ನಾರ್ವೆ: ಬದುಕು ಮತ್ತೆ ಸಹಜ ಸ್ಥಿತಿಯತ್ತ


Team Udayavani, Apr 9, 2020, 1:20 PM IST

ನಾರ್ವೆ: ಬದುಕು ಮತ್ತೆ ಸಹಜ ಸ್ಥಿತಿಯತ್ತ

ನಾರ್ವೆ: ಕೋವಿಡ್‌-19 ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಮಾರ್ಚ್‌ 13ರಂದು ಇಡೀ ನಾರ್ವೆ ಸ್ಥಗಿತಗೊಂಡಿತ್ತು. ನಿರಂತರ ಹೋರಾಟದಿಂದ ಈ ದೇಶದಲ್ಲಿ ಇದೀಗ ಚೇತರಿಕೆಯ ಗಾಳಿ ಬೀಸುತ್ತಿದ್ದು, ಹಂತ ಹಂತ ವಾಗಿ ಲಾಕ್‌ಡೌನ್‌ ನಿಯಮವನ್ನು ಸಡಿಲಗೊಳಿಸುತ್ತಿದೆ. ಈ ಕುರಿತಾಗಿ ಡೈಲಿ ಮೇಲ್‌ ವರದಿ ಮಾಡಿದ್ದು, ನಾರ್ವೆ ಪ್ರಧಾನಿ ಎರ್ನಾ ಸೋಲ್ಬರ್ಗ್‌ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ವಿವರಿಸಿದ್ದಾರೆ.

ಒಗ್ಗಟ್ಟಾಗಿ ಹೋರಾಡಿದ್ದೇವೆ
“ದೇಶದ ಪ್ರತಿಯೋರ್ವ ಪ್ರಜೆಯೂ ಸೋಂಕು ನಿಯಂತ್ರಣ ಕಾರ್ಯದಲ್ಲಿ ಒಗ್ಗಟ್ಟಾಗಿ ಹೋರಾಡಿದ್ದು, ಇಂದು ನಾವೆಲ್ಲ ಸಹಜ ಸ್ಥಿತಿಗೆ ಮರಳಲು ಕಾರಣವಾಗಿದೆ. ಇದು ಹರ್ಷದ ಸಂಗತಿ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಚಾಲ್ತಿಯ ಲ್ಲಿರುವ ಲಾಕ್‌ಡೌನ್‌ ನಿರ್ಬಂಧಗಳನ್ನು ಸ್ವಲ್ಪ ಮಟ್ಟಿಗೆ ಸಡಿಲಗೊಳಿಸಲು ನಿರ್ಧರಿಸಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

ಪ್ರಮಾಣ ಇಳಿಕೆ
ನಾರ್ವೆಯಲ್ಲಿ ಸಾಂಕ್ರಾಮಿಕ ರೋಗವು ನಿಯಂತ್ರಣ ಗೊಂಡಿದ್ದು, ಲಾಕ್‌ಡೌನ್‌ ಕ್ರಮಗಳ ಕಠಿಣ ಪಾಲನೆ ಯಿಂದ ಸೋಂಕಿಗೆ ತುತ್ತಾಗುವವರ ಸಂಖ್ಯೆ ಇಳಿಕೆಯಾಗಿದೆ. ಪ್ರಾರಂಭಿಕ ಹಂತದಲ್ಲಿ ಶೇ.2.5ರಷ್ಟಿದ್ದ ಸೋಂಕು ಹರಡುವಿಕೆ ಪ್ರಮಾಣ, ಲಾಕ್‌ಡೌನ್‌ ಜಾರಿಯಾದ ಬಳಿಕ ಶೇ.0.7ರಷ್ಟಕ್ಕೆ ಇಳಿಯಿತು. ಇದಕ್ಕೆ ನಾನು ಕಾರಣನಲ್ಲ, ನಿಯಮಗಳನ್ನು ಸರಿಯಾಗಿ ಪಾಲಿಸಿ ಸೋಂಕು ಹರಡದಂತೆ ತಡೆದವರು ಪ್ರಜೆಗಳು. ಹಾಗಾಗಿ ಅವರ ಪರಿಶ್ರಮವೇ ದೊಡ್ಡದು ಎಂದು ನಾರ್ವೆ ಆರೋಗ್ಯ ಮಂತ್ರಿ ಬೆಂಟ್‌ ಹೋಯಿ ಹೇಳಿದ್ದಾರೆ.

ಪಾಲನೆ ಆಗಲಿದೆ
ಪರಿಸ್ಥಿತಿ ನಿಯಂತ್ರಣಗೊಳ್ಳುತ್ತಿದೆ ಎಂದ ಮಾತ್ರಕ್ಕೆ ಎಲ್ಲಿ ಬೇಕೆಂದರೆ ಅಲ್ಲಿ ಓಡಾಡುವ ಆಗಿಲ್ಲ. ಎಪ್ರಿಲ್‌ 14 ರವರೆಗೆ ಲಾಕ್‌ಡೌನ್‌ ಮುಂದುವರೆಯಲಿದೆ. ಅದಾದ ಬಳಿಕ ಕೆಲವು ನಿಯಮಗಳನ್ನು ಸಡಿಲಿಸಲಾಗುವುದು. ಇನ್ನು ಕೆಲವು ನಿಯಮಗಳು ಹಾಗೆಯೇ ಮುಂದುವರಿ ಯಲಿವೆ. ಎಪ್ರಿಲ್‌ 20 ರವರೆಗೆ ಶಾಲಾ ಕಾಲೇಜುಗಳ ತೆರೆಯುವಿಕೆ, ವಿದೇಶ ಪ್ರಯಾಣದ ಮೇಲೆ ನಿರ್ಬಂಧಗಳು ಮುಂದುವರೆಯಲಿವೆ. ಜೂನ್‌ವರೆಗೆ ಯಾವುದೇ ಸಭೆ-ಸಮಾರಂಭಗಳನ್ನು ನಡೆಸದಂತೆ ಆದೇಶ ಹೊರಡಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ನಿಯಮವನ್ನು ಕಠಿಣವಾಗಿ ಪಾಲನೆ ಆಗಲಿದ್ದು, ವರ್ಕ್‌ ಫ್ರಾಂ ಹೋಮ್‌ ಜೂನ್‌ವರೆಗೆ ಇರಲಿದೆ ಎಂದು ಹೇಳಲಾಗಿದೆ.

ಕೋವಿಡ್‌-19 ಹರಡುವುದನ್ನು ತಡೆಯುವಲ್ಲಿ ಲಾಕ್‌ಡೌನ್‌ ಕ್ರಮಗಳು ಒಂದು ಮಟ್ಟಿಗೆ ಯಶಸ್ವಿಯಾಗಿದ್ದರೂ, ನಾರ್ವೆಯ ನಿರುದ್ಯೋಗ ದರವನ್ನು ಹೆಚ್ಚಿಸಿದೆ. ಕಾರ್ಮಿಕ ಮತ್ತು ಕಲ್ಯಾಣ ಸಂಸ್ಥೆ (ಎನ್‌ಎವಿ) ಸಂಸ್ಥೆ ಹಂಚಿಕೊಂಡಿರುವ ಮಾಹಿತಿ ಪ್ರಕಾರ ಶೇ.15.4ರಷ್ಟು ನಿರುದ್ಯೋಗ ಸಮಸ್ಯೆಯ ದರ ಹೆಚ್ಚಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.