Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ
Team Udayavani, Sep 25, 2024, 12:36 PM IST
ಚೆನ್ನೈ: ಕಳೆದ ಕೆಲ ದಿನಗಳಿಂದ ಕಾಲಿವುಡ್ (Kollywood) ನಟ ಜಯಂ ರವಿ (Actor Jayam Ravi) ಹಾಗೂ ಆರತಿ (Aarti ) ಅವರ ವಿಚ್ಚೇದನ ವಿಚಾರ ವಿವಾದದಿಂದ ಸುದ್ದಿಯಾಗುತ್ತಿದೆ.
ಇತ್ತೀಚೆಗೆ ಆರತಿ ಜತೆಗಿನ ಸಂಬಂಧಕ್ಕೆ ವಿಚ್ಚೇದನ ಘೋಷಿಸುವ ಮೂಲಕ ತಮ್ಮ 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದರು. ಆದರೆ ವಿಚ್ಚೇದನ ಬಗ್ಗೆ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಪತ್ನಿ ಅರತಿ ತಮಗೆ ಈ ಬಗ್ಗೆ ಯಾವ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದ್ದರು.
ತಮ್ಮ ಗಮನಕ್ಕೆ ಬಾರದೆ ಅವರು ವಿಚ್ಚೇದನದ ವಿಚಾರವನ್ನು ಘೋಷಿಸಿದ್ದಾರೆ ಎಂದು ಆರತಿ ಹೇಳಿದ್ದರು. ಈ ಮಾತಿಗೆ ಜಯಂ ರವಿ ಅವರು ಈ ಬಗ್ಗೆ ಅರತಿಗೆ ತಾನು ಎರಡು ನೋಟಿಸ್ ನೀಡಿದ್ದೆ ಎಂದು ಹೇಳಿದ್ದರು. ಇಬ್ಬರು ವಿಚ್ಚೇದನ ವಿಚಾರವಾಗಿ ಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪರಸ್ಪರ ಒಪ್ಪಿಗೆಯಿಂದಲೇ ವಿಚ್ಚೇದನಕ್ಕೆ ಮುಂದಾಗಿದ್ದೇವೆ ಎಂದು ಜಯಂ ಹೇಳಿದ್ದರು.
ಇದಲ್ಲದೆ ಆರತಿ ಜಯಂ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ನಿಯಂತ್ರಣ ಮಾಡುತ್ತಿದ್ದರು ಎನ್ನಲಾಗಿದೆ. ಮೊನ್ನೆ ಮೊನ್ನೆಯಷ್ಟೇ ಜಯಂ ತನ್ನ ಇನ್ಸ್ಟಾ ಖಾತೆಯನ್ನು ಅವರಿಂದ ಪಡೆದುಕೊಂಡಿದ್ದರು.
ಈ ನಡುವೆ ಗಾಯಕಿಯೊಬ್ಬರ ಜತೆ ಜಯಂ ರವಿ ಆತ್ಮೀಯವಾಗಿದ್ದು, ಅವರಿಂದಲೇ ಈ ವಿಚ್ಚೇದನ ನಡೆದಿದೆ ಎನ್ನುವ ಮಾತು ಕೂಡ ಹರಿದಾಡಿತ್ತು. ಆದರೆ ಈ ಬಗ್ಗೆ ಜಯಂ ಆಕೆ ನನ್ನ ಸ್ನೇಹಿತ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದರು.
ಇದೀಗ ಜಯಂ ರವಿಯನ್ನು ಅವರ ಮಾಜಿ ಪತ್ನಿ ಆರತಿ ರವಿ ಅವರ ಮನೆಯಿಂದ ಹೊರ ಹಾಕಿದ್ದಾರೆ. ಈ ಕಾರಣದಿಂದ ಚೆನ್ನೈನ ಇಸಿಆರ್ ರಸ್ತೆಯಲ್ಲಿರುವ ಆರತಿ ಅವರ ಮನೆಯಲ್ಲಿರುವ ತನ್ನ ವಸ್ತುಗಳನ್ನು ವಾಪಸ್ ಕೊಡಿಸುವಂತೆ ಜಯಂ ಪೊಲೀಸರ ಮೊರೆಹೋಗಿದ್ದಾರೆ ಎಂದು ವರದಿಯಾಗಿದೆ.
ಆರತಿ ಮನೆಯಲ್ಲಿ ಜಯಂರವಿ ಅವರ ಚಿನ್ನಾಭರಣ, ಪಾಸ್ಪೋರ್ಟ್, ಕಾರ್ ಕೀ ಸೇರಿದಂತೆ ಇತರೆ ವಸ್ತುಗಳಿವೆ ಅದನ್ನು ವಾಪಾಸ್ ಕೊಡಿಸುವಂತೆ ಅಡ್ಯಾರ್ ಪೊಲೀಸರ ಬಳಿ ದೂರು ನೀಡಿ ನಟ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.
ನನಗೆ ನನ್ನ ಮಕ್ಕಳು ಮಕ್ಕಳಾದ ಆರವ್ ಮತ್ತು ಅಯಾನ್ ಬೇಕು. ಇದಕ್ಕಾಗಿ ನಾನು ಎಷ್ಟು ವರ್ಷ ಬೇಕಾದರೂ ಕಾನೂನು ಹೋರಾಟ ಮಾಡುತ್ತೇನೆ ಎಂದು ಜಯಂ ರವಿ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.
ಜಯಂ ರವಿ – ಆರತಿ ಜೂನ್ 2009 ರಲ್ಲಿ ವಿವಾಹವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್ ಬಂಧಿಸಿದ ಪೊಲೀಸರು
Devara: ಅಡ್ವಾನ್ಸ್ ಬುಕಿಂಗ್ನಲ್ಲೇ ಕೋಟಿ- ಕೋಟಿ ಗಳಿಸಿದ ʼದೇವರʼ; ಎಲ್ಲಿ ಎಷ್ಟು ಗಳಿಕೆ?
Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್ ಇವೆಂಟ್ ರದ್ದು
Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್ ಚಿರಂಜೀವಿ ಹೆಸರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
“ದೇಶದ ಯಾವುದೇ ಭಾಗವನ್ನು ಪಾಕ್ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ?
Puttur: ಟ್ರೀ ಪಾರ್ಕ್ ನಿರ್ಲಕ್ಷ್ಯಕ್ಕೆ ದುಡ್ಡಿನ ಕೊರತೆ ನೆಪ
Chikkamagaluru: ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಗುದ್ದಿದ ಬಸ್; ವಿದ್ಯಾರ್ಥಿಗಳಿಗೆ ಗಾಯ
Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ
Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.