![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 20, 2021, 10:34 AM IST
ನವದೆಹಲಿ:ಭಾರತದಲ್ಲಿ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 2.59 ಲಕ್ಷ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 1761 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1.53 ಕೋಟಿಗೆ ಏರಿಕೆಯಾಗಿದೆ.
ಇದನ್ನೂ ಓದಿ:2020-21ನೇ ಹಣಕಾಸು ವರ್ಷದಲ್ಲಿ ಚಿನ್ನದ ಆಮದು ಶೇ. 22.58 ಏರಿಕೆ..!
ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಸತತವಾಗಿ 2ಲಕ್ಷಕ್ಕಿಂತಲೂ ಅಧಿಕ ಕೋವಿಡ್ ಸೋಂಕು ಪ್ರಕರಣ ವರದಿಯಾಗುತ್ತಿದೆ. ಜಗತ್ತಿನಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣ ಹೊಂದಿರುವ ದೇಶಗಳಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ.
ಕೋವಿಡ್ 2ನೇ ಅಲೆ ದೇಶದಲ್ಲಿ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಗೆ ಇದ್ದ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಿರುವ ಕೇಂದ್ರ ಸರ್ಕಾರ, ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವ್ಯಕ್ತಿಗಳಿಗೂ ಲಸಿಕೆ ಪಡೆಯುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.
ಲಸಿಕೆಯನ್ನು ಉತ್ಪಾದಿಸುವ ಕಂಪನಿಗಳು ಶೇ.50ರಷ್ಟು ಡೋಸ್ ಗಳನ್ನು ಕೇಂದ್ರ ಸರ್ಕಾರಕ್ಕೆ ಸರಬರಾಜು ಮಾಡಬೇಕು, ಉಳಿದ ಲಸಿಕೆಗಳನ್ನು ರಾಜ್ಯ ಸರ್ಕಾರಗಳಿಗೆ ಹಾಗೂ ಮಾರುಕಟ್ಟೆಗೆ ಸರಬರಾಜು ಮಾಡಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಈವರೆಗೆ 38.98 ಲಕ್ಷ ಕೋವಿಡ್ ಪ್ರಕರಣ ವರದಿಯಾಗಿದೆ, ಸಾವಿನ ಸಂಖ್ಯೆ 60,824ಕ್ಕೆ ಏರಿಕೆಯಾಗಿದೆ. ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿಯೂ ಕೋವಿಡ್ ಸೋಂಕು ಪ್ರಕರಣ ಅಧಿಕವಾಗಿದೆ ಎಂದು ವರದಿ ತಿಳಿಸಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.