HanuMan Movie: ರಾಮ ಮಂದಿರಕ್ಕೆ 2.66 ಕೋಟಿ ರೂ. ದೇಣಿಗೆ ಕೊಟ್ಟ ʼಹನುಮಾನ್ʼ ಚಿತ್ರತಂಡ
Team Udayavani, Jan 21, 2024, 4:35 PM IST
ಹೈದರಾಬಾದ್: ಟಾಲಿವುಡ್ ಸಿನಿರಂಗದಲ್ಲಿ ಭರ್ಜರಿ ಸದ್ದು ಮಾಡಿರುವ ʼಹನುಮಾನ್ʼ ಸಿನಿಮಾ 100 ಕೋಟಿ ಕ್ಲಬ್ ಸೇರಿದೆ. ಸಿನಿಮಾ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿದೆ.
ಅಯೋಧ್ಯೆಯ ರಾಮ ಮಂದಿರದ ಅದ್ಧೂರಿ ‘ಪ್ರಾಣ ಪ್ರತಿಷ್ಠಾ’ ಸಮಾರಂಭ ಸೋಮವಾರ(ಜ.22 ರಂದು) ಜರುಗಲಿದೆ. ಇದೇ ಸಂದರ್ಭದಲ್ಲಿ ರಾಮ ಮಂದಿರಕ್ಕೆ ʼಹನುಮಾನ್ʼ ಚಿತ್ರತಂಡ ಈ ಮೊದಲೇ ಹೇಳಿದಂತೆ ದೇಣಿಗೆಯನ್ನು ನೀಡಿದೆ.
ತೇಜ ಸಜ್ಜಾ ಅಭಿನಯದ ʼಹನುಮಾನ್ʼ ಸಿನಿಮಾಕ್ಕೆ ಎಲ್ಲೆಡೆಯಿಂದ ಪಾಸಿಟಿವ್ ರೆಸ್ಪಾನ್ಸ್ ಕೇಳಿ ಬರುತ್ತಿದೆ. ನಿರ್ದೇಶಕ ಪ್ರಶಾಂತ್ ವರ್ಮಾ ಅವರು ʼಹನುಮಾನ್ʼ ಚಿತ್ರತಂಡದಿಂದ ರಾಮ ಮಂದಿರಕ್ಕೆ ದೇಣಿಗೆ ನೀಡುವುದಾಗಿ ಈ ಹಿಂದೆ ಹೇಳಿದ್ದರು. ಅದರಂತೆ ಚಿತ್ರತಂಡ ಅಯೋಧ್ಯೆ ರಾಮ ಮಂದಿರಕ್ಕೆ 2.66 ಕೋಟಿ ರೂಪಾಯಿಯ ದೇಣಿಗೆಯನ್ನು ನೀಡಿದೆ.
ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಚಿತ್ರತಂಡ “ಅಯೋಧ್ಯೆ ರಾಮಮಂದಿರಕ್ಕೆ 2,66,41,055 ಮೊತ್ತದ ದೇಣಿಗೆ ನೀಡುವ ಮಹತ್ತರ ಕಾರ್ಯಕ್ಕೆ ಕೈಜೋಡಿಸಿರುವ 53,28,211 ಜನರಿಗೆ ಧನ್ಯವಾದಗಳು. ನೀವು ʼಹನುಮಾನ್ʼ ವೀಕ್ಷಿಸಿ ದೈವಿಕ ಅನುಭವ ಪಡೆಯುವ ಮೂಲಕ ಈ ಕಾರ್ಯಕ್ಕೆ ಜೊತೆಯಾಗಿದ್ದೀರಿ. ನಿಮ್ಮ ಟಕೆಟ್ ನ 5 ರೂ. ಅಯೋಧ್ಯೆ ರಾಮಮಂದಿರಕ್ಕೆ ಹೋಗುತ್ತದೆ ಈ ಐತಿಹಾಸಿಕ ಕ್ಷಣದ ಭಾಗವಾಗಿರುವುದಕ್ಕೆ ಮೈತ್ರಿ ವಿತರಣಾ ತಂಡ ಕೃತಜ್ಞವಾಗಿರುತ್ತದೆ” ಎಂದು ಟ್ವೀಟ್ ಮಾಡಿದೆ.
ಈ ಹಿಂದೆ ʼಹನುಮಾನ್ʼ ಚಿತ್ರತಂಡ ಚಿತ್ರದ ಮೊದಲ ದಿನದ ಕಲೆಕ್ಷನ್ನಿಂದ 14 ಲಕ್ಷ ರೂಪಾಯಿಗಳನ್ನು ದೇಣಿಗೆಯನ್ನು ರಾಮ ಮಂದಿರಕ್ಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್ ನಟ “ಕೀರಿಕ್ಕಡನ್ ಜೋಸ್” ವಿಧಿವಶ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Indian 3: ʼಇಂಡಿಯನ್ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?
Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್ ಆಕ್ರೋಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.