ನಾಳೆಯಿಂದ ರೈಲು ಸೇವೆ ಪುನರಾರಂಭ, 4 ಗಂಟೆಗೆ ಟಿಕೆಟ್ ಬುಕ್ಕಿಂಗ್: ಹೊಸ ನಿಯಮ ತಿಳಿದುಕೊಳ್ಳಿ

ನಿಲ್ದಾಣದಲ್ಲಿ ಟೆಂಪರೇಚರ್ ಸ್ಕ್ರೀನಿಂಗ್ ಕಡ್ಡಾಯ. ರೈಲ್ವೆ ನಿಲ್ದಾಣಕ್ಕೆ ಒಂದು ಗಂಟೆ ಮುನ್ನ ಆಗಮಿಸಬೇಕು

Team Udayavani, May 11, 2020, 12:35 PM IST

ನಾಳೆಯಿಂದ ರೈಲು ಸೇವೆ ಪುನರಾರಂಭ, 4 ಗಂಟೆಗೆ ಟಿಕೆಟ್ ಬುಕ್ಕಿಂಗ್: ಹೊಸ ನಿಯಮ ತಿಳಿದುಕೊಳ್ಳಿ

Representative Image

ನವದೆಹಲಿ: ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ರೈಲು ಸಂಚಾರ ಸ್ಥಗಿತಗೊಂಡು ಒಂದೂವರೆ ತಿಂಗಳು ಕಳೆದಿದೆ. ಇದೀಗ ಭಾರತೀಯ ರೈಲ್ವೆ ನಾಳೆಯಿಂದ ರೈಲು ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ. ಕೋವಿಡ್ 19 ವಿರುದ್ಧ ಹೋರಾಡಲು ಜಾರಿಗೊಳಿಸಿದ್ದ 3ನೇ ಹಂತದ ಲಾಕ್ ಡೌನ್ ಮೇ 17ರಂದು ಅಂತ್ಯಗೊಳ್ಳಲಿದೆ.

ಕೋವಿಡ್ 19 ವೈರಸ್ ತಡೆಯಲು ಮಾರ್ಚ್ ತಿಂಗಳಾಂತ್ಯದಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿತ್ತು. ಮಾರ್ಚ್ 22ರಿಂದ ಎಲ್ಲಾ ಪ್ರಯಾಣಿಕ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಮಂಗಳವಾರದಿಂದ ಪ್ರತಿದಿನ 15 ರೈಲುಗಳು ಸಂಚಾರ ನಡೆಸಲಿವೆ. ಈ ವಿಶೇಷ ರೈಲುಗಳು ನವದೆಹಲಿಯಿಂದ ದಿಬ್ರುಗಢ್, ಅಗರ್ತಾಲಾ, ಹೌರಾ, ಪಾಟ್ನ, ಬಿಲಾಸ್ ಪುರ್, ರಾಂಚಿ, ಭುವನೇಶ್ವರ್, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮುವಿನ ಟಾವ್ವಿಗೆ ಸಂಚರಿಸಲಿದೆ. ಈ ರೈಲು ಕೆಲವು ಕಡೆ ಮಾತ್ರ ನಿಲುಗಡೆಯಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಾರದಲ್ಲಿ ಹವಾನಿಯಂತ್ರಿತ ರೈಲು ಸೇವೆ ಆರಂಭವಾಗಲಿದೆ. ಟಿಕೆಟ್ ದರ ರಾಜಧಾನಿ ಎಕ್ಸ್ ಪ್ರೆಸ್ ನ ದರಕ್ಕೆ ಸಮಾನಂತರವಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಇಂದು ಸಂಜೆ 4ಗಂಟೆಯಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭ ಎಂದು ವರದಿ ಹೇಳಿದೆ.

ಪ್ರಯಾಣಿಕರು ಐಆರ್ ಸಿಟಿಸಿ ವೆಬ್ ಸೈಟ್ ಅಥವಾ ಐಆರ್ ಸಿಟಿಸಿ ಮೊಬೈಲ್ ಆ್ಯಪ್ ಮೂಲಕ ಮಾತ್ರ ಟಿಕೆಟ್ ಖರೀದಿಸಬೇಕು. ರೈಲ್ವೆ ನಿಲ್ದಾಣಗಳಲ್ಲಿನ ಟಿಕೆಟ್ ಬುಕ್ಕಿಂಗ್ ಕೌಂಟರ್ ಬಂದ್ ಮುಂದುವರಿದಿದೆ. ಅಲ್ಲದೇ ತತ್ಕಾಲ್ ಮತ್ತು ಪ್ರೀಮಿಯಂ ತತ್ಕಾಲ್ ಟಿಕೆಟ್ ಬುಕ್ ಮಾಡುವ ಅವಕಾಶ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಿಕೆಟ್ ಕನ್ ಫರ್ಮ್ ಆದ ಪ್ರಯಾಣಿಕರನ್ನು ಮಾತ್ರ ರೈಲ್ವೆ ನಿಲ್ದಾಣದೊಳಕ್ಕೆ ಬಿಡಲಾಗುವುದು. ಫ್ಲ್ಯಾಟ್ ಫಾರಂ ಟಿಕೆಟ್ ಕೊಡುವುದಿಲ್ಲ. ಎಲ್ಲಾ ಪ್ರಯಾಣಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ನಿಲ್ದಾಣದಲ್ಲಿ ಟೆಂಪರೇಚರ್ ಸ್ಕ್ರೀನಿಂಗ್ ಕಡ್ಡಾಯ. ರೈಲ್ವೆ ನಿಲ್ದಾಣಕ್ಕೆ ಒಂದು ಗಂಟೆ ಮುನ್ನ ಆಗಮಿಸಬೇಕು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಇತರ ಹೊಸ ಮಾರ್ಗಗಳಲ್ಲಿಯೂ ವಿಶೇಷ ರೈಲು ಸಂಚಾರ ಕೂಡಲೇ ಆರಂಭಿಸಲಾಗುವುದು. ಕೋವಿಡ್ 19 ಕೇರ್ ಸೆಂಟರ್ ಗಾಗಿ 20 ಸಾವಿರ ಕೋಚ್ ಗಳನ್ನು ಬಳಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿದಿನ 300 ರೈಲುಗಳು ಮಾತ್ರ ಕಾರ್ಯಾಚರಿಸಲು ಸಾಧ್ಯತೆ ಇದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.