ಕೋವಿಡ್ 19-ಲಸಿಕೆ ಪಡೆದ ನಂತರ ಪ್ರಧಾನಿ ಮೋದಿ… ಸಿಸ್ಟರ್ ನಿವೇದಾಗೆ ಹೇಳಿದ್ದೇನು?
ಪ್ರಧಾನಿ ಅವರನ್ನು ಭೇಟಿಯಾಗಲು ಸಾಧ್ಯವಾಗಿರುವುದು ತುಂಬಾ ಸಂತಸ ತಂದಿದೆ.
Team Udayavani, Mar 1, 2021, 12:40 PM IST
ನವದೆಹಲಿ:ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮತ್ತು ಭಾರತ ಬಯೋಟೆಕ್ ಸಂಸ್ಥೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಮಾರ್ಚ್ 01,2021) ಹಾಕಿಸಿಕೊಳ್ಳುವ ಮೂಲಕ ಎರಡನೇ ಹಂತದ ಲಸಿಕೆ ವಿತರಣೆಗೆ ಚಾಲನೆ ನೀಡಿದರು.
ಇದನ್ನೂ ಓದಿ:ಅತ್ಯಾಚಾರವೆಸಗಿ, ಕೃತ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡವ ಅಂದರ್…!
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನರ್ಸ್ ಪಿ.ನಿವೇದಾ ಅವರು ಲಸಿಕೆ ನೀಡಿದ್ದರು. ಈ ಸಂದರ್ಭದಲ್ಲಿ ನರ್ಸ್ ರೋಸಮ್ಮ ಅನಿಲ್ ಕೂಡಾ ಜತೆಗಿದ್ದರು.
ಪುದುಚೇರಿ ಮೂಲದ ಸಿಸ್ಟರ್ ನಿವೇದಾ ಅವರು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೋವ್ಯಾಕ್ಸಿನ್ ಅನ್ನು ಪ್ರಧಾನಿ ಮೋದಿ ಅವರಿಗೆ ನೀಡಿರುವ ಫೋಟೊವನ್ನು ಎಎನ್ ಐ ನ್ಯೂಸ್ ಏಜೆನ್ಸಿ ಶೇರ್ ಮಾಡಿದೆ.
ಲಸಿಕೆ ಪಡೆದ ನಂತರ ಪ್ರಧಾನಿ ಪ್ರತಿಕ್ರಿಯೆ ಹೇಗಿತ್ತು?
ಪ್ರಧಾನಿ ಮೋದಿ ಅವರಿಗೆ ಲಸಿಕೆ ನೀಡಿದ್ದ ಸಿಸ್ಟರ್ ನಿವೇದಾ ಮಾಧ್ಯಮದವರ ಜತೆ ಮಾತನಾಡುತ್ತ, ಲಸಿಕೆ ಪಡೆದ ನಂತರ ಪ್ರಧಾನಿಯವರು, ಓಹ್..ಲಸಿಕೆ ಕೊಟ್ಟಾಯ್ತಾ, ಇದು ನನ್ನ ಅನುಭವಕ್ಕೂ ಕೂಡಾ ಬರಲಿಲ್ಲ” ಎಂದು ಉದ್ಗರಿಸಿರುವುದಾಗಿ ತಿಳಿಸಿದರು.
ಪ್ರಧಾನಿ ಮೋದಿ ಅವರು ಲಸಿಕೆ ಹಾಕಿಸಿಕೊಳ್ಳಲು ಏಮ್ಸ್ ಗೆ ಬರುತ್ತಾರೆ ಎಂಬ ವಿಚಾರ ಇಂದು(ಸೋಮವಾರ, ಮಾರ್ಚ್ 01) ಬೆಳಗ್ಗೆಯಷ್ಟೇ ತಿಳಿಯಿತು. ಪ್ರಧಾನಿ ಅವರನ್ನು ಭೇಟಿಯಾಗಲು ಸಾಧ್ಯವಾಗಿರುವುದು ತುಂಬಾ ಸಂತಸ ತಂದಿದೆ. ಇದೊಂದು ಮರೆಯಲಾರದ ದಿನ ಎಂದು ಸಿಸ್ಟರ್ ನಿವೇದಾ ಹಾಗೂ ಸಿಸ್ಟರ್ ರೋಸಮ್ಮ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಾನು ಕೋವಿಡ್ 19 ಮೊದಲ ಲಸಿಕೆಯನ್ನು ಪಡೆದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದು, 60 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಬೇಕಾಗಿ ಈ ಸಂದರ್ಭದಲ್ಲಿ ಪ್ರಧಾನಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.