Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್ ವಾರ್ನರ್?- ಫೋಟೋ ವೈರಲ್
Team Udayavani, Sep 22, 2024, 3:51 PM IST
ಹೈದರಾಬಾದ್: ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್(Allu Arjun) ಅವರ ʼಪುಷ್ಪ-2ʼ (Pushpa 2: The Rule) ಬಗ್ಗೆ ದಿನ ಕಳೆದಂತೆ ಕ್ರೇಜ್ ಹೆಚ್ಚಾಗುತ್ತಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ʼಪುಷ್ಪ-2ʼ ರಿಲೀಸ್ ಆಗಿ ಓಟಿಟಿಯಲ್ಲೂ ರಿಲೀಸ್ ಆಗಬೇಕಿತ್ತು. ಆದರೆ ರಿಲೀಸ್ ಡೇಟ್ ಮುಂದೂಡಿಕೆ ಆದಾಗಿನಿಂದ ಸಿನಿಮಾದ ಮೇಲಿನ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.
ಇತ್ತೀಚೆಗೆ ʼಪುಷ್ಪ-2ʼ ಓಟಿಟಿ ರೈಟ್ಸ್ (OTT Rights) 270 ಕೋಟಿ ರೂಪಾಯಿಗಳಿಗೆ ನೆಟ್ ಫ್ಲಿಕ್ಸ್ ಖರೀದಿಸಿದೆ ಎಂದು ವರದಿ ಆಗಿತ್ತು.
ಐಪಿಎಲ್ನಿಂದ ಭಾರತೀಯರ ಮನಗೆದ್ದಿರುವ, ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ (David Warner) ʼಪುಷ್ಪ-2ʼ ನಲ್ಲಿ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ವದಂತಿಯೊಂದು ಟಾಲಿವುಡ್ನಲ್ಲಿ ಹಬ್ಬಿದೆ.
ಇತ್ತೀಚೆಗೆ ವಾರ್ನರ್ ಬಿಳಿ ಉಡುಪಿನಲ್ಲಿ ಗೋಲ್ಡನ್ ಗನ್ ಹಿಡಿದಿರುವ ಫೋಟೋ ವೈರಲ್ ಆದ ಬಳಿಕ ಈ ಸುದ್ದಿ ಹಬ್ಬಿದೆ. ಕೆಲವರು ವಾರ್ನರ್ ಅವರ ʼಪುಷ್ಪ-2ʼ ಲುಕ್ ಇದು ಎಂದು ಕಮೆಂಟ್ ಮಾಡಿದ್ದಾರೆ. ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.
ವಾರ್ನರ್ ಜಾಹೀರಾತುವೊಂದರಲ್ಲಿ ಕಾಣಿಸಿಕೊಂಡಾಗ ತೆಗೆದ ಫೋಟೋವಿದು ಎಂದು ಹೇಳಲಾಗುತ್ತಿದೆ.
ಡೇವಿಡ್ ವಾರ್ನರ್ ಟಾಲಿವುಡ್ ಸಿನಿಮಾಗಳ ಫ್ಯಾನ್ ಆಗಿದ್ದಾರೆ. ಅವರು ʼಪುಷ್ಪʼ ಹಾಡಿಗೆ ಲಿಪ್ ಸಿಂಕ್ ಮಾಡುವ ಟಿಕ್ ಟಾಕ್ ವಿಡಿಯೋವನ್ನು ಹಂಚಿಕೊಂಡಿದ್ದರು. ಆಗಾಗ ಇಂಡಿಯನ್ ಸಿನಿಮಾದ ಹಾಡಿನ ರೀಲ್ಸ್ ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.
ʼಪುಷ್ಪ-2ʼ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮುಂದೆ ಫಾಹದ್ ಫಾಸಿಲ್ ಅಬ್ಬರಿಸಲಿದ್ದಾರೆ. ಇನ್ನುಳಿದಂತೆ ರಶ್ಮಿಕಾ ಮಂದಣ್ಣ, ಧನಂಜಯ, ಜಗದೀಶ್ ಪ್ರತಾಪ್ ಬಂಡಾರಿ, ರಾವ್ ರಮೇಶ್, ಅಜಯ್, ಸುನಿಲ್, ಅನಸೂಯಾ ಭಾರದ್ವಾಜ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
ಡಿಸೆಂಬರ್ 6ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್ ಮಾಲೂ ಇದೆ!
Shirva: ಬಂಟಕಲ್ ತಾಂತ್ರಿಕ ಕಾಲೇಜು ಪದವಿ ಪ್ರದಾನ ಕಾರ್ಯಕ್ರಮ
Karkala: ವಿದ್ಯಾರ್ಥಿನಿ ರೂಪಿಸಿದ ವಿಜ್ಞಾನ ಮಾದರಿಗೆ ರಾಷ್ಟ್ರ ಪ್ರಶಸ್ತಿ ಗರಿ
Kundapura-ಬೈಂದೂರು ಹೆದ್ದಾರಿ: ಬೆಳಗದ ಬೀದಿ ದೀಪಗಳು
Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.