Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಗಾರ್ಮೆಂಟ್ಸ್‌ ಕೆಲಸ ಮಾಡಿ 750 ರೂ. ಸಂಬಳ ಪಡೆಯುತ್ತಿದ್ದ ಸೂರ್ಯ

Team Udayavani, Oct 24, 2024, 5:06 PM IST

9

ಚೆನ್ನೈ: ಕಾಲಿವುಡ್‌ ಸಿನಿಮಾರಂಗದಲ್ಲಿ ಇಂದು ನಟ ಸೂರ್ಯ (Actor Suriya) ಅವರು ಬಹುದೊಡ್ಡ ಸೂಪರ್‌ ಸ್ಟಾರ್‌ ಆಗಿ ಬೆಳೆದಿದ್ದಾರೆ.  ಅವರ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಕೋಟಿ ಕೋಟಿ ಗಳಿಸುತ್ತವೆ. ನಟನಾಗಿ ಬೆಳೆಯುವ ಮುನ್ನ ಸೂರ್ಯ ಸಾಗಿದ ಕಷ್ಟದ ದಿನಗಳು ಒಂದೆರೆಡಲ್ಲ.

ಸೂರ್ಯ ಕುಟುಂಬಕ್ಕೆ ಬಣ್ಣದ ಜಗತ್ತು ಹೊಸತಲ್ಲ. ಸೂರ್ಯ ಅವರ ತಂದೆ ಶಿವಕುಮಾರ್ ನಟನಾಗಿಯೇ ಜನರಿಗೆ ಹೆಚ್ಚು ಪರಿಚಯವಾದವರು. ಆದರೆ ಸೂರ್ಯ ಅವರ ಬದುಕು ಬಣ್ಣದ ಲೋಕದಿಂದಲೇ ಆರಂಭವಾದದ್ದಲ್ಲ. ಅವರು ಸಿನಿಮಾರಂಗಕ್ಕೆ ಕಾಲಿಡುವ ಮುನ್ನ ಕಷ್ಟದ ದಿನಗಳನ್ನು ಜೀವಿಸಿ, ಕಷ್ಟವನ್ನರಿತು ಬೆಳೆದು ಬಂದವರು.

‘ಪಿಂಕ್‌ ವಿಲ್ಲಾʼ ಜತೆಗಿನ ಸಂದರ್ಶನದಲ್ಲಿ ಅವರು ತನ್ನ ಆರಂಭಿಕ ಜೀವನದ ದಿನಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ʼಕಂಗುವʼ ಸಿನಿಮಾದ ಪ್ರಚಾರದ ವೇಳೆ ಅವರು ತಮ್ಮ ಸಿನಿಮಾ ಉದ್ಯಮ ಹಾಗೂ ಆರಂಭಿಕ ದಿನಗಳ ಬಗ್ಗೆ ಮಾತನಾಡಿದ್ದಾರೆ.

“ನಾನು ಟ್ರೈನಿಯಾಗಿ ಗಾರ್ಮೆಂಟ್ಸ್‌ ವೊಂದಕ್ಕೆ ಕೆಲಸಕ್ಕೆ ಸೇರಿದ್ದೆ. 15 ದಿನಕ್ಕೆ ನನಗೆ 750 ರೂ. ಸಂಬಳವಿತ್ತು. ಆ ಬಳಿಕ ತಿಂಗಳಿಗೆ 1200 ತಿಂಗಳ ಸಂಬಳವಿತ್ತು. ಮೂರು ವರ್ಷ ಕೆಲಸ ಮಾಡಿದೆ. ಆಗ ನನ್ನ ಸಂಬಳ ತಿಂಗಳಿಗೆ 8000 ಸಾವಿರ ಆಗಿತ್ತು. ಅಲ್ಲಿ ಕೆಲಸ ಮಾಡುತ್ತಿದ್ದಾಗ 6 ತಿಂಗಳು ನನ್ನೊಬ್ಬ ನಟನ ಮಗವೆಂದು ಯಾರಿಗೂ ಗೊತ್ತಿರಲಿಲ್ಲ. ಒಂದು ದಿನ ನನ್ನ ತಾಯಿ ನಾನು 25 ಸಾವಿರ ರೂಪಾಯಿ ಸಾಲ ತೆಗೆದುಕೊಂಡಿದ್ದೇನೆ. ಇದು ನಿನ್ನ ತಂದೆಗೆ ಗೊತ್ತಿಲ್ಲ ಎಂದು ಹೇಳಿದ್ದರು. ಏನಮ್ಮ ಹೇಳ್ತಾ ಇದ್ದೀಯಾ, ಅಪ್ಪ ಒಬ್ಬ ನಟ ಆಗಿದ್ರೂ ನೀವು ಯಾಕೆ ಸಾಲ ತೆಗದುಕೊಂಡಿದ್ದೀರಿ, ಬ್ಯಾಂಕ್‌ ಬ್ಯಾಲೆನ್ಸ್‌ ಎಷ್ಟಿದೆ ಅಂಥ ಕೇಳಿದ್ದೆ. ಆದರೆ ಆ ದಿನಗಳಲ್ಲಿ ನಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ಒಂದು ಲಕ್ಷ ಅಥವಾ ಅದಕ್ಕಿಂತ ಜಾಸ್ತಿ ಇರಲಿಲ್ಲ. ನನ್ನ ತಂದೆ ಅವರ ಕೆಲಸಕ್ಕಾಗಿ ಸಂಬಳ ನೀಡಿ ಎಂದು ಒತ್ತಾಯ ಮಾಡುತ್ತಿರಲಿಲ್ಲ. ಆ ಸಮಯದಲ್ಲಿ ನನ್ನ ತಂದೆಗೆ ಸರಿಯಾದ ಕೆಲಸವೂ ಇರಲಿಲ್ಲ. 6 -10 ತಿಂಗಳು ಕೆಲಸನೇ ಇರಲಿಲ್ಲ. ಎಲ್ಲರ ವೃತ್ತಿ ಬದುಕಿನಲ್ಲಿ ಏರಳಿತಗಳಿರುತ್ತವೆ. ನನ್ನಮ್ಮನ ಸಾಲ ತೀರಿಸಲು ನಾನು ಕಾಯುತ್ತಿದ್ದೆ” ಎಂದು ಹೇಳಿದ್ದಾರೆ.

“ನಾನು ಸಾಕಷ್ಟು ಅನುಭವವನ್ನು ಪಡೆದ ನಂತರ ನಾನೊಂದು ಫ್ಯಾಕ್ಟರಿ ಶುರು ಮಾಡಬೇಕೆಂದುಕೊಂಡಿದ್ದೆ. ಇದಕ್ಕಾಗಿ ನನ್ನ ತಂದೆ ಒಂದು ಕೋಟಿ ಹೂಡಿಕೆ ಮಾಡುತ್ತಾರೆ ಎಂದು ಅಂದುಕೊಂಡಿದ್ದೆ. ಆದರೆ ನನಗೆ ನಟಿಸಲು ಅವಕಾಶ ಸಿಕ್ಕಾಗ ಎಲ್ಲವೂ ಬದಲಾಯಿತು. ಮಣಿರತ್ನಂ ಅವರು ಚಲನಚಿತ್ರವನ್ನು ನಿರ್ಮಿಸುತ್ತಿದ್ದರು ಮತ್ತು ಅವರು ನನ್ನನ್ನು ಪದೇ ಪದೇ ಕೇಳುತ್ತಿದ್ದರು. ಒಬ್ಬ ನಟನ ಮಗನಾಗಿ ಅದು ಸಹಜವಾಗಿತ್ತು. ಆದರೆ ನನಗೆ ನಟನಾಗುವ ಕನಸಿರಲಿಲ್ಲ. ಕನಸಲ್ಲೂ ನಾನು ನಟನಾಗುತ್ತೇನೆ ಅಂದುಕೊಂಡಿರಲಿಲ್ಲ. ಕ್ಯಾಮೆರಾ ಎದುರಿಸುವ 5 ದಿನ ಮುಂಚೆಯೂ ನಾನು ನಟನಾಗುತ್ತೇನೆ ಎಂದು ಅಂದುಕೊಂಡಿರಲಿಲ್ಲ. ನನ್ನ ತಾಯಿ ಪಡೆದ 25,000 ರೂ. ಸಾಲವನ್ನು ಮರು ಪಾವತಿಸಲು ಈ ಉದ್ಯಮಕ್ಕೆ ಬಂದೆ. “ನಿಮ್ಮ ಸಾಲ ಮುಗಿದಿದೆ ನೀವು ಇನ್ನು ಚಿಂತಿಸಬೇಕಾಗಿಲ್ಲ” ಎಂದು ನನ್ನ ತಾಯಿಗೆ ಹೇಳಬೇಕಿತ್ತು. ಎಷ್ಟೇ ತಿಂಗಳು ಆಗಲಿ ನೀವು ಇದನ್ನು ಅಪ್ಪನಿಗೆ ಹೇಳಬೇಕಿಲ್ಲ ಎಂದು ನಾನು ಅವರ ಬಳಿ ಹೇಳಿದ್ದೆ” ಎಂದು ಹಳೆಯ ದಿನಗಳನ್ನು ಸ್ಮರಿಸಿದ್ದಾರೆ.

ಹೀಗೆಯೇ ನಾನು ನಟನಾಗಿದ್ದು, ಸೂರ್ಯನಾಗಿ ಬೆಳೆದದ್ದು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

1-aa

Congress MLA ; ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾರವಾರ ಶಾಸಕ ಸತೀಶ್ ಸೈಲ್‌ ದೋಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼ ಹೊಸ ರಿಲೀಸ್‌ ಡೇಟ್‌ ಅನೌನ್ಸ್   

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼ ಹೊಸ ರಿಲೀಸ್‌ ಡೇಟ್‌ ಅನೌನ್ಸ್  

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.