Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

ಪ್ರಕಾಶ್ ರಾಜ್ ಪಾಠ ಕಲಿಯಬೇಕು... ಪ್ರತಿಯೊಬ್ಬ ಹಿಂದೂ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು

Team Udayavani, Sep 25, 2024, 9:10 AM IST

1-PK-PK

ಅಮರಾವತಿ: ತಿರುಪತಿ ಲಡ್ಡು ಪ್ರಸಾದ ವಿಚಾರಕ್ಕೆ ಸಂಬಂಧಿಸಿ ಸಮರಕ್ಕಿಳಿದಿರುವ ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಮತ್ತು ನಟ ಪ್ರಕಾಶ್ ರಾಜ್ ಅವರ ನಡುವಿನ ಸಮರ ಮಂಗಳವಾರ(ಸೆ24)ಮತ್ತೆ ಮುಂದುವರಿದಿದೆ.

ಲಡ್ಡು ಪ್ರಸಾದದಲ್ಲಿ ಅಪವಿತ್ರತೆಯನ್ನು ತುಂಬುವ “ದುರುದ್ದೇಶಪೂರಿತ ಪ್ರಯತ್ನಗಳು” ಎಂದು ಹೇಳಿದ್ದರ ಬಗ್ಗೆ ಪ್ರಕಾಶ್ ರಾಜ್ ಪ್ರಶ್ನೆಗಳನ್ನು ಎತ್ತಿರುವುದನ್ನು ಸನಾತನ ಧರ್ಮದ ಮೇಲಿನ ದಾಳಿ ಎಂದು ಪವನ್ ಕಲ್ಯಾಣ್  ಕರೆದಿದ್ದಾರೆ. ಏತನ್ಮಧ್ಯೆ, ಪವನ್ ಕಲ್ಯಾಣ್ ಅವರು ಆತಂಕವನ್ನು ಹರಡುವ ಬದಲು ಈ ಬಗ್ಗೆ ತನಿಖೆ ನಡೆಸಲಿ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

“ನಾನು ಹಿಂದೂ ಧರ್ಮದ ಪಾವಿತ್ರ್ಯತೆ ಮತ್ತು ಆಹಾರ ಕಲಬೆರಕೆಯಂತಹ ವಿಷಯಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ವಿಷಯಗಳ ಬಗ್ಗೆ ನಾನೇಕೆ ಮಾತನಾಡಬಾರದು? ನಾನು ಪ್ರಕಾಶ್ ರಾಜ್ ಅವರನ್ನು ಗೌರವಿಸುತ್ತೇನೆ ಮತ್ತು ಜಾತ್ಯತೀತತೆಯ ವಿಷಯ ಬಂದಾಗ ಅದು ಪರಸ್ಪರ ಇರಬೇಕು, ನೀವು ನನ್ನನ್ನು ಏಕೆ ಟೀಕಿಸುತ್ತಿದ್ದೀರಿ ಎಂದು ನನಗೆ ಅರ್ಥವಾಗುತ್ತಿಲ್ಲ. ಸನಾತನ ಧರ್ಮದ ಮೇಲಿನ ದಾಳಿಯ ವಿರುದ್ಧ ನಾನು ಮಾತನಾಡಬಾರದೇ?” ಎಂದು ಪ್ರಕಾಶ್ ರಾಜ್ ಅವರನ್ನು ಪವನ್ ಕಲ್ಯಾಣ್ ಪ್ರಶ್ನಿಸಿದ್ದಾರೆ.

ಪ್ರಕಾಶ್ ರಾಜ್ “ಪಾಠ ಕಲಿಯಬೇಕು” ಚಿತ್ರರಂಗ ಮತ್ತು ಇತರರು ಈ ವಿಷಯವನ್ನು ಹಗುರಗೊಳಿಸಬಾರದು ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

“ನಾನು ಸನಾತನ ಧರ್ಮದ ಬಗ್ಗೆ ತುಂಬಾ ಗಂಭೀರವಾಗಿರುತ್ತೇನೆ. ಅನೇಕ ವಿಮರ್ಶಕರು ಅಯ್ಯಪ್ಪ ಮತ್ತು ಸರಸ್ವತಿ ದೇವಿಯನ್ನು ಗುರಿಯಾಗಿಸಿದ್ದಾರೆ. ಸನಾತನ ಧರ್ಮಕ್ಕೆ ಅತ್ಯಂತ ಮಹತ್ವವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಹಿಂದೂ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಇತರ ಧರ್ಮಗಳಲ್ಲಿ ಇದೇ ರೀತಿಯ ಸಮಸ್ಯೆಗಳು ಉದ್ಭವಿಸಿದರೆ, ವ್ಯಾಪಕ ಆಂದೋಲನ ನಡೆಸಲಾಗುತ್ತಿತ್ತು ” ಎಂದು ಪವನ್ ಕಲ್ಯಾಣ್ ತಿರುಗೇಟು ನೀಡಿದ್ದಾರೆ.

ಪ್ರಕಾಶ್ ರಾಜ್ ಎಕ್ಸ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿ “ಪ್ರೀತಿಯ ಪವನ್ ಕಲ್ಯಾಣ್ ಅವರೇ ನಾನು ನಿಮ್ಮ ಪ್ರೆಸ್ ಮೀಟ್ ನೋಡಿದೆ.ನಾನು ಹೇಳಿದ್ದು ಮತ್ತು ನೀವು ತಪ್ಪಾಗಿ ಅರ್ಥೈಸಿಕೊಂಡಿರುವುದು ಅಚ್ಚರಿ ತಂದಿದೆ.ನಾನು ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದೇನೆ. ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲು ಹಿಂತಿರುಗುತ್ತೇನೆ.ಅಷ್ಟರಲ್ಲಿ, ನೀವು ನನ್ನ ಪೋಸ್ಟ್ ಸರಿಯಾಗಿ ನೋಡಿ ಮತ್ತು ಅರ್ಥಮಾಡಿಕೊಳ್ಳಲು ಸಾಧ್ಯವಾದರೆ ನಾನು ನಿಮ್ಮನ್ನು ಪ್ರಶಂಸಿಸುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್‌ ಬಂಧಿಸಿದ ಪೊಲೀಸರು

088

Devara: ಅಡ್ವಾನ್ಸ್‌ ಬುಕಿಂಗ್‌ನಲ್ಲೇ ಕೋಟಿ- ಕೋಟಿ ಗಳಿಸಿದ ʼದೇವರʼ; ಎಲ್ಲಿ ಎಷ್ಟು ಗಳಿಕೆ?

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.