Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


Team Udayavani, Dec 22, 2024, 6:09 PM IST

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಹೈದರಾಬಾದ್: ‘ಪುಷ್ಪ-2ʼ (Pushpa 2) ಸಿನಿಮಾದ ರಿಲೀಸ್‌ ಬಳಿಕ ಅಲ್ಲು ಅರ್ಜುನ್‌ (Allu Arjun) ಅವರಿಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಿದೆ. ಪ್ರಿಮಿಯರ್‌ ಶೋ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತ ಘಟನೆ ದಿನ ಕಳೆದಂತೆ ನಾನಾ ರೀತಿಯಲ್ಲಿ ಚರ್ಚೆ ಆಗುತ್ತಿದೆ.

ಡಿ.4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ʼಪುಷ್ಪ-2ʼ ಪ್ರಿಮಿಯರ್‌ ಶೋ ವೇಳೆ ರೇವತಿ ಎನ್ನುವ ಮಹಿಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟಿದ್ದರು. ಈ ಘಟನೆ ಸಂಬಂಧ ಅಲ್ಲು ಅರ್ಜುನ್‌ ಸೇರಿದ ಇತರರನ್ನು ಬಂಧಿಸಲಾಗಿತ್ತು. ಅಲ್ಲು ಅರ್ಜುನ್‌ ಜೈಲಿನಲ್ಲಿ ಒಂದು ದಿನ ಕಳೆದು ಮಧ್ಯಂತರ ಜಾಮೀನು ಪಡೆದು ಆಚೆ ಬಂದಿದ್ದಾರೆ.

ಈ ಘಟನೆ ಆಂಧ್ರದಲ್ಲಿ ರಾಜಕೀಯವಾಗಿ ತಿರುಗಿದೆ ಕೆಲ ಪಕ್ಷಗಳು ಘಟನೆಯ ಪರ – ವಿರೋಧದ ಬಗ್ಗೆ ಮಾತನಾಡುತ್ತಿದ್ದಾರೆ. ಭಾನುವಾರ (ಡಿ. 22ರಂದು) ಇದೇ ಘಟನೆ ಸಂಬಂಧ ಕೆಲ ವಿದ್ಯಾರ್ಥಿ ಸಂಘಟನೆಗಳು ಅಲ್ಲು ಅರ್ಜುನ್‌ ನಿವಾಸದ ಮುಂದೆ ಪ್ರತಿಭಟನೆಗೆ ಇಳಿದಿದೆ.

ಜೂಬಿಲಿ ಹಿಲ್ಸ್‌ನಲ್ಲಿ ಅರ್ಜುನ್‌ ಅವರ ನಿವಾಸದ ಎದುರು ಒಯು ಜೆಎಸಿ ಸಂಘಟನೆಯ  ಕಾರ್ಯಕರ್ತರು ಅಲ್ಲು ಅರ್ಜುನ್‌ ಅವರ ವಿರುದ್ಧ ಧಿಕ್ಕಾರ ಕೂಗಿ ಅವರ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲು ಅರ್ಜುನ್‌ ನಿವಾಸದ ಎದುರಿದ್ದ ಹೂಕುಂಡಗಳನ್ನು ಒಡೆದು ಮನೆಯೊಳಗೆ ನುಗ್ಗಲು ಯತ್ನಿಸಿದ್ದಾರೆ.

ರೇವತಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ಅಲ್ಲು ಅರ್ಜುನ್‌ ನಿವಾಸದ ಮುಂದೆ ಪ್ರತಿಭಟನಾಕಾರರು ದಾಂಧಲೆ ಎಬ್ಬಿಸಿದ್ದಾರೆ. ಸದ್ಯ ಪೊಲೀಸರು ಬಂದು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲು ಅರ್ಜುನ್‌ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಈಗಾಗಲೇ ಅಲ್ಲು ಅರ್ಜುನ್‌ ಅವರು ಈ ಘಟನೆಯಿಂದ ತಮಗೆ ತುಂಬಾ ನೋವಾಗಿದೆ. ರೇವತಿ ಅವರ ಕುಟುಂಬದ ಜತೆ ನಾವಿರುತ್ತೇವೆ ಎಂದಿದ್ದು, 25 ಲಕ್ಷ ರೂ. ಘೋಷಿಸಿದ್ದಾರೆ.

 

View this post on Instagram

 

A post shared by Allu Arjun (@alluarjunonline)

ಇನ್ನೊಂದು ಕಡೆ ಫ್ಯಾನ್ಸ್‌ಗಳಿಗೆ ಅಲ್ಲು ಅರ್ಜುನ್‌ ಅವರು ವಿಶೇಷ ಮನವಿಯನ್ನು ಮಾಡಿದ್ದಾರೆ. ಯಾರು ಕೂಡ ಯಾರಿಗೂ ಅಸಂಬದ್ಧ ಹಾಗೂ ಅಶ್ಲೀಲವಾಗಿ ಆನ್‌ ಲೈನ್‌ ಅಥವಾ ಆಫ್‌ ಲೈನ್ ನಲ್ಲಿ ಕಮೆಂಟ್‌ ಮಾಡಲು ಹೋಗಬೇಡಿ. ನಕಲಿ ಖಾತೆ ಬಳಸಿ ತನ್ನ ಅಭಿಮಾನಿಗಳೆಂದು ಹೇಳಿ ಅಶ್ಲೀಲ ಭಾಷೆ ಬಳಸಿದರೆ ಅಂಥವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಅಲ್ಲು ಹೇಳಿದ್ದಾರೆ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.