![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 11, 2020, 12:31 PM IST
ನವದೆಹಲಿ:ದಾಖಲೆ ಪ್ರಮಾಣದಲ್ಲಿ ಭಾರತದಲ್ಲಿ ಕಳೆದ 24ಗಂಟೆಯಲ್ಲಿ 9,996 ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿದ್ದು, 357 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಪ್ರಮಾಣ 2.8 ಲಕ್ಷ ದಾಟಿದೆ.
ಕಳೆದ ಒಂಬತ್ತು ದಿನದಲ್ಲಿ ಸತತವಾಗಿ 9000 ಸಾವಿರ ಕೋವಿಡ್ ಪ್ರಕರಣ ವರದಿಯಾಗುತ್ತಿದೆ. ಕೋವಿಡ್ 19 ಸೋಂಕು ಹರಡಲು ಆರಂಭವಾದಾಗಿನಿಂದ ಈವರೆಗೆ ಭಾರತದಲ್ಲಿ 5 ಮಿಲಿಯನ್ ಗಿಂತಲೂ ಹೆಚ್ಚು ಜನರು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದನ್ನೂ ಓದಿ:ದೇಶದಲ್ಲಿ 2.7 ಲಕ್ಷ ದಾಟಿದ ಕೋವಿಡ್-19 ಪ್ರಕರಣ: ಮಹಾರಾಷ್ಟ್ರದಲ್ಲಿ 94 ಸಾವಿರ ಸೋಂಕಿತರು
ಬುಧವಾರ ಒಂದೇ ದಿನ 1,51,808 ಮಂದಿಗೆ ದಾಖಲೆ ಪ್ರಮಾಣದಲ್ಲಿ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ ಎಂದು ವಿವರಿಸಿದೆ. ದೇಶದಲ್ಲಿ ಮಾರಣಾಂತಿಕ ಕೋವಿಡ್ 19 ವೈರಸ್ ಗೆ ಈವರೆಗೆ 8,102 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅತೀ ಹೆಚ್ಚು ಮಂದಿ ಸಾವನ್ನಪ್ಪಿರುವುದು ಮಹಾರಾಷ್ಟ್ರದಲ್ಲಿ. ಪ್ರಸ್ತುತ ದೇಶದಲ್ಲಿ ಮಹಾರಾಷ್ಟ್ರ ಕೋವಿಡ್ ಹಾಟ್ ಸ್ಪಾಟ್ ಆಗಿದ್ದು, 3,483 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ನಾಲ್ಕೇ ತಿಂಗಳಲ್ಲಿ ಎನ್- 95 ಮಾಸ್ಕ್ ದರ ಶೇ.250 ಹೆಚ್ಚಳ
ದೇಶದಲ್ಲಿ 2.8 ಲಕ್ಷ ಕೋವಿಡ್ ಪ್ರಕರಣ ದಾಖಲಾಗಿದೆ. ಇದರಲ್ಲಿ 1,37,448 ಜನರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದು, 1,41,029 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.