![Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ](https://www.udayavani.com/wp-content/uploads/2024/07/BYNDOOR-1-415x269.jpg)
LS polls: ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್; ಫೋಟೋಸ್ ವೈರಲ್
Team Udayavani, May 13, 2024, 11:55 AM IST
![6](https://www.udayavani.com/wp-content/uploads/2024/05/6-10-620x372.jpg)
ಹೈದರಾಬಾದ್: ನಾಲ್ಕನೇ ಹಂತದ ಲೋಕಸಭಾ ಚುನಾವಣೆ ಆರಂಭಗೊಂಡಿದೆ. ಮುಂಜಾನೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಮತವನ್ನು ಹಾಕಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿದ್ದಾರೆ.
ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಮತದಾನ ಆರಂಭಗೊಂಡಿದ್ದು, ನೂರಾರು ಮತದಾರರು ಮುಂಜಾನೆಯೇ ಮತವನ್ನು ಚಲಾಯಿಸಿದ್ದಾರೆ.
ಟಾಲಿವುಡ್ ಸೂಪರ್ ಸ್ಟಾರ್ ಗಳು ಬೆಳಗ್ಗೆ ಬೇಗನೇ ಮತವನ್ನು ಚಲಾಯಿಸಿದ್ದಾರೆ.
ಜೂಬಿಲಿ ಹಿಲ್ಸ್ನ ಓಬುಲ್ ರೆಡ್ಡಿ ಪಬ್ಲಿಕ್ ಶಾಲೆಯಲ್ಲಿ ಜೂನಿಯರ್ ಎನ್ಟಿಆರ್ ಮತ್ತು ಅವರ ಕುಟುಂಬಸ್ಥರು ಮತವನ್ನು ಚಲಾಯಿಸಿದ್ದಾರೆ. ಜೂ.ಎನ್ ಟಿಆರ್ ಪತ್ನಿ ಲಕ್ಷ್ಮಿ ಪ್ರಣತಿ ,ತಾಯಿ ಶಾಲಿನಿ ನಂದಮೂರಿ ಅವರೊಂದಿಗೆ ಬಂದು ಮತವನ್ನು ಚಲಾಯಿಸಿದ್ದಾರೆ.
ಇನ್ನು ನಟ ಅಲ್ಲು ಅರ್ಜುನ್ ಒಬ್ಬರೇ ಮತ ಚಲಾಯಿಸಲು ಬಂದಿದ್ದರು. “ದಯವಿಟ್ಟು ನಿಮ್ಮ ಮತಗಳನ್ನು ಚಲಾಯಿಸಿ. ಇದು ಅತ್ಯಂತ ಜವಾಬ್ದಾರಿಯುತ ದಿನ. ತುಂಬಾ ಬಿಸಿಲಿದೆ ಎಂದು ನನಗೆ ತಿಳಿದಿದೆ, ಆದರೆ ಈ ದಿನವು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತದೆ” ಎಂದು ಅಲ್ಲು ಅರ್ಜುನ್ ಮತ ಚಲಾಯಿಸಿದ ಬಳಿಕ ಹೇಳಿದ್ದಾರೆ.
ಇತ್ತ ಮೆಗಾಸ್ಟಾರ್ ಚಿರಂಜೀವಿ ತಮ್ಮ ಪತ್ನಿ ಸುರೇಖಾ ಮತ್ತು ಪುತ್ರಿ ಸುಶ್ಮಿತಾ ಅವರೊಂದಿಗೆ ಮತ ಚಲಾಯಿಸಲು ಆಗಮಿಸಿದ್ದರು.
ನಟ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಮಂಗಳಗಿರಿಯಲ್ಲಿ ತಮ್ಮ ಮತವನ್ನು ಚಲಾಯಿಸಿದರು. ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ಅವರೊಂದಿಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ ವಿಡಿಯೋಗಳು ವೈರಲ್ ಆಗಿವೆ.
ನಿರ್ದೇಶಕ ರಾಜಮೌಳಿ ಪತ್ನಿ, ಪುತ್ರನೊಂದಿಗೆ ದುಬೈಯಿಂದ ನೇರವಾಗಿ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ ಎಂದು ಹೇಳಿದ್ದಾರೆ.
ನಟರಾದ ನಂದಮೂರಿ ಕಲ್ಯಾಣರಾಮ್ , ಮೋಹನ್ ಬಾಬು, ವಿಷ್ಣು ಮಂಚು ಮತ್ತು ನಾಗ ಚೈತನ್ಯ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತ ಚಲಾಯಿಸಿದರು.
ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾದಲ್ಲಿ ಮತದಾನ ನಡೆಯುತ್ತಿದೆ.
.@alluarjun casts his vote. #AlluArjun #Elections2024 pic.twitter.com/bdNA06Qu3H
— Suresh PRO (@SureshPRO_) May 13, 2024
ಟಾಪ್ ನ್ಯೂಸ್
![Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ](https://www.udayavani.com/wp-content/uploads/2024/07/BYNDOOR-1-415x269.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![Salaar 2: ಪ್ರಶಾಂತ್ ನೀಲ್ – ಪ್ರಭಾಸ್ ʼಸಲಾರ್-2ʼ ಸೆಟ್ಟೇರಲು ಡೇಟ್ ಫಿಕ್ಸ್](https://www.udayavani.com/wp-content/uploads/2024/07/15-1-150x90.jpg)
Salaar 2: ಪ್ರಶಾಂತ್ ನೀಲ್ – ಪ್ರಭಾಸ್ ʼಸಲಾರ್-2ʼ ಸೆಟ್ಟೇರಲು ಡೇಟ್ ಫಿಕ್ಸ್
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![7](https://www.udayavani.com/wp-content/uploads/2024/07/7-2-150x90.jpg)
‘The Indian House’ Movie: ರಾಮ್ಚರಣ್ ನಿರ್ಮಾಣದಲ್ಲಿ ʼದಿ ಇಂಡಿಯನ್ ಹೌಸ್ʼ
MUST WATCH
ಹೊಸ ಸೇರ್ಪಡೆ
![Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ](https://www.udayavani.com/wp-content/uploads/2024/07/BYNDOOR-1-150x97.jpg)
Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ
BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್.ಯಡಿಯೂರಪ್ಪ
![ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ](https://www.udayavani.com/wp-content/uploads/2024/07/HEBRI-150x100.jpg)
Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ
![Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ](https://www.udayavani.com/wp-content/uploads/2024/07/baje-150x110.jpg)
Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ
![V.kageri](https://www.udayavani.com/wp-content/uploads/2024/07/V.kageri-150x90.jpg)
BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.