Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ
Team Udayavani, Oct 9, 2024, 2:21 PM IST
ಚೆನ್ನೈ: ಬಹುಭಾಷಾ ನಟಿ ನಯನತಾರ (Lady Superstar Nayanthara) ಆಗಾಗ ವಿವಾದದಲ್ಲಿ ಸಿಲುಕಿಕೊಂಡು ಸುದ್ದಿಯಾಗುತ್ತಾರೆ. ಕೆಲ ಸಮಯದ ಹಿಂದಷ್ಟೇ ಅವರ ಸಿನಿಮಾವೊಂದರ ಮೇಲೆ ವಿವಾದ ಉಂಟಾಗಿತ್ತು. ಇದೀಗ ಅವರ ಮಕ್ಕಳ ವಿಚಾರಕ್ಕೆ ಅವರು ವಿವಾದಕ್ಕೀಡಾಗಿದ್ದಾರೆ.
ನಯನತಾರ ಅಭಿನಯನದ ʼಅನ್ನಪೂರ್ಣಿʼ ಭಾರೀ ವಿವಾದಕ್ಕೆ ಗುರಿಯಾಗಿತ್ತು. ಇದಾದ ಬಳಿಕ ಅವರು ದೇವಸ್ಥಾನಕ್ಕೆ ಹೋಗುವಾಗ ಚಪ್ಪಲಿ ಹಾಕಿಕೊಂಡು ಹೋದರು ಎನ್ನುವ ವಿಚಾರ ಕೂಡ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಅವರ ಮೇಲೆ ನಿರ್ಮಾಪಕರೊಬ್ಬರು ಗರಂ ಆಗಿದ್ದಾರೆ. ತಮಿಳು ಸಿನಿಮಾ ನಿರ್ಮಾಪಕ ಹಾಗೂ ಯೂಟ್ಯೂಬರ್ ಅನಂತನ್ (Producer and Youtuber Ananthan) ನಯನತಾರ ಅವರು ಶೂಟಿಂಗ್ ಸೆಟ್ಗೆ ಬರುವಾಗ ಏಳೆಂಟು ಜನ ಸಹಾಯಕರನ್ನು ಕರೆದುಕೊಂಡು ಬರುತ್ತಾರೆ. ಅವರಿಗೆ ನಿರ್ಮಾಪಕರು ತಮ್ಮ ಜೇಬಿನಿಂದ ಸಂಭಾವನೆ ನೀಡಬೇಕೆಂದು ಈ ಹಿಂದೆ ಹೇಳಿದ್ದರು. ಇದೀಗ ಅದೇ ರೀತಿಯ ಮಾತನ್ನು ಮತ್ತೊಮ್ಮೆ ಅವರು ಹೇಳಿದ್ದಾರೆ.
ಈಗ ನಯನತಾರ ಶೂಟಿಂಗ್ ಗೆ ಬರುವಾಗ ತಮ್ಮ ಮಕ್ಕಳ ಜೊತೆ ಇಬ್ಬರು ದಾದಿಯರನ್ನು ಕರೆತರುತ್ತಾರೆ. ಈ ದಾದಿಯರಿಗೆ ನಿರ್ಮಾಪಕರೇ ಸಂಬಳ ನೀಡಬೇಕೆಂದು ಅವರು ಹೇಳುತ್ತಾರೆ. ಅವರ ಮಕ್ಕಳನ್ನು ನೋಡಿಕೊಳ್ಳಲು ಬರುವ ದಾದಿಯರಿಗೆ ನಿರ್ಮಾಪಕರು ತಮ್ಮ ಜೇಬಿನಿಂದ ಸಂಬಳ ನೀಡಬೇಕೆನ್ನುವುದರಲ್ಲಿ ಯಾವ ನ್ಯಾಯವಿದೆ ಎಂದು ಅಂತನನ್ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ.
2022ರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ನಯನತಾರ ಮದುವೆ ನಡೆದಿತ್ತು. ಮಹಾಬಲಿಪುರಂ ಬಳಿಕ ರೆಸಾರ್ಟ್ವೊಂದರಲ್ಲಿ ಅದ್ಧೂರಿಯಾಗಿ ಜೋಡಿ ಹಸೆಮಣೆ ಏರಿದ್ದರು. ಈ ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರು ಹಾಗೂ ಗಣ್ಯರು ಭಾಗಿಯಾಗಿದ್ದರು.
ವಿಘ್ನೇಶ್ ಶಿವನ್ ಜೊತೆ ನಯನತಾರ ಮದುವೆಯ ಫುಟೇಜ್ ವುಳ್ಳ ಡ್ಯಾಕ್ಯುಮೆಂಟರಿಯನ್ನು ನೆಟ್ ಫ್ಲಿಕ್ಸ್ ಭಾರೀ ಮೊತ್ತಕ್ಕೆ ಖರೀದಿಸಿದೆ. ‘ನಯನತಾರ: ಬಿಯಾಂಡ್ ದಿ ಫೇರಿ ಟೇಲ್’ ಡಾಕ್ಯುಮೆಂಟರಿ ಶೀಘ್ರದಲ್ಲೇ ನೆಟ್ಫ್ಲಿಕ್ಸ್ನಲ್ಲಿ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್ ವಿಧಿವಶ; ಗಣ್ಯರ ಸಂತಾಪ
Vettaiyan: ರಿಲೀಸ್ಗೂ ಮುನ್ನ ʼಗೋಟ್ʼ ದಾಖಲೆ ಮೀರಿಸಿದ ರಜಿನಿಕಾಂತ್ ʼವೆಟ್ಟೈಯನ್ʼ
Bigg Boss Tamil 8: ಬಿಗ್ ಬಾಸ್ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Geethanjali Silks ಉಡುಪಿ ಪುರುಷರ ಬಟ್ಟೆಗಳ ವಿಶಾಲ ವಿಭಾಗ ಉದ್ಘಾಟನೆ
Sirsi ವಿಜ್ಞಾನ ಪ್ರಶ್ನೆ ಪತ್ರಿಕೆಯ ರಚನೆಯಲ್ಲಿ ಸೂಕ್ತ ಬದಲಾವಣೆಗೆ ಮನವಿ
Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ
Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್ 2ನೇ ಮದುವೆ? ರ್ಯಾಪರ್ ಹೇಳಿದ್ದೇನು?
Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.