Rave party case: ನಟಿ ಹೇಮಾ 24 ಗಂಟೆ ಸಿಸಿಬಿ ವಶಕ್ಕೆ
Team Udayavani, Jun 6, 2024, 12:36 PM IST
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ ಹೌಸ್ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಹಾಗೂ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ವಿಡಿಯೋ ಮಾಡಿ ಹರಿ ಬಿಟ್ಟ ಆರೋಪದಲ್ಲಿ ಬಂಧನಕ್ಕೊಳ ಗಾಗಿರುವ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು 24 ಗಂಟೆಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ ಸಂಬಂಧ ಮೇ 3ರಂದು ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾದ ನಟಿ ಹೇಮಾ ಗೊಂದಲದ ಹೇಳಿಕೆ ಹಾಗೂ ದಾಳಿ ಸಂದರ್ಭದಲ್ಲಿ ಸುಳ್ಳು ಹೆಸರು ಹಾಗೂ ಮೊಬೈಲ್ ನೀಡಿದ ಆರೋಪದಲ್ಲಿ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಬುಧವಾರ ಆನೇಕಲ್ನ ಕೋರ್ಟ್ಗೆ ಹಾಜರು ಪಡಿಸಿ ಆರೋಪಿತೆಯನ್ನು 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡುವಂತೆ ತನಿಖಾಧಿಕಾರಿಗಳು ಮನವಿ ಮಾಡಿದರು. ಅದನ್ನು ಆಲಿಸಿದ ಕೋರ್ಟ್ 24 ಗಂಟೆಗಳ ಕಾಲ ವಿಚಾರಣೆಗೆ ಅವಕಾಶ ನೀಡಿದ್ದು, ಗುರುವಾರ ಸಂಜೆ 5 ಗಂಟೆಗೆ ಮತ್ತೆ ಹೇಮಾರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ.
ಮತ್ತೂಮ್ಮೆ ಮಾಧ್ಯಮಗಳ ಮೇಲೆ ಗರಂ: ಕೋರ್ಟ್ಗೆ ಹಾಜರಾಗುತ್ತಿದ್ದಂತೆ ಮತ್ತೆ ಮಾಧ್ಯಮಗಳ ಮೇಲೆ ಹೇಮಾ ಗರಂ ಆದರು. “ನಾನು ಕೊಲೆ ಮಾಡಿದ್ದೀನಾ? ಅರ್ಧ ರಾತ್ರಿಯಲ್ಲಿ ಕರೆದುಕೊಂಡು ಹೋಗಿ ಕಾಡಿನಲ್ಲಿ ಸಹಿ ಹಾಕಿಸಿಕೊಂಡರು. ನಾನು ಏನು ಮಾಡಿದ್ದೀನಿ, ಇಲ್ಲಿಯವರೆಗೆ ನೀವು ಮಾಧ್ಯಮದವರು ಮಾತನಾಡಿಲ್ಲ. ಈಗಲಾದರೂ ಮಾತನಾಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.