Tollywood: ರಾಮ್ಚರಣ್ ʼಗೇಮ್ ಚೇಂಜರ್ʼ ಓಟಿಟಿ ರೈಟ್ಸ್ 105 ಕೋಟಿ ರೂ.ಗೆ ಸೇಲ್- ವರದಿ
Team Udayavani, Mar 21, 2024, 4:54 PM IST
ಹೈದರಾಬಾದ್: ರಾಮ್ ಚರಣ್ ಅವರ ʼಗೇಮ್ ಚೇಂಜರ್ʼ ಸಿನಿಮಾ ಟಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಸಟ್ಟೇರಿದ ದಿನದಿಂದ ಇದುವರೆಗೂ ಒಂದಲ್ಲ ಒಂದು ಕಾರಣದಿಂದ ಸದ್ದು ಮಾಡುತ್ತಿದೆ.
ಶಂಕರ್ – ರಾಮ್ ಚರಣ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿರುವುದರಿಂದ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.
ಇತ್ತೀಚೆಗೆ ಸಿನಿಮಾ ರಿಲೀಸ್ ಗೂ ಮುನ್ನ ಓಟಿಟಿ ರೈಟ್ಸ್ ದೊಡ್ಡ ಮೊತ್ತಕ್ಕೆ ಮಾರಾಟವಾಗುತ್ತಿದೆ. ಅದರಂತೆ ಅಮೇಜಾನ್ ಪ್ರೈಮ್ ʼಕಾಂತಾರ -1ʼ ಸಿನಿಮಾದ ಓಟಿಟಿ ರೈಟ್ಸ್ ನ್ನು ಪಡೆದುಕೊಂಡಿದೆ. ಇದರೊಂದಿಗೆ ವೆಬ್ ಸಿರೀಸ್ ಗಳ ಹೊಸ ಸೀಸನ್ ಗಳನ್ನು ಹಾಗೂ ಹೊಸ ಸಿನಿಮಾಗಳನ್ನು ಅನೌನ್ಸ್ ಮಾಡಿದೆ.
ಇದನ್ನೂ ಓದಿ: SSE-Side B: ಓಟಿಟಿಯಲ್ಲಿ ಸಿಗುತ್ತಿಲ್ಲ ʼಸಪ್ತ ಸಾಗರದಾಚೆ ಎಲ್ಲೋʼ ಸೈಡ್ -ಬಿʼ; ಕಾರಣವೇನು?
ʼಗೇಮ್ ಚೇಂಜರ್ʼ ಸಿನಿಮಾದ ಓಟಿಟಿ ರೈಟ್ಸ್ ನ್ನು ಅಮೇಜಾನ್ ಪ್ರೈಮ್ ಖರೀದಿಸಿದೆ. ಚಿತ್ರದ ದಕ್ಷಿಣ ಭಾಷೆಯ ಆವೃತ್ತಿಯ ಓಟಿಟಿ ರೈಟ್ಸ್ ನ್ನು 105 ಕೋಟಿ ರೂ.ಗೆ ಖರೀದಿಸಿದೆ ಎಂದು ವರದಿಯಾಗಿದೆ. ತೆಲುಗು ಚಿತ್ರರಂಗದಲ್ಲಿ ಇದೊಂದು ಮಹತ್ವದ ಮೈಲಿಗಲ್ಲು ಆಗಿದೆ. Zee5 ಚಿತ್ರದ ಹಿಂದಿ OTT ಹಕ್ಕುಗಳನ್ನು ಖರೀದಿಸಬಹುದೆಂದು ಹೇಳಲಾಗಿದೆ.
ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ರಾಜಕೀಯ ಥ್ರಿಲ್ಲರ್ ಸಿನಿಮಾವಾಗಿದ್ದು, ಕಾರ್ತಿಕ್ ಸುಬ್ಬರಾಜ್ ಚಿತ್ರದ ಕಥೆ ಬರೆದಿದ್ದಾರೆ. ರಾಮ್ ಚರಣ್ ಐಎಎಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಳ್ಳಲಿದ್ದಾರೆ.
ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಅಡಿಯಲ್ಲಿ ದಿಲ್ ರಾಜು ಮತ್ತು ಸಿರೀಶ್ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಎಸ್ಎಸ್ ಥಮನ್ ಸಿನಿಮಾಕ್ಕೆ ಮ್ಯೂಸಿಕ್ ನೀಡಿದ್ದಾರೆ.
ಅಂಜಲಿ, ಸಮುದ್ರಕಣಿ, ಎಸ್ಜೆ ಸೂರ್ಯ, ಶ್ರೀಕಾಂತ್, ಸುನೀಲ್, ನವೀನ್ ಚಂದ್ರ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.