SSMB29: ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ಚಿಯಾನ್‌ ವಿಕ್ರಮ್; ನಟ ಹೇಳಿದ್ದೇನು?


Team Udayavani, Aug 6, 2024, 1:16 PM IST

9

ಹೈದರಾಬಾದ್:‌ ಸೂಪರ್‌ ಹಿಟ್‌ ನಿರ್ದೇಶಕ ಎಸ್ ಎಸ್‌ ರಾಜಮೌಳಿ (SS Rajamouli) ಹಾಗೂ ಟಾಲಿವುಡ್‌ (Tollywood) ಸೂಪರ್‌ ಸ್ಟಾರ್‌ ಮಹೇಶ್‌ ಬಾಬು (Mahesh Babu) ಕಾಂಬಿನೇಷನ್‌ನಲ್ಲಿ ಬಿಗ್‌ ಬಜೆಟ್‌ ಸಿನಿಮಾ ಬರುತ್ತಿರುವ ವಿಚಾರ ಗೊತ್ತೇ ಇದೆ.

ಈ ಪ್ಯಾನ್‌ ಇಂಡಿಯಾ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಚಿತ್ರದ ಅಪ್ಡೇಟ್‌ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಮಹೇಶ್‌ ಬಾಬು 29ನೇ ಚಿತ್ರ ಇದಾದ ಕಾರಣ ಸಿನಿಮಾಕ್ಕೆ ತಾತ್ಕಾಲಿಕವಾಗಿ ʼSSMB29ʼ ಟೈಟಲ್‌ ಇಡಲಾಗಿದೆ.

ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವು ಗಾಸಿಪ್‌ ಹಬ್ಬಿದೆ. ಕಾಲಿವುಡ್‌ ನಟ ಚಿಯಾನ್‌ ವಿಕ್ರಮ್‌ (Chiyaan Vikram) ʼSSMB29ʼ ಸಿನಿಮಾದ ಭಾಗವಾಗಲಿದ್ದಾರೆ ಎನ್ನುವ ಮಾತು ಟಾಲಿವುಡ್‌ ನಲ್ಲಿ ಹರಿದಾಡಿದೆ.

ವಿಕ್ರಮ್‌ ರಾಜಮೌಳಿ – ಮಹೇಶ್‌ ಬಾಬು ಅವರ ಸಿನಿಮಾದಲ್ಲಿ ನೆಗೆಟಿವ್‌ ರೋಲ್‌ ಗೆ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾತು ಸಿನಿವಲಯದ ಅಭಿಮಾನಿಗಳಲ್ಲಿ ಹರಿದಾಡಿದೆ.

ನಟ ವಿಕ್ರಮ್‌ ಅವರು ಈ ಮಾತಿಗೆ ಸ್ಪಷ್ಟನೆ ನೀಡಿದ್ದಾರೆ. ಹೈದರಾಬಾದ್‌ನಲ್ಲಿ ʼತಂಗಲಾನ್‌ʼ (Thangalaan) ಪ್ರಚಾರದ ವೇಳೆ ಮಾಧ್ಯಮದವರು ರಾಜಮೌಳಿ – ಮಹೇಶ್‌ ಬಾಬು ಸಿನಿಮಾದಲ್ಲಿ ನಟಿಸುತ್ತಿದ್ದೀರಾ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ರಾಜಮೌಳಿ ಅವರು ನನ್ನ ಒಳ್ಳೆಯ ಸ್ನೇಹಿತ. ನಾವು ಬಹಳ ಸಮಯದಿಂದ ಮಾತನಾಡುತ್ತಿದ್ದೇವೆ. ಖಂಡಿತವಾಗಿ ಮುಂದೊಂದು ದಿನ ನಾವು ಸಿನಿಮಾ ಮಾಡುತ್ತೇವೆ” ಎಂದಿದ್ದಾರೆ.

ಪೃಥ್ವಿರಾಜ್‌ ಸುಕುಮಾರನ್‌(Prithviraj Sukumaran) ರಾಜಮೌಳಿ ಅವರ ಸಿನಿಮಾದಲ್ಲಿ ವಿಲನ್‌ ಆಗಿ ನಟಿಲಿದ್ದಾರೆ ಎನ್ನಲಾಗಿದೆ. ಇದರ ನಡುವೆ ಬಾಲಿವುಡ್‌ ನಟ ಆಮೀರ್‌ ಖಾನ್‌ (Aamir Khan) ಅವರ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ ಯಾವುದು ಕೂಡ ಇನ್ನೂ ಅಧಿಕೃತವಾಗಿಲ್ಲ.

ಅಡ್ವೆಂಚರ್‌ ಜಂಗಲ್‌, ಸಾಹಸಮಯ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪಾತ್ರವು ರಾಮಾಯಣದ ಹನುಮಂತನಿಂದ ಪ್ರೇರಿತವಾಗಿದೆ ಎಂದು ಹೇಳಲಾಗಿದೆ.

ವಿಜಯೇಂದ್ರ ಪ್ರಸಾದ್ ಈ ಸಿನಿಮಾಕ್ಕೆ ಸ್ಕ್ರಿಪ್ಟ್‌ ಬರೆದಿದ್ದು, ಬಹುದೊಡ್ಡ ಪ್ರಾಜೆಕ್ಟ್‌ ಶೀಘ್ರದಲ್ಲಿ ಶುರುವಾಗುವ ಸಾಧ್ಯತೆಯಿದೆ.

“ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್‌ ಬಾಂಡ್‌ ಅಥವಾ ಇಂಡಿಯಾನ ಜೋನ್ಸ್‌  ಸಾಹಸದ ಹಾಗೆ ಭಾರತೀಯ ಶೈಲಿಯಲ್ಲಿ ಮೂಡಿಬರುವ ಚಿತ್ರ. ಥಿಯೇಟರ್‌ ನಲ್ಲಿ ಈ ಸಿನಿಮಾ ಎಲ್ಲರನ್ನೂ ರೋಮಾಂಚನಗೊಳಿಸಲಿದೆ” ಎಂದು ರಾಜಮಾಳಿ ಈ ಹಿಂದೆ ಹೇಳಿದ್ದರು.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Devara Part 1: ಭಾರೀ ಮೊತ್ತ ಕೊಟ್ಟು ʼದೇವರʼ ಡಿಜಿಟಲ್‌ ರೈಟ್ಸ್‌ ಖರೀದಿಸಿದ ನೆಟ್ ಫ್ಲಿಕ್ಸ್

3

Jayam Ravi: 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ನಟ ಜಯಂ ರವಿ

ರಜಿನಿ ಬಗ್ಗೆ 50 ಗಂಟೆ ಕಾಲ ನಾನ್‌ ಸ್ಟಾಪ್‌ ಲೈವ್‌ ಪಾಡ್‌ ಕಾಸ್ಟ್ ಮಾಡಿ ಗಿನ್ನಿಸ್ ದಾಖಲೆ

ರಜಿನಿ ಬಗ್ಗೆ 50 ಗಂಟೆ ಕಾಲ ನಾನ್‌ ಸ್ಟಾಪ್‌ ಲೈವ್‌ ಪಾಡ್‌ ಕಾಸ್ಟ್ ಮಾಡಿ ಗಿನ್ನಿಸ್ ದಾಖಲೆ

Dilli Babu: ಸೂಪರ್‌ ಹಿಟ್‌ ಸಿನಿಮಾಗಳಿಗೆ ಬಂಡವಾಳ ಹಾಕಿದ್ದ ಖ್ಯಾತ ನಿರ್ಮಾಪಕ ಇನ್ನಿಲ್ಲ

Dilli Babu: ಸೂಪರ್‌ ಹಿಟ್‌ ಸಿನಿಮಾಗಳಿಗೆ ಬಂಡವಾಳ ಹಾಕಿದ್ದ ಖ್ಯಾತ ನಿರ್ಮಾಪಕ ಇನ್ನಿಲ್ಲ

Filmmaker: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನಿರ್ದೇಶಕನಿಗೆ ಅಮಾನತು ಶಿಕ್ಷೆ

Filmmaker: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನಿರ್ದೇಶಕನಿಗೆ ಅಮಾನತು ಶಿಕ್ಷೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.