ನೇಪಾಲ: ಲಾಕ್‌ಡೌನ್‌ ಸಡಿಲ


Team Udayavani, Jun 12, 2020, 12:54 PM IST

ನೇಪಾಲ: ಲಾಕ್‌ಡೌನ್‌ ಸಡಿಲ

ಸಾಂದರ್ಭಿಕ ಚಿತ್ರ

ಕಾಠ್ಮಂಡು: ನೇಪಾಲದಲ್ಲಿ ಕೋವಿಡ್‌ ಹಬ್ಬಲು ಭಾರತವೇ ಕಾರಣ ಎಂದು ಅಲ್ಲಿನ ಪ್ರಧಾನಿ ದೂಷಿಸುತ್ತಿದ್ದರೂ, ಈಗ ಅಲ್ಲಿ ಲಾಕ್‌ಡೌನ್‌ ಅನ್ನು ಸಡಿಲಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೆಲವು ಪ್ರದೇಶಗಳಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ. ಮಾ.24ರ ಬಳಿಕ ಅಲ್ಲಿ ಲಾಕ್‌ಡೌನ್‌ ಹೇರಲಾಗಿದ್ದು ಬಳಿಕ ಮೇ 30ರಂದು ಮತ್ತೆ ಅದನ್ನು ಜೂ.14ರವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು.

ನೇಪಾಲದಲ್ಲಿ ಈವರೆಗೆ 4360 ಪ್ರಕರಣಗಳು ಪತ್ತೆಯಾಗಿದ್ದು 15 ಮಂದಿ ಸಾವಿಗೀಡಾಗಿದ್ದಾರೆ. ಬುಧವಾರ ನಡೆದ ಸಂಪುಟ ಸಭೆಯಲ್ಲಿ ಲಾಕ್‌ಡೌನ್‌ ಸಡಿಲಗೊಳಿಸುವ ಬಗ್ಗೆ, ಹಂತ ಹಂತವಾಗಿ ಆರ್ಥಿಕ ಚಟುವಟಿಕೆಗಳನ್ನು ಶುರುಮಾಡುವ ಬಗ್ಗೆ ನಿರ್ಧಾರ ತಳೆಯಲಾಗಿದೆ. ಅದರಂತೆ ಅಂಗಡಿಗಳಲ್ಲಿ ವ್ಯವಹಾರಕ್ಕೆ ಅವಕಾಶ ಕಲ್ಪಿಸುವುದು, ಖಾಸಗಿ ಕೈಗಾರಿಕೆಗಳು, ಖಾಸಗಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸುವುದು ಇತ್ಯಾದಿ ಕ್ರಮಗಳು ಸೇರಿವೆ.

ಮೂಲಗಳ ಪ್ರಕಾರ, ಕಾಠ್ಮಂಡು ಕಣಿವೆ ಯಲ್ಲಿ ಖಾಸಗಿ ವಾಹನಗಳು ಸಮ-ಬೆಸ ವಿಧಾನಗಳಲ್ಲಿ ಸಂಚರಿಸಲು ಅನುವು ಮಾಡಿಕೊಡಲಾಗುವುದು. ಖಾಸಗಿ ಕಾರುಗಳಲ್ಲಿ ಇಬ್ಬರು ಮಾತ್ರ ಸಂಚರಿಸಲು ಅವಕಾಶ ವಿರಲಿದೆ. ದ್ವಿಚಕ್ರ ವಾಹದಲ್ಲಿ ಒಬ್ಬರು ಮಾತ್ರ ಸಂಚರಿಸಬಹುದು. ಎಲ್ಲೂ ಜನ ಸೇರುವುದನ್ನು ನಿಷೇಧಿಸಲಾಗಿದೆ.

ಇದರೊಂದಿಗೆ ಕಾಠ್ಮಂಡುವಿನಿಂದ ಬೇರೆ ಜಿಲ್ಲೆಗಳಿಗೆ ಜನರು ಸಂಚರಿಸುವುದಕ್ಕೆ ನಿಷೇಧವಿರಲಿದೆ. ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿರಲಿದೆ. ಯಾವುದೇ ದೂರದ ಸ್ಥಳಗಳಿಗೆ ಬಸ್‌ ಸಂಚಾರ ಇರುವುದಿಲ್ಲ. ಶಾಲೆಗಳು, ಕಾಲೇಜುಗಳು, ಸಿನೆಮಾ ಮಂದಿರಗಳು, ಪ್ರವಾಸಿ ಸ್ಥಳಗಳು ಮುಂದಿನ ಆದೇಶದವರೆಗೆ ಮುಚ್ಚಿಯೇ ಇರಲಿವೆ. ದೇಶಿ, ವಿದೇಶಿ ವಿಮಾನಗಳಿಗೂ ನೇಪಾಳಕ್ಕೆ ಅನುಮತಿ ಇಲ್ಲ ಎಂಬ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

ಬುಧವಾರವಷ್ಟೇ ಪ್ರಧಾನಿ ನಿವಾಸದ ಹೊರಗಡೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿ ಪ್ರತಿಭಟನೆ ನಡೆಸಿದ್ದು, ಕೋವಿಡ್‌ ವಿಚಾರದಲ್ಲಿ ಸರಿಯಾದ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಲಾಗಿತ್ತು. ಜತೆಗೆ ಲಾಕ್‌ಡೌನ್‌ನಿಂದಾಗಿ ಜನರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿ ದ್ದಾರೆ. ಅವರಿಗೆ ನೆರವಾಗುವ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತ ಕುವೈಟ್‌ನಲ್ಲಿ ಸಿಲುಕಿದ್ದ ಕಾಠ್ಮಂಡು ಮೂಲದ ಕಾರ್ಮಿಕರನ್ನು ಚಾರ್ಟಡ್‌ ವಿಮಾನದಲ್ಲಿ ಕಳಿಸಿಕೊಡಲಾಗಿದೆ. ಈ ವಿಮಾನದಲ್ಲಿ 150 ಮಂದಿ ಇದ್ದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.