Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ


Team Udayavani, Sep 19, 2024, 12:39 PM IST

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

ಬೆಂಗಳೂರು/ಚೆನ್ನೈ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಖ್ಯಾತ ನೃತ್ಯ ಸಂಯೋಜಕ (Choreographer) ಜಾನಿ ಮಾಸ್ಟರ್‌ (Jani Master) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ (ಶೇಕ್ ಜಾನಿ ಬಾಷಾ) ಮೇಲೆ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಳು. ಈ ಸಂಬಂಧ ಸೈಬರಾಬಾದ್‌ನ ನರಸಿಂಗಿ ಪೊಲೀಸರು ಬುಧವಾರ (ಸೆ.18ರಂದು) ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ ಏನಿದೆ?:

ದೂರು ನೀಡಿದ ಯುವತಿ ಕೂಡ ನೃತ್ಯ ಸಂಯೋಜಕಿಯಾಗಿದ್ದು, ಕಳೆದ ಕೆಲ ತಿಂಗಳಿನಿಂದ ಈಕೆ ಜಾನಿ ಮಾಸ್ಟರ್‌ ಜೊತೆಗೆ ಕೆಲಸ ಮಾಡುತ್ತಿದ್ದಳು. ಜಾನಿ ಮಾಸ್ಟರ್‌ ಹೊರಾಂಗಣ ಚಿತ್ರೀಕರಣದ ವೇಳೆ ತನ್ನ ಮೇಲೆ ಹಲ್ಲೆ ನಡೆಸಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ.

ಚೆನ್ನೈ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಚಿತ್ರೀಕರಣದ ಸಮಯದಲ್ಲಿ ಜಾನಿ ಮಾಸ್ಟರ್ ತನ್ನ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅವರು ನಾರ್ಸಿಂಗಿಯಲ್ಲಿರುವ ತನ್ನ ನಿವಾಸದಲ್ಲಿ ಹಲವಾರು ಬಾರಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರೆ ಹೇಳಿದ್ದಾಳೆ.

ಪೊಲೀಸರು ದೂರು ದಾಖಲಿಸಿಕೊಂಡು ಜಾನಿ ಮಾಸ್ಟರ್‌ ಅವರ ಬಂಧನಕ್ಕೆ ಬಲೆ ಬೀಸಿದ್ದರು. ಜಾನಿ ಮಾಸ್ಟರ್‌ ಅವರ ಫೋನ್‌ ಸ್ವಿಚ್ಡ್‌ ಆಫ್‌ ಆಗಿತ್ತು. ತಲೆ ಮರೆಸಿಕೊಂಡಿದ್ದ ಅವರನ್ನು  ವಿಶೇಷ ಕಾರ್ಯಾಚರಣೆ ತಂಡದ ಪೊಲೀಸರು ಗುರುವಾರ ಮುಂಜಾನೆ(ಸೆ.19ರಂದು) ಗೋವಾದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ವಿವಾದ ಇದೇ ಮೊದಲಲ್ಲ: ಜಾನಿ ವಿವಾದದಿಂದ ಸುದ್ದಿಯಾಗಿರುವುದು ಇದೇ ಮೊದಲಲ್ಲ. ಈ ಹಿಂದೆ ಜಾನಿ ಮಾಸ್ಟರ್‌ ವಿರುದ್ಧ ಆರೋಪಗಳು ಕೇಳಿ ಬಂದಿತ್ತು. ಈ ಹಿಂದೆ ಸತೀಶ್ ಎಂಬ ಡ್ಯಾನ್ಸರ್ ಜಾನಿ ಮಾಸ್ಟರ್ ವಿರುದ್ಧ ಕಿರುಕುಳದ ಆರೋಪ ಮಾಡಿ ದೂರು ದಾಖಲಿಸಿದ್ದರು. ಸಿನಿಮಾ ಚಿತ್ರೀಕರಣದಲ್ಲಿ ಕೆಲಸ ಸಿಗದಂತೆ ನೃತ್ಯ ನಿರ್ದೇಶಕರು ತಡೆಯುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು. ಆ ಬಳಿಕ ಜಾನಿ ಮಾಸ್ಟರ್ ಈ ಆರೋಪಗಳನ್ನು ತಳ್ಳಿಹಾಕಿದ್ದರು. ಇದಲ್ಲದೆ 2015 ರಲ್ಲಿ ಕಾಲೇಜಿನಲ್ಲಿ ನಡೆದ ಗಲಾಟೆಯಿಂದಾಗಿ 2019 ರಲ್ಲಿ ಜಾನಿ ಮಾಸ್ಟರ್‌ಗೆ ಹೈದರಾಬಾದ್‌ನ ಸ್ಥಳೀಯ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತು.

ಜಾನಿ ಮಾಸ್ಟರ್‌ ʼರೌಡಿ ಬೇಬಿʼ ಮತ್ತು ಇತ್ತೀಚೆಗೆ ʼಸ್ತ್ರೀ-2ʼ ಚಿತ್ರ ʼಆಯಿ ನಾಯ್ʼ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.