Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?


Team Udayavani, Oct 17, 2024, 2:33 PM IST

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

ಹೈದರಾಬಾದ್:‌ ಡಾರ್ಲಿಂಗ್‌ ಪ್ರಭಾಸ್‌ (Prabhas) ನಿರ್ದೇಶಕ ಎಸ್‌ಎಸ್‌ ರಾಜಮೌಳಿ (SS Rajamouli) ಕಾಂಬಿನೇಷನ್‌ನಲ್ಲಿ ಬಂದಿದ್ದ ʼಬಾಹುಬಲಿʼ (Baahubali) ವಿಶ್ವ ಚಿತ್ರರಂಗವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ.

ʼಬಾಹುಬಲಿʼ ಸಿನಿಮಾದ ಎರಡೂ ಸರಣಿ ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಸಾವಿರ ಕೋಟಿಗೂ ಅಧಿಕ ಕಲೆಕ್ಷನ್‌ ಮಾಡುವುದರ ಜತೆಗೆ ಭಾರತೀಯ ಸಿನಿಮಾರಂಗದಲ್ಲಿ ಒಂದು ಹೊಸ ಆಯಾಮವನ್ನು ಸೃಷ್ಟಿಸಿತ್ತು.

ಅದ್ಧೂರಿ ಮೇಕಿಂಗ್‌, ಪೌರಾಣಿಕ ಕಥೆ, ಚಿತ್ರಕಥೆ, ಅಭಿನಯ, ವಿಎಫ್‌ ಎಕ್ಸ್‌, ಛಾಯಗ್ರಹಣ ಹೀಗೆ ಎಲ್ಲಾ ವಿಭಾಗದಲ್ಲೂ ʼಬಾಹುಬಲಿʼ ದಿ ಬೆಸ್ಟ್‌ ಎನ್ನುವ ಶ್ಲಾಘನೆಯನ್ನು ಪಡೆದುಕೊಂಡಿತ್ತು. ʼಬಾಹುಬಲಿʼ ಬಳಿಕ ರಾಜಮೌಳಿ ಅದೇ ರೀತಿಯ ಖ್ಯಾತಿ ಹಾಗೂ ಯಶಸ್ಸನ್ನು ʼಆರ್‌ ಆರ್‌ ಆರ್‌ʼ ಮೂಲಕ ಗಳಿಸಿದ್ದರು.

ʼಬಾಹುಬಲಿʼ ಸಿನಿಮಾ ಮೂರನೇ ಭಾಗವಾಗಿ ತೆರೆಗೆ ಬರುತ್ತದೆ ಎನ್ನುವ ಮಾತು ಪಾರ್ಟ್‌ -2 ಬಳಿಕ ಆರಂಭದಲ್ಲಿ ಕೇಳಿ ಬಂದಿತ್ತು. ಆದರೆ ʼಬಾಹುಬಲಿ -3ʼ ಬರುವುದಿಲ್ಲ. ಪಾರ್ಟ್‌ -2ನಲ್ಲೇ ಇದರ ಕಥೆ ಮುಗಿದಿದೆ ಎಂದು 2017ರಲ್ಲೇ ಹಿರಿಯ ಚಿತ್ರಕಥೆಗಾರ ಕೆ.ವಿ.ವಿಜಯೇಂದ್ರ ಪ್ರಸಾದ್ ಹೇಳಿದ್ದರು.

ಆದರೆ ಇದೀಗ ನಿರ್ಮಾಪಕರೊಬ್ಬರು ʼಬಾಹುಬಲಿ-3ʼ (Baahubali 3) ಬಗ್ಗೆ ಮಾತನಾಡಿದ್ದು, ಮತ್ತೊಮ್ಮೆ ಪ್ರೇಕ್ಷಕರು ʼಬಾಹುಬಲಿʼ ಲೋಕದ ಬಗ್ಗೆ ನೆನಪು ಮಾಡಿಕೊಳ್ಳುವಂತೆ ಮಾಡಿದ್ದಾರೆ.

ʼಕಂಗುವʼ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ (Producer KE Gnanavel) ಸಂದರ್ಶನವೊಂದರಲ್ಲಿʼಬಾಹುಬಲಿ-3ʼ ಬರುವುದು ಅಧಿಕೃತವೆಂದು ಹೇಳಿರುವುದು ಟಾಲಿವುಡ್‌ನಲ್ಲಿ ಚರ್ಚೆಗೆ ಕಾರಣವಾಗಿದೆ.

ʼಬಾಹುಬಲಿ 3ʼ ಯೋಜನೆ ಹಂತದಲ್ಲಿದೆ ಎನ್ನುವುದು ಕಳೆದ ವಾರ ಚಿತ್ರ ನಿರ್ಮಾಪಕರ ಜೊತೆ ಚರ್ಚಿಸಿದಾಗ ನನಗೆ ತಿಳಿಯಿತು. ಬಾಹುಬಲಿ 1 ಮತ್ತು 2 ನ್ನು ಬ್ಯಾಕ್-ಟು-ಬ್ಯಾಕ್ ಮಾಡಿದರು. ಆದರೆ ಈಗ ಒಂದು ದೊಡ್ಡ ಗ್ಯಾಪ್ ನಂತರ ಬಾಹುಬಲಿ 3 ಬಗ್ಗೆ ಯೋಜಿಸುತ್ತಿದ್ದಾರೆ ಎಂದು ಕೆ.ಇ.ಜ್ಞಾನವೇಲ್ ರಾಜಾ ಹೇಳಿದ್ದಾರೆ.

ʼಕಲ್ಕಿ 2898 ಎಡಿʼ ಸೀಕ್ವೆಲ್‌ ಬಗ್ಗೆ ಮಾತನಾಡಿರುವ ಅವರು, ʼಕಲ್ಕಿ 2898 ಎಡಿʼ ಸಿನಿಮಾದ ಮುಂದಿನ ಭಾಗ ಕೂಡ ಎರಡು ಸಿನಿಮಾದ ಗ್ಯಾಪ್‌ ಬಳಿಕವೇ ಆಗಲಿದೆ. ಮುಂದಿನ ಭಾಗಗಳನ್ನು ಮತ್ತೆ ಆನಂದಿಸಲು ಪ್ರೇಕ್ಷಕರು ಪಾತ್ರಗಳೊಂದಿಗೆ ಸಂಪರ್ಕ ಹೊಂದಬೇಕು ಎಂದು ವಿವರಿಸಿದ್ದಾರೆ.

ʼಸಲಾರ್-2‌ʼ ಒಂದು ನಿರ್ದಿಷ್ಟವಾದ ಗ್ಯಾಪ್‌ ಪಡೆದುಕೊಂಡ ಬಳಿಕವೇ ತೆರೆಗೆ ಬರಲಿದೆ ಎಂದು ಅವರು ಹೇಳಿದ್ದಾರೆ.

ಸದ್ಯ ರಾಜಮೌಳಿ ಮಹೇಶ್‌ ಬಾಬು ಅವರ ʼSSMB 29ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಅಡ್ವೆಂಚರ್‌ ಜಂಗಲ್‌, ಸಾಹಸಮಯ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪಾತ್ರವು ರಾಮಾಯಣದ ಹನುಮಂತನಿಂದ ಪ್ರೇರಿತವಾಗಿದೆ ಎಂದು ಹೇಳಲಾಗಿದೆ. 2025ರ ಜನವರಿಯಲ್ಲಿ ಈ ಸಿನಿಮಾ ಸೆಟ್ಟೇರಲಿದೆ.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

6

Actress Oviya: ಬಿಗ್‌ಬಾಸ್‌ ಮಾಜಿ ಸ್ಪರ್ಧಿಯ ಖಾಸಗಿ ವಿಡಿಯೋ ವೈರಲ್; ದೂರು ದಾಖಲಿಸಿದ ನಟಿ

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.