Music director K J Joy: ಖ್ಯಾತ ಸಂಗೀತ ನಿರ್ದೇಶಕ ಕೆಜೆ ಜಾಯ್ ನಿಧನ


Team Udayavani, Jan 15, 2024, 3:43 PM IST

TDY-14

ಚೆನ್ನೈ: ಮಲಯಾಳಂ ಸಿನಿರಂಗದ ಹಿರಿಯ ಸಂಗೀತ ನಿರ್ದೇಶಕ ಕೆ.ಜೆ ಜಾಯ್(77) ಸೋಮವಾರ ಬೆಳಗ್ಗೆ ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಕೆ.ಜೆ ಜಾಯ್ ಕಳೆದ ಕೆಲ ಸಮಯದಿಂದ ಪಾರ್ಶ್ವವಾಯುವಿಗೆ ತುತ್ತಾಗಿ ಹಾಸಿಗೆ  ಹಿಡಿದಿದ್ದರು ಎಂದು ತಿಳಿದು ಬಂದಿದೆ.

1975 ರಿಂದ ವೃತ್ತಿ ಜೀವನ ಆರಂಭಿಸಿದ ಅವರು, ಕೆ.ಜೆ ಜಾಯ್ ಅವರು ಎಲೆಕ್ಟ್ರಾನಿಕ್ ಉಪಕರಣಗಳ ಪ್ರಮುಖ ಬಳಕೆಯಿಂದಾಗಿ ಮಲಯಾಳಂ ಚಿತ್ರರಂಗದ ಮೊದಲ ‘ಟೆಕ್ನೋ ಮ್ಯೂಸಿಷಿಯನ್’ ಎಂದು ಕೂಡ ಕರೆಯಲ್ಪಟ್ಟಿದ್ದರು. ಮಲಯಾಳಂ ಚಿತ್ರರಂಗಕ್ಕೆ ಕೀಬೋರ್ಡ್ ನ್ನು ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಪ್ರಸಿದ್ಧ ಸಂಗೀತಗಾರ ಎಂಎಸ್ ವಿಶ್ವನಾಥನ್ ಅವರ ಸಂಗೀತ ತಂಡದಲ್ಲಿ ಅಕಾರ್ಡಿಯನಿಸ್ಟ್ ಗುರುತಿಸಿಕೊಂಡ ಅವರು, 1975 ರಲ್ಲಿ ಬಂದ ʼಲವ್ ಲೆಟರ್ʼ  ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡುವ ಮೂಲಕ ವೃತ್ತಿ ಬದುಕನ್ನು ಆರಂಭಿಸಿದರು. ವೃತ್ತಿಜೀವನದ ಅವಧಿಯಲ್ಲಿ ಕೆ ಜೆ ಜಾಯ್ ಅವರು 200 ಕ್ಕೂ ಹೆಚ್ಚು ಚಲನಚಿತ್ರಗಳಿಗೆ ಹಾಡುಗಳನ್ನು ಸಂಯೋಜಿಸಿದ್ದಾರೆ, ಅವುಗಳಲ್ಲಿ ಹೆಚ್ಚಿನವು ಬ್ಲಾಕ್‌ಬಸ್ಟರ್‌ಗಳಾಗಿವೆ.

ಕೆಜೆ ಯೇಸುದಾಸ್ ಜೊತೆ ಕೆ ಜೆ ಜಾಯ್ ಅವರು ಜೊತೆಯಾಗಿ ಹತ್ತಾರು ಸಿನಿಮಾಗಳಿಗೆ ಸಂಗೀತವನ್ನು ಸಂಯೋಜಿಸಿದ್ದಾರೆ. 1979 ರ ʼಅನುಪಲ್ಲವಿʼ ಸಿನಿಮಾದ ʼಎನ್ ಸ್ವರಂʼ ಮತ್ತು ʼಒರು ರಾಗ ಪಲ್ಲವಿʼ ಹಾಡನ್ನು ಸಂಯೋಜಿಸಿದ್ದಾರೆ. 1981 ರಲ್ಲಿ ಬಂದ ʼಕರಿಂಪೂಚʼ ಸಿನಿಮಾದ ಲಾವಣ್ಯ ದೇವತಾಯಲ್ಲೇ ಹಾಡು, 1984ರಲ್ಲಿ ಬಂದ ʼಕುರಿಸುಯುಧಂʼ ಚಿತ್ರದ ʼಕೂಡರಂ ವೇದಿಯುಮೀʼ ಸಿನಿಮಾದ ಹಾಡನ್ನು ಸಂಯೋಜಿಸಿದ್ದಾರೆ.

ಅವರ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

1-NATA

Drug case; ಮಲಯಾಳಂ ನಟ ಶೈನ್ ಟಾಮ್ ಚಾಕೊ ಸೇರಿ 6 ಮಂದಿ ಖುಲಾಸೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

12

Uv Fusion: ತ್ಯಾಗಜೀವಿಗಳಾಗೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.