Coolie Movie: ರಜಿನಿಕಾಂತ್ ʼಕೂಲಿʼಯಲ್ಲಿ ʼಸೈಮನ್ʼ ಆದ ನಾಗಾರ್ಜುನ್; ಫಸ್ಟ್ ಲುಕ್ ಔಟ್
Team Udayavani, Aug 29, 2024, 6:43 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಅವರ ʼಕೂಲಿʼ (Coolie) ದಿನಕಳೆದಂತೆ ಒಂದೊಂದೇ ಅಪ್ಡೇಟ್ ಗಳನ್ನು ನೀಡುತ್ತಾ ಬರುತ್ತಿದೆ. ಆ ಮೂಲಕ ರಿಲೀಸ್ಗೂ ಸಖತ್ ಕ್ರೇಜ್ ಹೆಚ್ಚಿಸಿದೆ.
ಸೂಪರ್ ಸ್ಟಾರ್ ರಜಿನಿಕಾಂತ್ – ಲೋಕೇಶ್ ಕನಕರಾಜ್ ( Lokesh Kanagaraj) ಅವರ ʼಕೂಲಿʼ ಕಾಲಿವುಡ್ ನಲ್ಲಿ ಶೂಟಿಂಗ್ ಹಂತದಲ್ಲೇ ಜೋರಾಗಿ ಸದ್ದು ಮಾಡುತ್ತಿದೆ. ಪಾತ್ರ ವರ್ಗದ ಬಗ್ಗೆ ದಿನಕಳೆದಂತೆ ಲೇಟೆಸ್ಟ್ ಅಪ್ಡೇಟ್ ಗಳು ಹೊರಬೀಳುತ್ತಿದೆ.
ಇತ್ತೀಚೆಗೆ ಸ್ಯಾಂಡಲ್ವುಡ್ ಉಪೇಂದ್ರ(Upendra) ಅವರು ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸುದ್ದಿಯಾಗಿತ್ತು. ಇದಲ್ಲದೆ ಮಾಲಿವುಡ್ ನಟ ಸೌಬಿನ್ ಶಾಹಿರ್ (Soubin Shahir) ಅವರ ʼದಯಾಳ್ʼ ಪಾತ್ರದ ಲುಕ್ ರಿವೀಲ್ ಆಗಿತ್ತು.
ಇದೀಗ ತೆಲುಗು ನಟ ನಾಗಾರ್ಜುನ್ (Akkineni Nagarjuna) ಅವರು ʼಕೂಲಿʼಯ ಭಾಗವಾಗಿರುವುದು ಅಧಿಕೃತವಾಗಿದೆ. ಅವರ ಹುಟ್ಟುಹಬ್ಬದಂದೇ ಪಾತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.
ಕಾಲಿನ ಮೇಲೆ ಕಾಲು ಹಾಕಿಕೊಂಡು ಗೋಲ್ಡ್ ಕಲರ್ ವಾಚ್ ಧರಿಸಿರುವ ಕ್ಲಾಸ್ ಲುಕ್ ನಲ್ಲಿ ನಾಗಾರ್ಜುನ್ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ʼಸೈಮನ್ʼ ಎಂದು ಹೆಸರಿಡಲಾಗಿದೆ.
ಪೋಸ್ಟರ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿ ʼಕಿಂಗ್ʼ ನಾಗಾರ್ಜುನ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದೆ.
ಸಿನಿಮಾದಲ್ಲಿ ಸತ್ಯರಾಜ್ (Satyaraj) ಮತ್ತು ಶ್ರುತಿ ಹಾಸನ್ (Shruti Haasan) ಅವರು ಸಿನಿಮಾದ ಭಾಗವಾಗಲಿದ್ದಾರೆ ಎನ್ನುವುದು ಅಧಿಕೃತವಾಗಿದೆ.
ಸದ್ಯ ರಜಿನಿಕಾಂತ್ ಅವರ ʼವೆಟ್ಟೈಯನ್ ʼ ಅಕ್ಟೋಬರ್ 10ರಂದು ರಿಲೀಸ್ ಆಗಲಿದೆ. ಈ ಸಿನಿಮಾದ ಬಳಿಕ ಅವರು ʼಕೂಲಿʼಯಲ್ಲಿ ತೊಡಗಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.