![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 25, 2020, 5:33 AM IST
ಸ್ಪ್ಯಾನಿಷ್ ದ್ವೀಪ: ಇಲ್ಲಿನ ಜನರು ಸಾಮಾಜಿಕ ಅಂತರವನ್ನು ಮರೆತು ಕಂಡಿದ್ದು ಹೀಗೆ.
ರೋಮ್: ಸದ್ಯ ವಿಶ್ವದ ಬಹತೇಕ ರಾಷ್ಟ್ರಗಳು ಕೋವಿಡ್ ಸೋಂಕನ್ನು ನಿಷ್ಕ್ರಿಯಗೊಳಿಸುವ ಲಸಿಕೆ ಅಭಿವೃದ್ಧಿ ಕಾರ್ಯದ ಹಿಂದೆ ಬಿದ್ದಿದ್ದಾರೆ. ಇದೀಗ ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನಪಡೆದಿದ್ದ ಇಟಲಿಯಲ್ಲಿ ಸೋಮವಾರದಿಂದ ಕೋವಿಡ್ ಲಸಿಕೆಯ ಪ್ರಯೋಗ ಆರಂಭವಾಗಿದೆ.
ಈ ಸಂಭಾವ್ಯ ಲಸಿಕೆಗೆ “ಜಿಆರ್ಎಡಿ-ಕೋವ್2′ ಎಂದು ಹೆಸರಿಸಲಾಗಿದ್ದು, ರೋಮ್ ಮೂಲದ ರೀಥೆರಾ ಎಂಬ ಕಂಪನಿ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಈ ಲಸಿಕೆಯನ್ನು ಮಿಲಾನ್ನ ಸುತ್ತಲಿನ ಪ್ರದೇಶಗಳಲ್ಲಿರುವ ಪ್ರಾಣಿಗಳ ಮೇಲೆ ಪ್ರಯೋಗ ನಡೆಸಿದ್ದು, ಸಕಾರಾತ್ಮಕ ಪರಿಣಾಮ, ಫಲಿತಾಂಶಗಳು ಲಭ್ಯವಾಗಿವೆ ಎಂದು ತಜ್ಞರು ತಿಳಿಸಿದ್ದಾರೆ. ರೋಮ್ನ ಲಝಾರೊ ಸ್ಪಲಾಂಝನಿ ಇನ್ಸ್ಟಿಟ್ಯೂಟ್ ಈ ಲಸಿಕೆಯನ್ನು ಮಾನವರ ಮೇಲೆ ಪ್ರಯೋಗ ನಡೆಸಲು ಮುಂದಾಗಿದ್ದು, ಸೋಂಕು ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ಪರಿಣತಿ ಹೊಂದಿರುವ ಲಝಾರೊ ಮುಂದಿನ ವಾರ 90 ಸ್ವಯಂ ಸೇವಕರ ಮೇಲೆ ಈ ಲಸಿಕೆಯನ್ನು ಪ್ರಯೋಗಿಸಲಾಗುತ್ತಿದೆ. ಮುಂದಿನ ವರ್ಷದ ಮಳೆಗಾಲದ ಹೊತ್ತಿಗೆ ಅಧಿಕೃತವಾಗಿ ಲಸಿಕೆ ಲಭ್ಯವಾಗುವ ವಿಶ್ವಾಸವಿದೆ ಎನ್ನುತ್ತಿದ್ದಾರೆ ಸಂಸ್ಥೆಯ ಮುಖ್ಯಸ್ಥರು. ಲಸಿಕೆ ಪ್ರಯೋಗ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸ್ಪಲಾಂಝನಿ ಆಸ್ಪತ್ರೆಯ ಆರೋಗ್ಯ ನಿರ್ದೇಶಕ ಫ್ರಾನ್ಸಿಸ್ಕೊ ವೈಯಾ, “ಮೊದಲು ಲಸಿಕೆಯ ಪ್ರಯೋಗಕ್ಕೆ ಒಳಪಟ್ಟ ವ್ಯಕ್ತಿಯನ್ನು ಮನೆಗೆ ಕಳುಹಿಸುವ ಮುನ್ನ 4 ಗಂಟೆಗಳ ಕಾಲ ನಿಗಾವಹಿಸಲಾಗುತ್ತದೆ. ಅನಂತರ 12 ವಾರಗಳ ಕಾಲ ಆ ವ್ಯಕ್ತಿಯ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ಏನಾದರೂ ಆರೋಗ್ಯದ ಮೇಲೆ ಅಡ್ಡ ಅಪರಿಣಾಮಗಳು ಉಂಟಾದರೆ, ತತ್ಕ್ಷಣ ಅದಕ್ಕೆ ಚಿಕಿತ್ಸೆ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.