ ಸೈದಾಪೇಟೆ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ. ನಿರ್ಮಾಪಕ ರಾಜೇಶ್, ನಟಿ ಪಾರ್ವತಿ ಸೇರಿದಂತೆ ಒಟ್ಟು 7 ಮಂದಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಪಾರ್ವತಿ ಹಾಗೂ ಅವರ ಸ್ನೇಹಿತರು ನನ್ನ ಮೇಲೆ ಕಳ್ಳತನ ಆರೋಪವನ್ನು ಮಾಡಿ, ಒಂದು ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಸುಭಾಷ್ ಹೇಳಿದ್ದಾರೆ.
ಸದ್ಯ ಈ ಬಗ್ಗೆ ದೂರು ದಾಖಲಾಗಿ ತನಿಖೆ ಮುಂದುವರೆದಿದೆ.
ಬಹುಭಾಷೆಯಲ್ಲಿ ನಟಿಸಿರುವ ಪಾರ್ವತಿ ಇತ್ತೀಚೆಗೆ ವಿಜಯ್ ಅವರ ʼದಿ ಗೋಟ್ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಮಾಲಿವುಡ್ ಸೇರಿದಂತೆ ಕನ್ನಡದ ʼವಾಸ್ಕೋಡಿಗಾಮʼ ಎನ್ನುವ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್ ವಾರ್ನರ್?- ಫೋಟೋ ವೈರಲ್
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Manipal: ಪಾರ್ಕಿಂಗ್ ತಾಣವಾಗುತ್ತಿರುವ ಬಸ್ ನಿಲ್ದಾಣಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.