BIES ಕೋವಿಡ್ 19 ಕೇರ್ ಕೇಂದ್ರ ಆರಂಭ; ತಕ್ಷಣಕ್ಕೆ 1,536 ಹಾಸಿಗೆಗಳು ಲಭ್ಯ

ಒಟ್ಟು 10,100 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರ ಸೋಂಕಿತರ ಆರೈಕೆಗೆ ಸಜ್ಜು

Team Udayavani, Jul 27, 2020, 8:53 PM IST

BIES ಕೋವಿಡ್ 19 ಕೇರ್ ಕೇಂದ್ರ ಆರಂಭ; ತಕ್ಷಣಕ್ಕೆ 1,536 ಹಾಸಿಗೆಗಳು ಲಭ್ಯ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ, ಕೋವಿಡ್ 19 ಕಾರಣದಿಂದ ಭವಿಷ್ಯದಲ್ಲಿ ಎದುರಾಗಬಹುದಾದ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರ ಸರ್ವ ಸಜ್ಜಾಗಿದೆ.

ಇದರ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ದೇಶದ ಅತಿದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (BIES) ಸ್ಥಾಪಿಸಲಾಗಿರುವ 10,100 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರವು ನಾಳೆಯಿಂದಲೇ ಬಳಕೆಗೆ ಲಭ್ಯವಾಗಲಿದೆ.

ಮೊದಲ ಹಂತದಲ್ಲಿ 1,536 ಹಾಸಿಗೆಗಳು ಬಳಕೆಗೆ ಲಭ್ಯವಾಗಲಿವೆ. ಕೂಡಲೇ ಈ ಕೇಂದ್ರಕ್ಕೆ ಸೋಂಕಿತರನ್ನು ಸ್ಥಳಾಂತರಿಸಿ ಚಿಕಿತ್ಸೆ ನೀಡಬಹುದಾಗಿದೆ.

ಪಂಚತಾರಾ ಹೋಟೆಲಿನಂಥ ಸೌಲಭ್ಯಗಳನ್ನು ಒಳಗೊಂಡಿರುವ ಈ ಕೋವಿಡ್ ಆರೈಕೆ ಕೇಂದ್ರವನ್ನು ಸೋಮವಾರ ಸೋಂಕಿತರ ಸೇವೆಗೆ ಮುಕ್ತಗೊಳಿಸಿದ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳ ಜೊತೆ, ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಮೇಯರ್ ಗೌತಮ್ ಕುಮಾರ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಏನೇನಿದೆ ಇಲ್ಲಿ?

ಅತ್ಯಂತ ಸುಸಜ್ಜಿತ ಹಾಗೂ ಅತ್ಯಾಧುನಿಕವಾಗಿ ಯಾವುದೇ ಬೃಹತ್ ಖಾಸಗಿ ಆಸ್ಪತ್ರೆಯನ್ನು ಸರಿಗಟ್ಟುವಂತೆ ನಿರ್ಮಾಣವಾಗಿರುವ ಈ ಆರೈಕೆ ಕೇಂದ್ರದಲ್ಲಿ ಸೋಂಕಿತರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಒಟ್ಟು 5,000 ಹಾಸಿಗೆಗಳು ಸಿದ್ಧವಾಗಿದ್ದು, ಈ ಪೈಕಿ 1,536 ಹಾಸಿಗೆಗಳು ಕೂಡಲೇ ಬಳಕೆಗೆ ಲಭ್ಯ ಇವೆ.

ಐದನೇ ಸಂಖ್ಯೆಯ ಹಾಲ್ ನಲ್ಲಿ 24 ವಾರ್ಡುಗಳ ವ್ಯವಸ್ಥೆ ಮಾಡಲಾಗಿದ್ದು, ಒಮ್ಮೆಲೆ 350 ಜನರು ಒಟ್ಟಿಗೆ ಊಟ ಮಾಡಬಹುದು. ಇದರ ಜತೆಗೆ, ಮನರಂಜನಾ ಕೊಠಡಿ ಮಾಡಲಾಗಿದ್ದು ಟಿವಿ, ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಸೋಫಾ, ಕುರ್ಚಿಗಳು ಹಾಗೂ ಫ್ಯಾನ್ ಸೌಕರ್ಯವನ್ನು ಮಾಡಲಾಗಿದೆ. ಹಾಗೆಯೇ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇದೆ. ಸ್ನಾನಕ್ಕೆ, ಮೂತ್ರ ವಿಸರ್ಜನೆಗೆ, ಕೈ ತೊಳೆದುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಇದೆ.

ಇವುಗಳೊಂದಿಗೆ ಇಡೀ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ನಿಯಂತ್ರಣ ಕೊಠಡಿಯನ್ನೂ ತೆರೆಯಲಾಗಿದೆ. ಕೋವಿಡ್ ಪಾಸಿಟೀವ್ ಬಂದಿರುವ ರೋಗಿಗಳು ನೋಂದಣಿ ಅಥವಾ ದಾಖಲು ಮಾಡಿಕೊಳ್ಳಲು ಪ್ರತ್ಯೇಕ ಕೊಠಡಿ ಮಾಡಲಾಗಿದೆ.

ಜತೆಗೆ, ಇಡೀ ಕೇಂದ್ರವನ್ನು ನಿರ್ವಹಣೆ ಮಾಡಲು ಪ್ರತ್ಯೇಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಹೌಸ್ ಕೀಪಿಂಗ್ ಮತ್ತು ಬಟ್ಟೆ ಒಗೆಯಲು ಪ್ರತ್ಯೇಕ ಸಿಬ್ಬಂದಿಯನ್ನು ಇಡಲಾಗಿದೆ. ಇನ್ನು ಸುರಕ್ಷತೆ ಕಾರಣಕ್ಕೆ ಮಾರ್ಷಲ್’ಗಳು ಹಾಗೂ ಕೆ.ಎಸ್.ಆರ್.ಪಿ.ಯ ಒಂದು ತುಕಡಿಯನ್ನು ಮತ್ತು ಅಗ್ನಿಶಾಮಕ ದಳದ ತುಕಡಿಯನ್ನು ಇಲ್ಲಿ ನಿಯೋಜನೆ ಮಾಡಲಾಗಿದೆ.

ದಿನದ 24 ಗಂಟೆ ವಿದ್ಯುತ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಕೋವಿಡ್ 19 ಕೇಂದ್ರಕ್ಕೆ ಪ್ರತ್ಯೇಕ ವಿದ್ಯುತ್ ಲೈನ್ ಎಳೆಯಲಾಗಿದೆ. ಇನ್ನು ಸರಕಾರ ಈಗಾಗಲೇ ನಿಗದಿ ಮಾಡಿರುವ ಫುಡ್ ಮೆನು ಪ್ರಕಾರ ಸೋಂಕಿತರಿಗೆ ನಿತ್ಯವೂ ಆಹಾರ ಪೂರೈಕೆ ಮಾಡಲಾಗುವುದು.

ಮಂಚದ ಗುಣಮಟ್ಟ ಪರಿಶೀಲನೆ:

ಕೋವಿಡ್ 19 ಪರಿಕರಗಳ ಗುಣಮಟ್ಟದ ಬಗ್ಗೆ ಕೆಲವರು ತಕರಾರು ತೆಗೆದಿರುವ ಹಿನ್ನೆಲೆಯಲ್ಲಿ ಡಿಸಿಎಂ ಅವರು, 170 ಕೆಜಿ ತೂಕದ ವ್ಯಕ್ತಿಯೊಬ್ಬರನ್ನು ಹಾಸಿಗೆಯ ಮೇಲೆ ಮಲಗಿಸಿ ಮಂಚದ ಸಾಮರ್ಥ್ಯವನ್ನು ಪರಿಶೀಲನೆ ನಡೆಸಿದರು. ಇದರ ಜತೆಗೆ, ಎಲ್ಲ ಸಚಿವರು, ಅಧಿಕಾರಿಗಳ ಜತೆ ಇಡೀ ಕೇಂದ್ರವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದರಲ್ಲದೆ, ಗುಣಮಟ್ಟದ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಈ ಕೇಂದ್ರದಲ್ಲಿ ರೋಗಿಗಳು ದಾಖಲಾಗುತ್ತಿದ್ದಂತೆ ಹಾಸಿಗೆಗಳ ಪ್ರಮಾಣವನ್ನು ಹೆಚ್ಚಿಸಲಾಗುವುದು. ಎ ಸಿಂಪ್ಟೆಮಿಕ್ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.


ಮತ್ತಷ್ಟು ಕಡೆ ಕೋವಿಡ್ ಕೇಂದ್ರಗಳು:
ಈಗ ಬೆಂಗಳೂರು ನಗರದಲ್ಲಿ 9 ಕಡೆ ಕೋವಿಡ್ 19 ಆರೈಕೆ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳ ಜತೆಗೆ ಬಿ.ಐ.ಎಸ್.ಸಿ. ಕೇಂದ್ರವು ಸೇರ್ಪಡೆಯಾಗಿದೆ. ಇದರ ಜತೆಗೆ ಅರಮನೆ ಮೈದಾನ, ಅಂತಾರಾಷ್ಟ್ರೀಯ ಕನ್ವೆಂಷನ್ ಸೆಂಟರ್, ಪೊಲೀಸ್ ಕ್ವಾಟ್ರಸ್ ಮುಂತದ ಕಡೆ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗುತ್ತಿದೆ.

ಹಾಗೆಯೇ ಕೆಲ ಖಾಸಗಿ ಅಪಾರ್ಟ್ ಮೆಂಟ್ ಗಳಲ್ಲಿ ಕೂಡ ಇಂತಹ ಕೇಂದ್ರಗಳನ್ನು ಆರಂಭಿಸಲಾಗುವುದು. ಅಗತ್ಯಕ್ಕೆ ತಕ್ಕಂತೆ ಸರಕಾರ ವ್ಯವಸ್ಥೆ ಮಾಡುತ್ತ ಹೋಗಲಿದೆ. ಇದರ ಜತೆಯಲ್ಲಿಯೇ ಹೋಂ ಕೇರ್ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದರು.

ಫಲಿತಾಂಶ ತಡವಾಗಲ್ಲ:
ಇನ್ನು ಮೇಲೆ ಸೋಂಕಿತರ ತಪಾಸಣೆ ಅಥವಾ ಸ್ಯಾಂಪಲ್ ಪರೀಕ್ಷೆ ನಂತರ ರಿಸಲ್ಟ್ ತಡವಾಗಲ್ಲ. ಸ್ಯಾಂಪಲ್ ಕೊಟ್ಟ ನಂತರ ಅರ್ಧ ಗಂಟೆಯಲ್ಲೇ ರಿಸಲ್ಟ್ ಸಿಗಲಿದೆ. ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ರಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನೂ ಸಹ ಅಗತ್ಯವಿದ್ದಷ್ಟು ಒದಗಿಸಲಾಗಿದೆ. ಜನರು ಈ ಬಗ್ಗೆ ಆತಂಕಪಡುವುದು ಬೇಡ ಎಂದು ಡಿಸಿಎಂ ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.