![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 13, 2020, 7:21 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಉಡುಪಿ ಮೂಲದ ಇಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಜಿಲ್ಲೆ ಯಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಲೇ ಇರು ವುದು ಆತಂಕ ಇನ್ನಷ್ಟು ಹೆಚ್ಚಾಗಲು ಕಾರಣವಾಗಿದೆ. ಕಾರ್ಕಳ ತಾಲೂಕಿನ ಸಾಣೂರು ನಿವಾಸಿಗಳಾದ 50 ವರ್ಷದ ಮಹಿಳೆ ಅವರ 26 ವರ್ಷದ ಪುತ್ರನಲ್ಲಿ ಕೊರೊನಾ ದೃಢಪಟ್ಟಿದೆ. ಈ ಮಹಿಳೆ ಕಳೆದ ವಾರ ಕೊರೊನಾ ದೃಢಪಟ್ಟ ಶಕ್ತಿನಗರ ಕುಲಶೇಖರದ 80 ವರ್ಷದ ವೃದೆ ಚಿಕಿತ್ಸೆ ಪಡೆಯುತ್ತಿದ್ದ ವಾರ್ಡ್ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ವೃದೆಯ ಸಂಪರ್ಕದಿಂದ ಇವರಿಗೆ ಸೋಂಕು ತಗಲಿದೆ.
ಸಾಣೂರಿನ ಮಹಿಳೆಯನ್ನು ಏ.20ರಂದು ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ದಾಖಲಿಸಲಾಗಿತ್ತು. ತಾಯಿಯನ್ನು ನೋಡಿಕೊಳ್ಳಲು ಪುತ್ರನೂ ಜತೆಗಿದ್ದರು. ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಕೊರೊನಾ ಹೆಚ್ಚುತ್ತಿದೆ ಎಂಬ ನೆಲೆಯಲ್ಲಿ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಿ ಅಲ್ಲಿದ್ದ ಎಲ್ಲರನ್ನೂ ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿತ್ತು. ಈ ತಾಯಿ-ಮಗನೂ ಇದ್ದರು. ಅವರ ಮೊದಲ ಗಂಟಲ ದ್ರವ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು, 12 ದಿನಗಳ ಬಳಿಕ ಪರೀಕ್ಷಿಸಿದ ದ್ವಿತೀಯ ಹಂತದ ವರದಿಯಲ್ಲಿ ಇಬ್ಬರಿಗೂ ಪಾಸಿಟಿವ್ ಬಂದಿದೆ.
ಬೋಳೂರಿನ ಮಹಿಳೆ ಗಂಭೀರ: ಕೊರೊನಾ ದೃಢಪಟ್ಟಿ ರುವ ಬೋಳೂರಿನ 58 ವರ್ಷದ ಮೆದುಳಿನ ಸೋಂಕಿ ನಿಂದ ಬಳಲುತ್ತಿದ್ದು, ಐಸಿಯುನಲ್ಲಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕುಲಶೇಖರದ 80 ವರ್ಷದ ವೃದೆ ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಉಳಿದಂತೆ 12 ಮಂದಿ ಕೊರೊನಾ ರೋಗಿಗಳ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.