Thalaivar 171: ರಜಿನಿಕಾಂತ್ ಜೊತೆ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟ
Team Udayavani, Apr 5, 2024, 3:28 PM IST
ಚೆನ್ನೈ: ಲೋಕೇಶ್ ಕನಕರಾಜ್ – ಸೂಪರ್ ಸ್ಟಾರ್ ರಜಿನಿಕಾಂತ್ ಕಾಂಬಿನೇಷನ್ ನಲ್ಲಿ ಬರಲಿರುವ ʼತಲೈವರ್ 171ʼ ಹೈಪ್ ಹೆಚ್ಚಿಸಿದೆ. ಫ್ಯಾನ್ಸ್ಗಳು ಈ ಸಿನಿಮಾಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ.
ಇತ್ತೀಚೆಗಷ್ಟೇ ʼತಲೈವರ್ 171ʼ ಸಿನಿಮಾದ ಮೊದಲ ಪೋಸ್ಟರ್ ರಿಲೀಸ್ ಆಗಿದೆ. ಇದರಲ್ಲಿ ರಜಿನಿಕಾಂತ್ ಕೈಗೆ ಬೇಡಿಯನ್ನು ಹಾಕಿಕೊಂಡ ಹಾಗೆ ವಾಚ್ಗಳನ್ನು ಹಾಕಿಕೊಂಡಿದ್ದಾರೆ. ಈ ಪೋಸ್ಟರ್ ವೈರಲ್ ಆಗಿದ್ದು, ಅಭಿಮಾನಿಗಳು ಸಿನಿಮಾದ ಟೀಸರ್ ಗಾಗಿ ಕಾಯುತ್ತಿದ್ದಾರೆ.
ಇದೇ ಏಪ್ರಿಲ್ 22 ರಂದು ಸಿನಿಮಾದ ಟೈಟಲ್ ರಿವೀಲ್ ಆಗಲಿದೆ ಎನ್ನಲಾಗಿದೆ. ಈ ನಡುವೆ ʼ ʼತಲೈವರ್ 171ʼ ಬಗ್ಗೆ ಮತ್ತೊಂದು ಅಪ್ಡೇಟ್ ಹೊರಬಿದ್ದಿದೆ.
ರಜಿನಿಕಾಂತ್ ಅವರ ʼಜೈಲರ್ʼ ಸಿನಿಮಾದಲ್ಲಿ ಮೋಹನ್ ಲಾಲ್, ಶಿವರಾಜ್ ಕುಮಾರ್ ಹಾಗೂ ಜಾಕಿಶ್ರಾಫ್ ಅವರು ಕಾಣಿಸಿಕೊಂಡಿದ್ದರು. ಲೋಕೇಶ್ ಕನಕರಾಜ್ ಅವರ ʼತಲೈವರ್ 171ʼ ಸಿನಿಮಾದಲ್ಲೂ ಬಾಲಿವುಡ್ ನ ಖ್ಯಾತ ನಟರೊಬ್ಬರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಲೋಕೇಶ್ ಅವರು ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರನ್ನು ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಆಯ್ಕೆ ಮಾಡಲು ಪರಿಗಣಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಈ ಬಗ್ಗೆ ಇನ್ನು ಕೂಡ ಅಧಿಕೃತವಾಗಿ ಮಾಹಿತಿ ಹೊರಬಿದ್ದಿಲ್ಲ. ಇದಲ್ಲದೆ ಸಿನಿಮಾದ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿಗಳು ಹೊರಬೀಳಬೇಕಿದೆ.
ಸಾಮಾನ್ಯವಾಗಿ ಲೋಕೇಶ್ ಅವರ ಸಿನಿಮಾದ ಟೀಸರ್ ಅಧಿಕೃತ ಶೂಟಿಂಗ್ ಆರಂಭಕ್ಕೂ ಮುನ್ನವೇ ರಿಲೀಸ್ ಮಾಡಲಾಗುತ್ತದೆ. ಕಮಲ್ ಹಾಸನ್ ಅವರ ʼವಿಕ್ರಮ್ʼ ಸಿನಿಮಾದ ವಿಚಾರದಲ್ಲೂ ಇದೇ ರೀತಿ ಆಗಿತ್ತು. ಹೀಗಾಗಿ ರಜಿನಿಕಾಂತ್ ಸಿನಿಮಾದ ಟೀಸರ್ ಗೆ ಫ್ಯಾನ್ಸ್ ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.