Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
Team Udayavani, Sep 18, 2024, 3:15 PM IST
ಬೆಂಗಳೂರು/ ಚೆನ್ನೈ: ಬಹುಭಾಷ ನಟಿಯಾಗಿ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದ ನಟಿ ಶಕುಂತಲಾ (Sakunthala) ಹೃದಯಾಘಾತದಿಂದ ಮಂಗಳವಾರ(ಸೆ.17ರಂದು) ನಿಧನರಾಗಿದ್ದಾರೆ.
ಬೆಂಗಳೂರಿನಲ್ಲಿ ತನ್ನ ಮಗಳ ಮನೆಯಲ್ಲಿ ವಾಸಿಸುತ್ತಿದ್ದ ಅವರು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳವಾರ ಮಧ್ಯಾಹ್ನ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸಂಜೆ ವೇಳೆಗೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಸೇಲಂ ಜಿಲ್ಲೆಯ ಅರಿಸಿಪಾಳ್ಯಂನವರಾಗಿದ್ದ ಅವರು ಆರಂಭದಲ್ಲಿ ಡ್ಯಾನ್ಸರ್ ಆಗಿ ಗುರುತಿಸಿಕೊಂಡಿದ್ದರು. ಆ ಬಳಿಕ ಸಣ್ಣಪುಟ್ಟ ಪಾತ್ರಗಳಿಂದ ತಮಿಳು ಚಿತ್ರರಂಗಕ್ಕೆ ಪ್ರವೇಶ ಪಡೆದಿದ್ದರು.
ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಸುಮಾರು 600 ಸಿನಿಮಾಗಳಲ್ಲಿ ಅವರು ನಟಿಸಿದ್ದರು ಎಂದು ವರದಿ ತಿಳಿಸಿದೆ.
1970ರಲ್ಲಿ ಬಂದ ಪೊಲೀಸ್ ಥ್ರಿಲ್ಲರ್, ʼಸಿಐಡಿ ಶಂಕರ್ʼ ಸಿನಿಮಾದಲ್ಲಿನ ಅವರ ಅಭಿನಯ ಚಿತ್ರರಂಗದಲ್ಲಿ ಇನ್ನಷ್ಟು ಅವಕಾಶಗಳು ಅವರನ್ನು ಹುಡುಕಿಕೊಂಡು ಬರುವಂತೆ ಮಾಡಿತು. ಈ ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ಜೈಶಂಕರ್ ನಟಿಸಿದ್ದರು.
ಶಿವಾಜಿ ಗಣೇಶನ್ ಮತ್ತು ಎಂಜಿಆರ್ ಅವರಂತಹ ದಿಗ್ಗಜ ನಟರೊಂದಿಗೆ ಅವರು ತೆರೆ ಹಂಚಿಕೊಂಡಿದ್ದರು. ʼಪಾಡಿಕ್ಕಡ ಮೆತೈʼ , ʼಕೈ ಕೊಡುತ್ತ ಧೈವಂʼ, ‘ಪೊನ್ನುಂಚಲ್’, ‘ರಾಜರಾಜ ಚೋಳನ್’,‘ಅಶಿಕ್ಷಿತ ಪ್ರತಿಭೆ’, ‘ಕೊಟ್ಟ ದೇವತೆ’, ‘ಪಶ್ಚಾತ್ತಾಪ’, ‘ವಸಂತ ಅರಮನೆ’, ‘ನ್ಯಾಯ’, ‘ಭಾರತ ವಿಲಾಸ’ , ನೇತಾಜಿ (1996), ನಾನ್ ವನಂಗುಮ್ ದೈವಂ (1963) ಸೇರಿದಂತೆ ಹಲವು ಸಿನಿಮಾದಲ್ಲಿ ನಟಿಸಿದ್ದರು.
1998 ರಲ್ಲಿ ಬಂದ ʼಪೊನ್ಮಾನೈ ತೇಡಿʼ ಸಿನಿಮಾದಲ್ಲಿ ಅವರು ಕೊನೆಯದಾಗಿ ನಟಿಸಿದ್ದರು. ಇದಾದ ಬಳಿಕ ಅವರು 2019ರವರೆಗೆ ಧಾರಾವಾಹಿಗಳಲ್ಲಿ ನಟಿಸಿದ್ದರು. 9 ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದರು.
ಅವರ ನಿಧನಕ್ಕೆ ಅನೇಕ ಸಿನಿಮಾ ಮಂದಿ ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.