ಕೋವಿಡ್ 19: ಹಿಮ್ಮೆಟ್ಟಿಸಿದ ಶತಾಯುಷಿ ಮಹಿಳೆ


Team Udayavani, Aug 2, 2020, 6:52 AM IST

ಕೋವಿಡ್ 19: ಹಿಮ್ಮೆಟ್ಟಿಸಿದ ಶತಾಯುಷಿ ಮಹಿಳೆ

ಚಿತ್ರದುರ್ಗ: ನಗರದ 110 ವರ್ಷ ಪ್ರಾಯದ ಅಜ್ಜಿ ಹಾಗೂ ಆಕೆಯ 13 ತಿಂಗಳ ಮರಿ ಮೊಮ್ಮಗಳು ಕೋವಿಡ್ 19 ಸೋಂಕು ಗೆಲ್ಲುವ ಮೂಲಕ ರೋಗಿಗಳಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದ್ದಾರೆ.

ಕೋವಿಡ್ 19 ಹಿರಿಯರಿಗೆ ಮತ್ತು ಮಕ್ಕಳಿಗೆ ಹೆಚ್ಚು ಅಪಾಯ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ 60 ವರ್ಷ ದಾಟಿದ ಅನೇಕರು ಇದಕ್ಕೆ ಬಲಿಯಾಗಿದ್ದಾರೆ.

“ಜೀವನದಲ್ಲಿ ಯಾವುದಕ್ಕೂ ಹೆದರಿದವಳಲ್ಲ. ಹಾಗಾಗಿ ಕೋವಿಡ್ 19 ಸೋಂಕಿಗೂ ಭಯಪಟ್ಟಿಲ್ಲ’ ಎನ್ನುವ ಸಿದ್ಧಮ್ಮ ಚಿತ್ರದುರ್ಗದ ಕೋವಿಡ್‌ ಆಸ್ಪತ್ರೆಯಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

ಪ್ರಕರಣದ ವಿವರ
ನಗರದ ಜಿಲ್ಲಾಸ್ಪತ್ರೆ ಎದುರಿನಲ್ಲಿರುವ ಪೊಲೀಸ್‌ ಕ್ವಾಟ್ರಸ್‌ನ ಮೊಮ್ಮಗನ ಮನೆಯಲ್ಲಿದ್ದ ಅಜ್ಜಿ ಸಿದ್ಧಮ್ಮ, 13 ತಿಂಗಳ ಮರಿ ಮೊಮ್ಮಗಳು, ಇಬ್ಬರು ಸೊಸೆಯಂದಿರು ಸೇರಿ ನಾಲ್ವರಿಗೆ ಜು. 27ರಂದು ಕೋವಿಡ್ 19 ದೃಢಪಟ್ಟಿತ್ತು. ಜು. 28ರಂದು ಅವರನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತತ ಐದು ದಿನಗಳ ಚಿಕಿತ್ಸೆಯ ಬಳಿಕ ಅಜ್ಜಿ ಹಾಗೂ ಮಗು ಡಿಸ್ಚಾರ್ಜ್‌ ಆಗಿದ್ದಾರೆ.

ಆಸ್ಪತ್ರೆಯಿಂದ ನಗುಮೊಗದೊಂದಿಗೆ ಹೊರ ಬಂದ ಅಜ್ಜಿಯು ಮೊಮ್ಮಕ್ಕಳ ಆರೋಗ್ಯ ವಿಚಾರಿಸಿದರು. ಈ ವೇಳೆ ಎದುರಾದ ಮಾಧ್ಯಮದವರು ಮಾತನಾಡಿಸಿದಾಗ, “ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿರಲಿಲ್ಲ. ಆಸ್ಪತ್ರೆ ಚೆನ್ನಾಗಿದೇರಿ. ಊಟಕ್ಕೆ ಗಂಜಿ ಕೊಟ್ರಾ. ನನಗೆ ಗಟ್ಟಿ ಪದಾರ್ಥ ಸೇರಲ್ಲ’ ಎಂದು ನೆನಪಿಗೆ ಬಂದಷ್ಟನ್ನು ಹೇಳಿಕೊಂಡರು.

ಆರೋಗ್ಯವಂತೆ
ಅಜ್ಜಿಗೆ ಬಿಪಿ, ಶುಗರ್‌ ಯಾವುದೂ ಇಲ್ಲ. ಚೆನ್ನಾಗಿದ್ದಾರೆ. ಮುದ್ದೆ ಇಷ್ಟಪಡುತ್ತಾರೆ. 110 ವರ್ಷದಲ್ಲೂ ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುತ್ತಾರೆ, ಓಡಾಡುತ್ತಾರೆ. ಕೋವಿಡ್ 19 ಅವರನ್ನು ಧೃತಿಗೆಡಿಸಿಲ್ಲ ಎನ್ನುತ್ತಾರೆ ಮನೆಯವರು.

ನಮ್ಮ ಆಸ್ಪತ್ರೆಯಲ್ಲಿ ಈ ಹಿಂದೆ ಹಿರಿಯೂರಿನ 97 ವರ್ಷದ ವೃದ್ಧೆ, ಹೊಸದುರ್ಗದ 96 ವರ್ಷದ ವೃದ್ಧೆಗೆ ಚಿಕಿತ್ಸೆ ನೀಡಲಾಗಿತ್ತು. ಅವರಿಬ್ಬರೂ ಗುಣಮುಖರಾಗಿದ್ದರು. ಈಗ 110 ವರ್ಷದ ಅಜ್ಜಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 110 ವರ್ಷದ ವೃದ್ಧೆ ಚೇತರಿಸಿಕೊಂಡಿದ್ದು ಇದೇ ಮೊದಲ ಪ್ರಕರಣ ಇರಬಹುದು. ಇಂಥವರನ್ನು ನೋಡಿದಾಗ ಚಿಕಿತ್ಸೆ ನೀಡಲು ಉತ್ಸಾಹ ಹೆಚ್ಚಾಗುತ್ತದೆ.
– ಡಾ| ಎಚ್‌.ಜೆ. ಬಸವರಾಜಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.