Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ
Team Udayavani, Sep 7, 2024, 8:13 PM IST
ಹೈದರಾಬಾದ್: ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್(CISF) ಸಿಬ್ಬಂದಿಗಳೊಂದಿಗೆ ವಾಗ್ವಾದಕ್ಕೀಳಿದ ಆರೋಪದ ಮೇಲೆ ಮಾಲಿವುಡ್ ನಟ ವಿನಾಯಗನ್ (Actor Vinayakan ) ಅವರನ್ನು ಶನಿವಾರ (ಸೆ.7ರಂದು) ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಕೊಚ್ಚಿಯಿಂದ ಗೋವಾಗೆ ಪ್ರಯಾಣಿಸುವಾಗ ಈ ಘಟನೆ ಸಂಭವಿಸಿದ್ದು, ವಿನಾಯಗನ್ ಹೈದರಾಬಾದ್ ವಿಮಾನ ನಿಲ್ದಾಣ(Rajiv Gandhi International Airport) ದಲ್ಲಿ ಗೋವಾಗೆ ಸಂಪರ್ಕ ಕಲ್ಪಿಸುವ ವಿಮಾನಕ್ಕಾಗಿ ಕಾಯುತ್ತಿದ್ದಾಗ, ಸಿಐಎಸ್ಎಫ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದ್ದು, ಇದಾದ ಬಳಿಕ ವಾಗ್ವಾದ ದೈಹಿಕ ಹಲ್ಲೆವರೆಗೂ ಮುಂದುವರೆದಿದೆ ಎಂದು ವರದಿಯಾಗಿದೆ.
ಘಟನೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲದಿದ್ರೂ,ವಾಹಿನಿಯೊಂದರ ಜತೆ ಮಾತನಾಡಿರುವ ಅವರು, ಸಿಐಎಸ್ಎಫ್ ಸಿಬ್ಬಂದಿಗಳು ತನ್ನನ್ನು ಕೋಣೆಗೆ ಕರೆದುಕೊಂಡು ಥಳಿಸಿದ್ದಾರೆ. ತಾನು ತಪ್ಪು ಮಾಡಿಲ್ಲ, ನನ್ನನ್ನು ಯಾಕೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎನ್ನುವುದು ಗೊತ್ತಿಲ್ಲ. ಏನು ನಡೆದಿದೆ ಎನ್ನುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕೆಲ ಮೂಲಗಳ ಪ್ರಕಾರ, ವಿನಾಯಗನ್ ಮದ್ಯ ಸೇವಿಸಿದ್ದರು. ಸಿಬ್ಬಂದಿಗಳ ಜತೆ ವಾಗ್ವಾದಕ್ಕಿಳಿದಿದ್ದಾರೆ. ಇದಾದ ಬಳಿಕ ಮಾತು ಜಗಳದವರೆಗೂ ಮುಂದುವರೆದಿದೆ ಎನ್ನಲಾಗಿದ್ದು, ಆ ಬಳಿಕ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿ, ಕಸ್ಟಡಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.
ಈ ಹಿಂದೆಯೂ ಕುಡಿದು ಜೈಲಿನಲ್ಲಿ ರಂಪಾಟ ಮಾಡಿದ ಆರೋಪ ʼಜೈಲರ್ʼ ನಟ ವಿನಾಯಗನ್ ವಿರುದ್ಧ ಕೇಳಿಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
OTT Release: ಚಿಯಾನ್ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ
Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್ ಸಮಿತಿ: ನಾಗಲಕ್ಷ್ಮಿ ಚೌಧರಿ
Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್ ಖರ್ಗೆ
Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.