

Team Udayavani, Jan 31, 2024, 1:11 PM IST
ಮುಂಬಯಿ: ಕಿಂಗ್ ಖಾನ್ ಶಾರುಖ್ , ಕನ್ನಡದ ರಾಕಿಂಗ್ ಸ್ಟಾರ್ ಯಶ್ ಇಬ್ಬರಿಗೂ ಪ್ರತ್ಯೇಕವಾಗಿ ದೊಡ್ಡಮಟ್ಟದ ಫ್ಯಾನ್ ಫಾಲೋಯಿಂಗ್ ಇದೆ. ಇಬ್ಬರೂ ಅವರವರ ಸಿನಿವಲಯದಲ್ಲಿ ಮಾತ್ರ ಮಿಂಚದೆ, ಇತ್ತೀಚಿಗಿನ ವರ್ಷಗಳಲ್ಲಿ ಪ್ಯಾನ್ ಇಂಡಿಯಾದಲ್ಲಿ ಮಿಂಚಿದ್ದಾರೆ.
ಒಂದು ವೇಳೆ ಈ ಇಬ್ಬರು ಸ್ಟಾರ್ ಗಳು ಒಂದೇ ಸಿನಿಮಾದಲ್ಲಿ ನಟಿಸಿದರೆ ಹೇಗಿರುತ್ತದೆ?.. ಹೀಗೊಂದು ಮಾತು ಸಿನಿವಲಯದಲ್ಲಿ ಹರಿದಾಡುತ್ತಿದೆ. ರಾಕಿಭಾಯ್ ಯಶ್ ಬಿಟೌನ್ ಕಾಲಿಡಲಿದ್ದಾರೆ ಎನ್ನುವ ವಿಚಾರ ಹೊಸತಲ್ಲ. ನಿತೀಶ್ ತಿವಾರಿ ಅವರ ʼರಾಮಾಯಣʼ ಸಿನಿಮಾದಲ್ಲಿ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ನಡುವೆ ಅವರು ಶಾರುಖ್ ಖಾನ್ ಅವರೊಂದಿಗೆ ನಟಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹಬ್ಬಿದೆ.
ಇದನ್ನೂ ಓದಿ: ಕಿಚ್ಚನ ಸಿನಿ ಜರ್ನಿಗೆ 28 ವರುಷದ ಹರುಷ.. ಪ್ರೀತಿ ಪ್ರೋತ್ಸಾಹಕ್ಕೆ ಧನ್ಯವಾದವೆಂದ ಬಾದ್ ಷಾ
ಕಿಂಗ್ ಶಾರುಖ್ ಖಾನ್ ಅವರೊಂದಿಗೆ ಕೆಲಸ ಮಾಡಲು ಯಶ್ ತಮ್ಮ ಆಸಕ್ತಿಯ ಬಗ್ಗೆ ಮಾತನಾಡಿದ್ದಾರೆ. ಸ್ಕ್ರಿಪ್ಟ್ ಪರಿಪೂರ್ಣವಾಗಿರಬೇಕು ಎನ್ನುವ ಷರತ್ತನ್ನು ಹಾಕಿದ್ದಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ʼಹಿಂದೂಸ್ತಾನ್ ಟೈಮ್ಸ್ʼ ವರದಿ ಮಾಡಿದೆ.
ಯಶ್ ಹಾಗೂ ಶಾರುಖ್ ಖಾನ್ ಜೊತೆಯಾಗಿ ನಟಿಸಲು ಒಪ್ಪಿದ್ದಾರೆ. ಆದರೆ ತಮ್ಮಅಪಾರ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಸಿನಿಮಾವಿರಬೇಕು. ಹಾಗಾಗಿ ಇಬ್ಬರು ಈ ಬಗ್ಗೆ ಆತುರದ ನಿರ್ಧಾರವನ್ನು ಕೈಗೊಳ್ಳದೆ ನಿಧಾನವಾಗಿ ಯೋಚಿಸಲಿದ್ದಾರೆ. ಇದು ಉತ್ಸಾಹದಿಂದ ಮಾಡಲಾದ ಯೋಜನೆಗಿಂತ ಉತ್ತಮವಾಗಿ ರೂಪಿಸಲ್ಪಟ್ಟ ಯೋಜನೆಯಾಗಬೇಕೆಂದು ಇಬ್ಬರು ಬಯಸುತ್ತಾರೆ ಎಂದು ಮೂಲವೊಂದು ಹೇಳಿರುವುದಾಗಿ ವರದಿ ತಿಳಿಸಿದೆ.
ಯಶ್ ಆ್ಯಕ್ಷನ್ ಚಿತ್ರಕ್ಕಾಗಿ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ನೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳೂ ಇವೆ. ಯಶ್ ಆರಂಭಿಕವಾಗಿ ಸ್ಕ್ರಿಪ್ಟ್ ನ್ನು ಇಷ್ಟಪಟ್ಟಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಸ್ಪಷ್ಟನೆ ಸಿಗಲಿದೆ.
ಸದ್ಯ ಯಶ್ ಅವರು ಗೀತು ಮೋಹನ್ ಅವರ ʼಟಾಕ್ಸಿಕ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ʼಡಂಕಿʼ ಬಳಿಕ ಮುಂದಿನ ಸಿನಿಮಾವನು ಅನೌನ್ಸ್ ಮಾಡಿಲ್ಲ.
ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ
Tollywood: ಅಲ್ಲು ಅರ್ಜುನ್ಗೆ ಅಟ್ಲಿ ಆ್ಯಕ್ಷನ್ ಕಟ್: ಶ್ರೀದೇವಿ ಪುತ್ರಿ ನಾಯಕಿ?
Tollywood: ರಾತ್ರೋರಾತ್ರಿ ಖ್ಯಾತ ಟಾಲಿವುಡ್ ನಟ ಪೊಲೀಸ್ ವಶಕ್ಕೆ
Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್ ಹಿಟ್ ಕಂಡ ಶ್ರೀವಲ್ಲಿ
Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.