![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 20, 2022, 3:33 PM IST
ಬೆಂಗಳೂರು : ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಸಡಿಲಿಕೆ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳದ ಮಧ್ಯೆಯೇ ಸಂಪುಟದ ಸದಸ್ಯರು ಹಾಗೂ ಸಂಸದರು ಕರ್ಫ್ಯೂ ಸಡಿಲಿಸುವಂತೆ ಸಿಎಂ ಮೇಲೆ ಒತ್ತಡ ಹಾಕಿದ್ದಾರೆ.
ಹೀಗಾಗಿ ಶುಕ್ರವಾರ ನಡೆಯುವ ಸಭೆಯಲ್ಲಿ ಸರಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಿದ್ದು, ಸೋಂಕು ನಿಯಂತ್ರಣದ ಜವಾಬ್ದಾರಿಯನ್ನು ಜಿಲ್ಲಾಡಳಿತದ ಹೆಗಲಿಗೆ ಏರಿಸುವ ಸಾಧ್ಯತೆ ಇದೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಾರಾಂತ್ಯದ ಕರ್ಫ್ಯೂ ಸಡಿಲಿಕೆ ಮಾಡುವಂತೆ ಸಿಎಂ ಮೇಲೆ ಒತ್ತಡ ಹೇರಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿ.ಟಿ.ರವಿ, ಪ್ರತಾಪ್ ಸಿಂಹ ಕೂಡಾ ಸರಕಾರದ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ವಪಕ್ಷೀಯರ ಟೀಕೆಯಿಂದ ಸಿಎಂ ಬೊಮ್ಮಾಯಿ ಬೇಸರಗೊಂಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಸಂದರ್ಭದಲ್ಲೂ ಬೊಮ್ಮಾಯಿ ಈ ವಿಚಾರ ಪ್ರಸ್ತಾಪಿಸಿದ್ದು, ತಜ್ಞರ ಸೂಚನೆಯಂತೆ ನಡೆದುಕೊಳ್ಳಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಬಲಕ್ಕೆ ಅಶೋಕ್
ಲಾಕ್ಡೌನ್ ವಿಚಾರದಲ್ಲಿ ಕಂದಾಯ ಸಚಿವ ಅಶೋಕ್ ಸಿಎಂ ಬೆಂಬಲಕ್ಕೆ ನಿಂತಿದ್ದಾರೆ. ಜೀವ, ಜೀವನದ ಪ್ರಶ್ನೆ ಬಂದಾಗ ಜೀವಕ್ಕೆ ಮೊದಲ ಆದ್ಯತೆ ನೀಡಬೇಕು. ಹೀಗಾಗಿ ಬಿಗಿ ನಿಯಮ ಸಡಿಲಿಕೆ ಮಾಡುವಾಗ ಹತ್ತು ಬಾರಿ ಯೋಚಿಸಬೇಕೆಂದು ಅಶೋಕ ಸಲಹೆ ನೀಡಿದ್ದಾರೆ.
ಜನರ ಜೀವನ ಉಳಿಸೋದು ಕೂಡ ಗಮನದಲ್ಲಿದೆ
ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ನಾಳೆ (ಶುಕ್ರವಾರ) ಕೋವಿಡ್, ಹೊಸ ಗೈಡ್ಲೈನ್ಸ್ ಬಗ್ಗೆ ಚರ್ಚೆಗೆ ಸಿಎಂ ನೇತೃತ್ವದಲ್ಲಿ 1ಗಂಟೆಗೆ ಸಭೆ ಕರೆದಿದ್ದು,ಕೋವಿಡ್ ತಜ್ಞರ ಸಮಿತಿ, ಸಚಿವರಾದ ಸುಧಾಕರ್, ಅಶ್ವಥ್ ನಾರಾಯಣ್, ಅರಗ ಮೊದಲಾದವರು ಭಾಗವಹಿಸುತ್ತಾರೆ.
ಈವರೆಗೆ ರಾಜಕೀಯವಾಗಿ ಮೂರು ಪಕ್ಷದವರು ವೈಯಕ್ತಿಕ ಹೇಳಿಕೆ ನೀಡಿದ್ದಾರೆ.ಸಂಘಸಂಸ್ಥೆಗಳು ಕೂಡ ಹೇಳಿಕೆ ನೀಡಿದಿವೆ.ಈ ನಡುವೆ ಕೇಂದ್ರ ಸರ್ಕಾರ ವಿದೇಶಿ ವಿಮಾನಯಾನ ರದ್ದು ಮಾಡಿದೆ ಎಂದರು.
ತಜ್ಞರು ವರದಿ ನೀಡಿರು ಬಗ್ಗೆಯೂ ಚರ್ಚೆ ಆಗಲಿದೆ.ಸೋಂಕು ಏರಿಕೆ ಆಗುತ್ತಾ ಇದೆ.ಬೆಂಗಳೂರು ನಗರದಲ್ಲಿ ಹೆಚ್ಚುತ್ತಿದ್ದು, ಒಮಿಕ್ರಾನ್ ಕೂಡ ಹೆಚ್ಚುತ್ತಿದೆ. ಸಚಿವ ಸುಧಾಕರ್ ಕೂಡ ಸೋಂಕು ಏರಿಕೆ ಬಗ್ಗೆ ಮಾತನಾಡಿದ್ದಾರೆ.
ಜೊತೆಯಲ್ಲಿ ಜನರ ಜೀವನ ಉಳಿಸೋದು ಕೂಡ ಗಮನದಲ್ಲಿದೆ, ಜೀವ, ಜೀವನ ಎರಡೂ ಗಮನದಲ್ಲಿಟ್ಟುಕೊಂಡು ಎಸ್ ಓ ಪಿ ಬಿಡುಗಡೆ ಮಾಡುತ್ತೇವೆ. ಬೀದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರ ವಿಚಾರವೂ ಗಮನದಲ್ಲಿದೆ. ನಾಳೆ ಮಧ್ಯಾಹ್ನ 2.30ರ ವೇಳೆಗೆ ನಿರ್ಧಾರ ಆಗಲಿದೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.