ಪತ್ರಗಳನ್ನು ಬಟವಾಡೆ ಮಾಡುವ ಅಂಚೆಯಣ್ಣ ಕೋವಿಡ್ ಆಪತ್ಕಾಲದಲ್ಲಿ ಜೀವರಕ್ಷಕ!

ಆಪತ್ತಿನ ಕಾಲದಲ್ಲಿ ಅಂಚೆಯಣ್ಣನ ಅಮೋಘ ಸೇವೆ ; ಬಿಬಿಸಿಯಿಂದಲೇ ಶಹಬ್ಬಾಸ್ ಗಿರಿ!

Team Udayavani, Apr 16, 2020, 5:58 AM IST

ಪತ್ರಗಳನ್ನು ಬಟವಾಡೆ ಮಾಡುವ ಅಂಚೆಯಣ್ಣ ಕೋವಿಡ್ ಆಪತ್ಕಾಲದಲ್ಲಿ ಜೀವರಕ್ಷಕ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಮಿಳುನಾಡಿನಿಂದ ಉತ್ತರ ಪ್ರದೇಶಕ್ಕೆ ಡೆಫ್ರಿಲ್ಲೇಟರ್ಸ್‌ ಸಾಗಿಸುವ ಸಮಸ್ಯೆ ಎದುರಾದಾಗ ಅದಕ್ಕೂ ಸೈ ಎಂದಿತು ಅಂಚೆ ಇಲಾಖೆ. ಓರ್ವ ಉತ್ಪಾದಕರ ಔಷಧವನ್ನು ಶೀತಲೀಕರಣ ವ್ಯವಸ್ಥೆಯಲ್ಲೇ ಸಾಗಿಸಬೇಕಿತ್ತು. ಇದಕ್ಕೂ ಹಿಂದೇಟು ಹಾಕಲಿಲ್ಲ ಅಂಚೆಯವರು.

ಹೊಸದಿಲ್ಲಿ: ಕೋವಿಡ್‌ ವೈರಾಣುವಿನ ಆಟಾಟೋಪದಿಂದ ಇಡೀ ದೇಶ ಸಂಪೂರ್ಣ ಸ್ತಬ್ಧಗೊಂಡಿರುವಾಗ ಆಪತ್ಪಾಂಧವನಾದದ್ದು ಬೇರೆ ಯಾರೂ ಅಲ್ಲ ನಮ್ಮ ಅಂಚೆಯಣ್ಣ. ಭಾರತ ಜಗತ್ತಿನಲ್ಲೇ ಅತಿ ದೊಡ್ಡ ಅಂಚೆ ಜಾಲವನ್ನು ಹೊಂದಿದೆ. ಅಂಚೆಯೆಂದರೆ ಈಗ ಬರೀ ಪತ್ರಗಳನ್ನು ಬಟವಾಡೆ ಮಾಡುವ ಇಲಾಖೆಯಲ್ಲ.

ಅದು ತನ್ನದೇ ಆದ ಬ್ಯಾಂಕ್‌ ಸೇವೆ ನೀಡುತ್ತಿದೆ, ಪಿಂಚಣಿ ನಿಧಿಯನ್ನು ನಡೆಸುತ್ತಿದೆ, ಉಳಿತಾಯ ಸ್ಕೀಂಗಳನ್ನು ಹೊಂದಿದೆ. ಹೀಗೆ ಜನಜೀವನದ ಅವಿಭಾಜ್ಯ ಅಂಗವಾಗಿರುವ ಅಂಚೆ ಇಲಾಖೆ ಕೋವಿಡ್‌ ಸಮಯದಲ್ಲಿ ಗಮನ ಸೆಳೆದದ್ದು ಜೀವ ರಕ್ಷಕ ಔಷಧಗಳ ಸಾಗಾಟವನ್ನು ಮಾಡುವ ಮೂಲಕ. ಬಿಬಿಸಿಯೇ ಅಂಚೆ ಇಲಾಖೆಯ ಈ ಅಮೋಘ ಸೇವೆಯನ್ನು ಗುರುತಿಸಿ ವಿಶೇಷ ಲೇಖನ ಪ್ರಕಟಿಸಿದೆ.

ಎಲ್ಲ ರೀತಿಯ ಸಾರಿಗೆ ಸೇವೆ ಸಂಪೂರ್ಣ ಸ್ಥಗಿತಿಗೊಂಡಿದ್ದರೂ ಅಂಚೆ ಇಲಾಖೆಯ ಕೆಂಪು ವ್ಯಾನ್‌ಗಳು ದೇಶವಿಡೀ ಸಂಚರಿಸುತ್ತಿವೆ. ಇವುಗಳು ಈಗ ಸಾಗಿಸುತ್ತಿರುವುದು ಪತ್ರಗಳನ್ನಲ್ಲ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯಗತ್ಯವಿರುವ ಔಷಧಿ, ಲಸಿಕೆ, ಮಾಸ್ಕ್, ಸುರಕ್ಷಾ ಪೋಷಾಕು ಇತ್ಯಾದಿಗಳನ್ನು.

ಮಾ. 24ರಂದು ರಾತ್ರಿ ಲಾಕ್‌ಡೌನ್‌ ಘೋಷಣೆಯಾಗಿದಾಗ ಅತಿ ದೊಡ್ಡ ಆಘಾತ ಎದುರಿಸಿದವರು ಔಷಧ ತಯಾರಕರು. ಏಕೆಂದರೆ ಲಾಕ್‌ಡೌನ್‌ ಜಾರಿಯಾಗಲು ಬಾಕಿ ಇದ್ದದ್ದು ಬರೀ 4 ತಾಸುಗಳು ಮಾತ್ರ. ಸಾಮಾನ್ಯವಾಗಿ ಔಷಧಗಳ ರವಾನೆಯಾಗುವುದು ಕೊರಿಯರ್‌ಗಳ ಮೂಲಕ. ಆದರೆ ಲಾಕ್‌ಡೌನ್‌ನಿಂದಾಗಿ ಯಾವ ಕೊರಿಯರ್‌ ಸಂಸ್ಥೆಯೂ ಸೇವೆ ನೀಡುವ ಸ್ಥಿತಿಯಲ್ಲಿರಲಿಲ್ಲ. ಅನೇಕ ಔಷಧ ಕಂಪೆನಿಗಳು ಅದಾಗಲೇ ಡೆಲಿವರಿ ಆರ್ಡರ್‌ ಸ್ವೀಕರಿಸಿಯಾಗಿತ್ತು. ಅಲ್ಲದೆ ಕೋವಿಡ್‌ ವಿರುದ್ಧ ಸುರಕ್ಷಾ ಸಾಧನಗಳು ದೇಶದ ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ ತಲುಪುದು ಅಗತ್ಯವಾಗಿತ್ತು. ಈ ಸಂದರ್ಭದಲ್ಲಿ ನೆರವಿಗೆ ಬಂದದ್ದು ಅಂಚೆ ಇಲಾಖೆ.

ಅಂಚೆ ಇಲಾಖೆಯ ತುರ್ತು ಸೇವೆ ಒಂದು ಮಾದರಿಯನ್ನು ಭಾರತೀಯ ಔಷಧ ತಯಾರಕರ ಅಸೋಸಿಯೇಶನ್‌ನ ನಿರ್ದೇಶಕ ಅಶೋಕ್‌ ಕುಮಾರ್‌ ಮದನ್‌ ವಿವರಿಸುತ್ತಾರೆ: ಉತ್ತರ ಪ್ರದೇಶದ ಹಿರಿಯ ಅಂಚೆ ಅಧಿಕಾರಿ ಅಲೋಕ್‌ ಓಝಾ ಅವರಿಂದ ಮದನ್‌ಗೆ ಫೋನ್‌ ಕರೆಯೊಂದು ಬರುತ್ತದೆ. ನಮ್ಮಿಂದ ನಿಮಗೆ ಏನಾದರೂ ಸಹಾಯಬೇಕಾಗಬಹುದೇ ಎಂದು ಕೇಳಿದರು ಓಝಾ. ಗುಜರಾತಿನಲ್ಲಿ ಅದಾಗಲೇ ಅಂಚೆ ಇಲಾಖೆ ಔಷಧ ಸಾಗಾಟ ಪ್ರಾರಂಭಿಸಿತ್ತು. ಇಂಥ ಒಂದು ಪರಿಹಾರವನ್ನು ನಿರೀಕ್ಷಿಸುತ್ತಿದ್ದ ಮದನ್‌ ಕೂಡಲೇ ಈ ಕೊಡುಗೆಯನ್ನು ಒಪ್ಪಿಕೊಂಡರು.

ಅನಂತರ ಅನೇಕ ಔಷಧ ಕಂಪೆನಿಗಳು ಅಂಚೆ ಇಲಾಖೆಯ ಸೇವೆಯನ್ನು ಬಳಸಿಕೊಂಡಿವೆ. ಲಕ್ನೊದ ಡಾ| ಉಜ್ವಲಾ ಘೋಷಾಲ್‌ಗೆ 550 ಕಿ.ಮೀ ದೂರವಿರುವ ದಿಲ್ಲಿಯಿಂದ ಕೋವಿಡ್‌ ಟೆಸ್ಟಿಂಗ್‌ ಕಿಟ್‌ಗಳನ್ನು ತಲುಪಿಸಿದ್ದು ಇವುಗಳಲ್ಲಿ ಒಂದು. ಸಾಮಾನ್ಯವಾಗಿ ಅಂಚೆ ಇಲಾಖೆಯ ಪಾರ್ಸೆಲ್‌ಗ‌ಳು ಅಂಚೆ ಕಚೇರಿಗೆ ತಲುಪುತ್ತವೆ. ಅಲ್ಲಿಂದ ನಾವು ಹೋಗಿ ತರಬೇಕು. ಆದರೆ ಈ ಸಂದರ್ಭದಲ್ಲಿ ಅಂಚೆ ಇಲಾಖೆಯವರು ವೈದ್ಯಕೀಯ ಸಾಮಾಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸಿದರು.

ತಮಿಳುನಾಡಿನಿಂದ ಉತ್ತರ ಪ್ರದೇಶಕ್ಕೆ ಡೆಫ್ರಿಲ್ಲೇಟರ್ಸ್‌ ಸಾಗಿಸುವ ಸಮಸ್ಯೆ ಎದುರಾದಾಗ ಅದಕ್ಕೂ ಸೈ ಎಂದಿತು ಅಂಚೆ ಇಲಾಖೆ. ಓರ್ವ ಉತ್ಪಾದಕರ ಔಷಧವನ್ನು ಶೀತಲೀಕರಣ ವ್ಯವಸ್ಥೆಯಲ್ಲೇ ಸಾಗಿಸಬೇಕಿತ್ತು. ಇದಕ್ಕೂ ಹಿಂದೇಟು ಹಾಕಲಿಲ್ಲ ಅಂಚೆಯವರು.

ನಿಜವಾಗಿ ನೋಡಿದರೆ ವೈದ್ಯರು, ನರ್ಸ್‌ಗಳು, ಆರೋಗ್ಯ ಕಾರ್ಯಕರ್ತರು, ಪೊಲೀಸರು ನೀಡಿದಷ್ಟೇ ಮಹತ್ವದ ಸೇವೆಯನ್ನು ಅಂಚೆ ಇಲಾಖೆಯವರು ನೀಡಿದ್ದಾರೆ. ಕೋವಿಡ್‌ ವಿರುದ್ಧದ ಯುದ್ಧದಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಡಿದ ಯೋಧರಲ್ಲಿ ಅಂಚೆಯವರೂ ಬರುತ್ತಾರೆ. ಆದರೆ ಅವರ ಸೇವೆ ಜಗತ್ತಿನ ಕಣ್ಣಿಗೆ ಬಿದ್ದಿಲ್ಲ ಅಷ್ಟೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.