Mollywood: ನಟ ರಿಯಾಜ್ ಫೋನ್‌ ಮಾಡಿ ಲೈಂಗಿಕ ಆಸಕ್ತಿ ಬಗ್ಗೆ ಮಾತನಾಡಿದ್ದರು.. ನಟಿಯ ಆರೋಪ

"ನನ್ನ ಜತೆ ಮಲಗು ಎಂದ.." ಖ್ಯಾತ ನಟನ ವಿರುದ್ಧ ನಟಿ ಆರೋಪ

Team Udayavani, Aug 26, 2024, 10:49 AM IST

2

ಕೊಚ್ಚಿ: ಮಾಲಿವುಡ್‌(Mollywood) ಸಿನಿಮಾರಂಗದದಲ್ಲಿ ಕಳೆದ ಕೆಲ ದಿನಗಳಿಂದ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬರುತ್ತಿದೆ. ಇದೀಗ ಮತ್ತೊಬ್ಬ ನಟನ ವಿರುದ್ಧವೂ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ.

ಮಾಲಿವುಡ್‌ ನಿರ್ದೇಶಕ ರಂಜಿತ್‌ ಹಾಗೂ ನಟ ಸಿದ್ದೀಕ್‌ ವಿರುದ್ಧ ನಟಿಯರು ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿರುವ ಸುದ್ದಿ ಚರ್ಚೆಯಲ್ಲಿರುವಾಗಲೇ ಇದೀಗ ಕಾಲಿವುಡ್‌ – ಮಾಲಿವುಡ್‌ ನಟ ರಿಯಾಜ್ ಖಾನ್ (Actor Riyaz Khan) ವಿರುದ್ಧ ಇದೇ ರೀತಿಯ ಆರೋಪ ಕೇಳಿಬಂದಿದೆ.

ಮಲಯಾಳಂ ನಟಿಯೊಬ್ಬರು ಪ್ರಾದೇಶಿಕ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ನಟ ರಿಯಾಜ್‌ ಫೋನ್‌ ಸಂಭಾಷಣೆಯಲ್ಲಿ ಅಸಭ್ಯವಾಗಿ ಮಾತನಾಡಿದ ಬಗ್ಗೆ ಹೇಳಿದ್ದಾರೆ.

“ಮಧ್ಯರಾತ್ರಿ ನಟನಿಂದ‌ (ರಿಯಾಜ್‌ ಖಾನ್) ಫೋನ್ ಕರೆ ಬಂದಿತ್ತು. ಛಾಯಾಗ್ರಾಹಕರೊಬ್ಬರು ನನ್ನ ಒಪ್ಪಿಗೆಯಿಲ್ಲದೆ ನನ್ನ ಫೋನ್ ಸಂಖ್ಯೆಯನ್ನು ಅವರೊಂದಿಗೆ ಹಂಚಿಕೊಂಡಿದ್ದರು. ಅವರು ನನ್ನ ಸ್ಟಿಲ್ಸ್ ನೋಡಿ, ನನ್ನ ನಂಬರ್ ತೆಗೆದುಕೊಂಡು ನನಗೆ ಕರೆ ಮಾಡಿದರು. ಆ ವ್ಯಕ್ತಿ ಲೈಂಗಿಕತೆ ಮತ್ತು ಅವರ ಲೈಂಗಿಕ ಆಸಕ್ತಿಗಳ ಬಗ್ಗೆ ಮಾತನಾಡಲು ಪ್ರಾರಂಭಿಸಿದರು. ನನಗೆ ಅವನೊಂದಿಗೆ ಮಲಗಲು ಆಸಕ್ತಿ ಇದೆಯೇ ಎಂದು ಕೇಳಿದರು. ನನಗೆ ಯಾವ ಭಂಗಿಯಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಇಷ್ಟವೆಂದು ಕೇಳಿದರು. ಆಗ ನನಗೆ 20 ವರ್ಷ. ಫೋನ್ ಮಾಡಿದ ನಂತರ ನಾನು ತುಂಬಾ ಆಘಾತಕ್ಕೊಳಗಾಗಿದ್ದೆ. ಕರೆಯ ಸಮಯದಲ್ಲಿ ನನಗೆ ಒಂದು ಮಾತನ್ನೂ ಮಾತನಾಡಲು ಸಾಧ್ಯವಾಗಲಿಲ್ಲ” ಎಂದು ಘಟನೆ ಬಗ್ಗೆ ಹೇಳಿದರು.

“ನನಗೆ ಯಾವುದೇ ಆಸಕ್ತಿಯಿಲ್ಲ ಎಂದು ಅರ್ಥಮಾಡಿಕೊಂಡ ನಂತರ, ಆ ವ್ಯಕ್ತಿ ಮುಂದಿನ ಒಂಬತ್ತು ದಿನಗಳವರೆಗೆ ಕೊಚ್ಚಿಯಲ್ಲಿ ಇರುವುದಾಗಿ ಹೇಳಿ, ನಾನು ಅವರಿಗೆ ಕೆಲವು ಹುಡುಗಿಯರನ್ನು ವ್ಯವಸ್ಥೆ ಮಾಡಬಹುದೇ ಎಂದು ಕೇಳಿದರು. ಇದನ್ನು ಕೇಳಿ ನನಗೆ ಆಘಾತಕ್ಕೆ ಒಳಗಾಗಿದ್ದೆ” ಎಂದು ನಟಿ ಹೇಳಿದ್ದಾರೆ.

ನಟಿಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದ ಹಿನ್ನೆಲೆ ಮಲಯಾಳಂ ನಿರ್ದೇಶಕ ರಂಜಿತ್ (Malayalam director Ranjith) ರಾಜ್ಯ ಸರ್ಕಾರ ನಡೆಸುವ ಕೇರಳ ಚಲಚಿತ್ರ (Kerala Chalachitra Academy) ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ (ಆ.25ರಂದು) ರಾಜೀನಾಮೆ ಸಲ್ಲಿಸಿದ್ದಾರೆ.

ಇತ್ತ ಮತ್ತೊಂದು ಲೈಂಗಿಕ ಕಿರುಕುಳ ಆರೋಪವನ್ನು ಎದುರಿಸುತ್ತಿರುವ ಹಿರಿಯ ನಟ ಸಿದ್ದೀಕ್ (Actor Siddique) ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (Malayalam Movie Artistes) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ತನಿಖೆಗೆ ಎಸ್‌ಐಟಿ ರಚನೆ: ಸಿಎಂ ಪಿಣರಾಯಿ ಚಿತ್ರ ನಟಿಯರು ತಮ್ಮ ವಿರುದ್ಧ ನಡೆದಿದ್ದ ಲೈಂಗಿಕ ದೌರ್ಜನ್ಯದ ವಿವರಗಳನ್ನು ಬಹಿರಂಗಪಡಿಸುತ್ತಲೇ ಅದರ ಬಗ್ಗೆ ತನಿಖೆ ನಡೆಸಲು ಕೇರಳ ಸರಕಾರ ಎಸ್‌ಐಟಿ ರಚಿಸಿದೆ.

ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ರವಿವಾರ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಿರಿಯ ಐಪಿಎಸ್‌ ಅಧಿಕಾರಿ ಸ್ಪರ್ಜನ್‌ ಕುಮಾರ್‌ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಒಟ್ಟು 7 ಮಂದಿಯ ಈ ಸಮಿತಿಯಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿಗಳೂ ಇರಲಿದ್ದಾರೆ ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಮಲಯಾಳಂ ಸಿನಿಮಾ ಉದ್ಯಮದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳನ್ನು ತಡೆಯುವ ಹೇಮಾ ಸಮಿತಿ ವರದಿ ಬಿಡುಗಡೆ ಬೆನ್ನಲ್ಲೇ ಈ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರವನ್ನು ಮುಜಗರಕ್ಕೀಡು ಮಾಡಿದೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

Poonam Kaur:  ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.