![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 9, 2020, 8:46 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಶನಿವಾರ ಸಾಯಂಕಾಲದಿಂದ ರವಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5985 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 4670 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 107 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1,78,087 ಆಗಿದೆ. 93,908 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3198 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 678 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 80,973 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 1948 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (455), ಬಳ್ಳಾರಿ (380), ಉಡುಪಿ (282), ಬೆಳಗಾವಿ (235), ರಾಯಚೂರು (202), ಧಾರವಾಡ (196), ಕಲಬುರಗಿ (194), ಹಾಸನ (168), ದಾವಣಗೆರೆ (158), ಬಾಗಲಕೋಟೆ (149), ಶಿವಮೊಗ್ಗ (149), ದಕ್ಷಿಣ ಕನ್ನಡ (132), ವಿಜಯಪುರ (129), ಗದಗ (114), ಚಿಕ್ಕಮಗಳೂರು (113), ಕೊಪ್ಪಳ (106) ಜಿಲ್ಲೆಗಳಿವೆ.
ಇನ್ನುಳಿದಂತೆ, ಚಿತ್ರದುರ್ಗ (98), ಬೆಂಗಳೂರು ಗ್ರಾಮಾಂತರ (95), ಯಾದಗಿರಿ (91), ಕೋಲಾರ (87), ಹಾವೇರಿ (80), ತುಮಕೂರು (78), ಬೀದರ್ (70), ಮಂಡ್ಯ (63), ಉತ್ತರಕನ್ನಡ (59), ಚಿಕ್ಕಬಳ್ಳಾಪುರ (47), ಚಾಮರಾಜನಗರ (47), ರಾಮನಗರ (38) ಮತ್ತು ಕೊಡಗು (22) ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 3,53,160 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 13,53,287 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 17,06,447 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.