Toxic Movie: ಯಶ್ ʼಟಾಕ್ಸಿಕ್ʼ ರಿಲೀಸ್ ಡೇಟ್ ಮುಂದೂಡಿಕೆ ಸಾಧ್ಯತೆ; ಕಾರಣವೇನು?
Team Udayavani, Jul 28, 2024, 2:47 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಅವರ ಯಶ್ (Actor Yash) ಪ್ಯಾನ್ ಇಂಡಿಯಾ ʼಟಾಕ್ಸಿಕ್ʼ (Toxic Movie) ಸಿನಿಮಾ ಅನೌನ್ಸ್ ಆದ ದಿನದಿಂದಲೇ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಮಾಲಿವುಡ್ ನ ಗೀತು ಮೋಹನ್ ದಾಸ್ (Geetu Mohandas) ಅವರೊಂದಿಗೆ ರಾಕಿಭಾಯ್ ಸಿನಿಮಾ ಮಾಡಲಿದ್ದಾರೆ. ‘ಟಾಕ್ಸಿಕ್ʼ ಪಾತ್ರವರ್ಗದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಆರಂಭದಲ್ಲಿ ಕರೀನಾ ಕಪೂರ್ (Kareena Kapoor) ಯಶ್ ಸಹೋದರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ಈ ಪ್ರಾಜೆಕ್ಟ್ ನಿಂದ ಅವರು ಹೊರಹೋಗಿದ್ದು, ಇವರ ಜಾಗಕ್ಕೆ ನಯನತಾರಾ (Nayanthara) ಅವರು ಬರಲಿದ್ದಾರೆ ಎನ್ನಲಾಗಿದೆ. ಪ್ರಮುಖ ಪಾತ್ರಗಳಲ್ಲಿ ಕಿಯಾರಾ ಅಡ್ವಾಣಿ (Kiara Advani) ಮತ್ತು ಹುಮಾ ಖುರೇಷಿ (Human Qureshi) ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸಿನಿಮಾ ಅನೌನ್ಸ್ ಆದ ದಿನವೇ ರಿಲೀಸ್ ಡೇಟ್ ಕೂಡ ರಿವೀಲ್ ಆಗಿದ್ದು, ಇದೀಗ ಈ ರಿಲೀಸ್ ಡೇಟ್ ಮುಂದೂಡಿಕೆ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ʼಟಾಕ್ಸಿಕ್ʼ ರಿಲೀಸ್ ಮುಂದೂಡಿಕೆ ಸಾಧ್ಯತೆ?: ʼಟಾಕ್ಸಿಕ್ʼ ದೇಶಾದ್ಯಂತದ ಹಲವಾರು ಖ್ಯಾತ ಕಲಾವಿದರನ್ನು ಒಟ್ಟುಗೂಡಿಸಲಿದೆ. ಇದಕ್ಕಾಗಿ ಚಿತ್ರತಂಡ ಸಾಕಷ್ಟು ತಯಾರಿಯನ್ನು ನಡೆಸಲಿದೆ. ಈ ಕಲಾವಿದರ ದಿನಾಂಕಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಈ ಕಾರಣದಿಂದ ಈಗಾಗಲೇ ನಿಗದಿಪಡಿಸಿರುವ ರಿಲೀಸ್ ಡೇಟ್ ಗಿಂತ ಹೆಚ್ಚಿನ ಸಮಯ ಇದಕ್ಕೆ ಬೇಕಾಗಬಹುದು ಎಂದು ವರದಿಯಾಗಿದೆ.
ಆದರೆ ಈ ಬಗ್ಗೆ ಚಿತ್ರತಂಡದಿಂದ ಇನ್ನು ಕೂಡ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಗೋವಾದಲ್ಲಿನ ಡ್ರಗ್ ಕಾರ್ಟೆಲ್ ಸುತ್ತ ʼಟಾಕ್ಸಿಕ್ʼ ಕಥೆ ಸುತ್ತುತ್ತದೆ. ಬಿಗ್ ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಕೆವಿಎನ್ ಪ್ರೊಡಕ್ಷನ್ ಹಾಗೂ ಮಾನ್ ಸ್ಟಾರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಲಿದೆ.
2025ರ ಏ.10ರಂದು ಸಿನಿಮಾ ರಿಲೀಸ್ ಆಗುವುದಾಗಿ ಚಿತ್ರತಂಡ ಈಗಾಗಲೇ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
OTT Release: ಚಿಯಾನ್ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.