![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Jan 29, 2025, 12:55 PM IST
ಹೈದರಾಬಾದ್: ಬಿಗ್ ಬಜೆಟ್ನಲ್ಲಿ ಬರುತ್ತಿರುವ ಮಹೇಶ್ ಬಾಬು – ರಾಜಮೌಳಿ ಕಾಂಬಿನೇಷನ್ನ ʼSSMB29ʼ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ.
ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು (Superstar Mahesh Babu) ಮೊದಲ ಬಾರಿಗೆ ಹಿಟ್ ನಿರ್ದೇಶಕ ಎಸ್ ಎಸ್ ರಾಜಮೌಳಿ (S.S. Rajamouli) ಜತೆ ಕೈ ಜೋಡಿಸಿದ್ದಾರೆ. ಅನೌನ್ಸ್ ಆದ ಬಳಿಕ ಸುದ್ದಿಯಾಗಿದ್ದ ಚಿತ್ರ ಇದೀಗ ಶೂಟಿಂಗ್ ಆರಂಭಿಸಿದೆ.
ಈ ಚಿತ್ರ ಭಾರತದಲ್ಲಿ ಬಜೆಟ್ ವಿಚಾರದಲ್ಲಿ ಹೊಸ ದಾಖಲೆ ಬರೆಯಲಿದೆ ಎನ್ನಲಾಗುತ್ತಿದೆ. ಏಕಂದರೆ ಸಿನಿಮಾ 900-1000 ಕೋಟಿ ರೂ. ಬಜೆಟ್ನಲ್ಲಿ ನಿರ್ಮಾಣವಾಗಲಿದೆ ಎಂದು ವರದಿ ಆಗಿದೆ.
ಇತ್ತೀಚೆಗಿನ ದಿನಗಳಲ್ಲಿ ಎಷ್ಟೇ ಕಠಿಣ ಕ್ರಮಕೈಗೊಂಡರೂ ಸಿನಿಮಾದ ಕೆಲ ದೃಶ್ಯಗಳು ಶೂಟಿಂಗ್ ಹಂತದಲ್ಲೇ ಸೋರಿಕೆ ಆಗುತ್ತವೆ. ಇದರಿಂದ ಚಿತ್ರತಂಡಕ್ಕೆ ಭಾರೀ ಹೊಡೆತ ಬೀಳುತ್ತದೆ. ಈ ರೀತಿ ಆಗಬಾರದೆನ್ನುವ ನಿಟ್ಟಿನಲ್ಲಿ ರಾಜಮೌಳಿ – ಮಹೇಶ್ ಬಾಬು ಅವರ ಚಿತ್ರತಂಡ ಕಠಿಣವಾದ ಕ್ರಮವನ್ನು ಕೈಗೊಂಡಿದೆ.
ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಸೇರಿದಂತೆ ಎಲ್ಲಾ ನಟರು ಮತ್ತು ಸಿಬ್ಬಂದಿಗಳು ಬಹಿರಂಗ ರಹಿತ ಒಪ್ಪಂದಗಳಿಗೆ (Non-Disclosure Agreements) ಸಹಿ ಹಾಕಿದ್ದಾರೆ. ಇದರ ಅನ್ವಯ ಫೋಟೋಗಳು ಅಥವಾ ವೀಡಿಯೊಗಳ ಸೋರಿಕೆಯನ್ನು ತಪ್ಪಿಸಲು ಮೊಬೈಲ್ ಫೋನ್ಗಳನ್ನು ಸೆಟ್ನಲ್ಲಿ ನಿಷೇಧಿಸಲಾಗಿರುತ್ತದೆ.
ʼSSMB29’ನ ಚಿತ್ರೀಕರಣ ಸದ್ಯ ಹೈದರಾಬಾದ್ನ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ವಿಶೇಷವಾಗಿ ನಿರ್ಮಿಸಲಾದ ಸೆಟ್ನಲ್ಲಿ ಚಿತ್ರೀಕರಣ ನಡೆಯುತ್ತಿದೆ.
“ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್ ಬಾಂಡ್ ಅಥವಾ ಇಂಡಿಯಾನ ಜೋನ್ಸ್ ಸಾಹಸದ ಹಾಗೆ ಭಾರತೀಯ ಶೈಲಿಯಲ್ಲಿ ಮೂಡಿಬರುವ ಚಿತ್ರ. ಥಿಯೇಟರ್ ನಲ್ಲಿ ಈ ಸಿನಿಮಾ ಎಲ್ಲರನ್ನೂ ರೋಮಾಂಚನಗೊಳಿಸಲಿದೆ” ಎಂದು ರಾಜಮಾಳಿ ಸಿನಿಮಾದ ಬಗ್ಗೆ ಈ ಹಿಂದೆ ರಾಜಮೌಳಿ ಹೇಳಿದ್ದರು.
ಅಡ್ವೆಂಚರ್ ಜಂಗಲ್, ಸಾಹಸಮಯ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪಾತ್ರವು ರಾಮಾಯಣದ ಹನುಮಂತನಿಂದ ಪ್ರೇರಿತವಾಗಿದೆ ಎಂದು ಹೇಳಲಾಗುತ್ತಿದೆ.
ಮಹೇಶ್ ಬಾಬು ಅವರೊಂದಿಗೆ ಲೀಡ್ ಪಾತ್ರದಲ್ಲಿ ಪ್ರಿಯಾಂಕಾ ಚೋಪ್ರಾ (Priyanka Chopra) ಕಾಣಿಸಿಕೊಳ್ಳಲಿದ್ದಾರೆ. ಇದರ ಜತೆ ಜಾನ್ ಅಬ್ರಹಾಂ ಕೂಡ ಸಿನಿಮಾದಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ.
Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್
Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ
Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ
Katapadi: ಮುಕ್ಕಾಲು ಎಕರೆಯಲ್ಲಿ 8 ಟನ್ ಸೌತೆ, ಅಂಗಳದಿಂದಲೇ ಮಾರಾಟ!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.