GOAT: 3 ದಿನದಲ್ಲಿ 100 ಕೋಟಿ ಗಳಿಕೆ ಕಂಡ ʼಗೋಟ್ʼ; ತಮಿಳು ವರ್ಷನ್ನಿಂದಲೇ ಹೆಚ್ಚು ಗಳಿಕೆ
Team Udayavani, Sep 8, 2024, 11:40 AM IST
ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಅವರ ʼಗೋಟ್ʼ (GOAT Movie) ರಿಲೀಸ್ ಆದ ಮೂರೇ ದಿನದಲ್ಲಿ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ.
ಸೆ.5ರಂದು ಅಂದರೆ ಆರಂಭಿಕ ದಿನದಲ್ಲಿ ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ಕೇಳಿಬಂದಿತ್ತು. ಇದಾದ ಬಳಿಕ ಎರಡನೇ ದಿನ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದಿತ್ತು. ಗಣೇಶ ಹಬ್ಬದ ರಜಾದಿನದಂದು(ಸೆ.7ರಂದು) ಸಿನಿಮಾ ಗಳಿಕೆಯಲ್ಲಿ ಮತ್ತೆ ಸದ್ದು ಮಾಡಿದೆ.
ಶನಿವಾರ ʼಗೋಟ್ʼ ಭಾರತದಲ್ಲಿ 33 ಕೋಟಿ ರೂ. ಗಳಿಕೆ ಕಂಡಿದೆ. ಇದರಲ್ಲಿ ತಮಿಳು ಆವೃತ್ತಿಯಿಂದ 29.1 ಕೋಟಿ ರೂ. ಬಂದಿದ್ದು, ಹಿಂದಿ ಆವೃತ್ತಿಯಿಂದ ಸರಿಸುಮಾರು ರೂ 2.15 ಕೋಟಿ ರೂ.ಬಂದಿದೆ. ಮತ್ತು ತೆಲುಗು ಆವೃತ್ತಿಯಿಂದ ರೂ 1.75 ಕೋಟಿ ರೂ. ಸಂಗ್ರಹವಾಗಿದೆ. ಆ ಮೂಲಕ ರಿಲೀಸ್ ಆದ ಮೂರೇ ದಿನದಲ್ಲಿ ಭಾರತದಲ್ಲಿ 102.5 ಕೋಟಿ ರೂ.ಗಳಿಕೆ ಕಂಡಿದೆ. ಇದರಲ್ಲಿ 91 ಕೋಟಿ ರೂ. ಬರೀ ತಮಿಳು ವರ್ಷನ್ ನಿಂದಲೇ ಬಂದಿದೆ.
ಶುಕ್ರವಾರದ ವೇಳೆಗೆ ಚಿತ್ರವು ಜಾಗತಿಕವಾಗಿ 155 ಕೋಟಿ ರೂಪಾಯಿ ಗಳಿಸಿದೆ. ವಾರಾಂತ್ಯದ ಅಂತ್ಯದ ವೇಳೆಗೆ 200 ಕೋಟಿ ಮೈಲಿಗಲ್ಲನ್ನು ದಾಟುವ ನಿರೀಕ್ಷೆಯಿದೆ.
ದಳಪತಿ ವಿಜಯ್ ಚಿತ್ರದಲ್ಲಿ ತಂದೆ ಮತ್ತು ಅವರ ಮಗನಾಗಿ ದ್ವಿಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವು 2004ರ ಮಾಸ್ಕೋ ಮೆಟ್ರೋ ಬಾಂಬ್ ದಾಳಿಯನ್ನು ಆಧರಿಸಿದೆ ಎನ್ನಲಾಗಿದೆ. ವಿಜಯ್ ಅವರು ವಿಶೇಷ ಭಯೋತ್ಪಾದನಾ ನಿಗ್ರಹ ದಳದ (SATS) ಏಜೆಂಟ್ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ವೆಂಕಟ್ ಪ್ರಭು (Venkat Prabhu) ನಿರ್ದೇಶನದ ʼಗೋಟ್ʼನಲ್ಲಿ ವಿಜಯ್ ಜತೆ ಪ್ರಶಾಂತ್, ಪ್ರಭುದೇವ, ಅಜ್ಮಲ್ ಅಮೀರ್, ಮೋಹನ್, ಜಯರಾಮ್, ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ವೈಭವ್, ಯೋಗಿ ಬಾಬು, ಪ್ರೇಮ್ಗಿ ಅಮರೇನ್ ಮತ್ತು ಯುಗೇಂದ್ರನ್ ಮುಂತಾದವರು ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
OTT Release: ಚಿಯಾನ್ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.