Defamation Case: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ರಾಹುಲ್ ಗಾಂಧಿಯ ಜಾತಿ ಯಾವುದು ಎಂದು ಪ್ರಶ್ನಿಸುವ ಮೂಲಕ ಯತ್ನಾಳ್ ವಿವಾದಕ್ಕೆ ಗುರಿಯಾಗಿದ್ದರು.
Team Udayavani, Oct 17, 2024, 2:59 PM IST
ಬೆಂಗಳೂರು: ಭಾರತೀಯ ಜನತಾ ಪಕ್ಷದ ಫೈಯರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾನನಷ್ಟ ಪ್ರಕರಣದ ವಿಚಾರಣೆಗೆ ಸತತವಾಗಿ ಗೈರು ಹಾಜರಾಗಿದ್ದರಿಂದ ವಿಶೇಷ ಕೋರ್ಟ್ ಬುಧವಾರ (ಅ.16) ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.
ಕಾಂಗ್ರೆಸ್ ಮುಖಂಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂಬ ಯತ್ನಾಳ್ ವಿವಾದಿತ ಹೇಳಿಕೆ ವಿರುದ್ಧ ತಬ್ಸಮ್ ರಾವ್ (ದಿನೇಶ್ ಗುಂಡೂರಾವ್ ಪತ್ನಿ) ಮಾನನಷ್ಟ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆಗೆ ಶಾಸಕ ಯತ್ನಾಳ್ ಗೈರು ಹಾಜರಾಗಿದ್ದರಿಂದ ವಿಶೇಷ ಕೋರ್ಟ್ ಜಡ್ಜ್ ಕೆಎನ್ ಶಿವಕುಮಾರ್ ಅವರು, ಅಕ್ಟೋಬರ್ 28ರಂದು ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ವಾರಂಟ್ ಜಾರಿಗೊಳಿಸಿ ಆದೇಶ ನೀಡಿದ್ದಾರೆ.
ಶಾಸಕ ಯತ್ನಾಳ್ ವಿವಾದಿತ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. 2024ರ ಸೆಪ್ಟೆಂಬರ್ ನಲ್ಲಿ, ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ದೊಡ್ಡ ನಾಯಕನೊಬ್ಬ 1,000 ಕೋಟಿ ಹಣ ಕೂಡಿಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಯತ್ನಾಳ್ ಬಾಂಬ್ ಸಿಡಿಸಿದ್ದರು.
ಆದರೆ ಯತ್ನಾಳ್ ಅದು ಯಾರು ಎಂಬುದನ್ನು ಹೆಸರು ಬಹಿರಂಗಪಡಿಸಲು ನಿರಾಕರಿಸಿದ್ದರು. ಮನೆಯಲ್ಲಿ ಕರೆನ್ಸಿ ನೋಟುಗಳನ್ನು ಎಣಿಸುವ ಯಂತ್ರ ಪತ್ತೆಯಾಗಿರುವ ಆ ಮಹಾನ್ ನಾಯಕ ಯಾರೆಂಬುದು ಜನರಿಗೆ ತಿಳಿದಿದೆ ಎಂದು ಪರೋಕ್ಷವಾಗಿ ಯತ್ನಾಳ್ ಟಾಂಗ್ ನೀಡಿದ್ದರು.
ಈ ಹೇಳಿಕೆ ವಿರುದ್ಧ ಕಾಂಗ್ರೆಸ್ ಮುಖಂಡ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಜಾತಿ ಯಾವುದು ಎಂದು ಪ್ರಶ್ನಿಸುವ ಮೂಲಕ ಯತ್ನಾಳ್ ವಿವಾದಕ್ಕೆ ಗುರಿಯಾಗಿದ್ದರು.
ರಾಹುಲ್ ಗಾಂಧಿ ಅಮೆರಿಕಕ್ಕೆ ತೆರಳಿ ಅಲ್ಲಿ ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಾರೆ. ಅಲ್ಲದೇ ಭಾರತದಲ್ಲಿ ಜಾತಿ ಜನಗಣತಿ ಮಾಡಬೇಕೆಂದು ರಾಹುಲ್ ಹೇಳುತ್ತಾರೆ. ಆದರೆ ತಾನೇ ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂಬುದು ರಾಹುಲ್ ಗಾಂಧಿಗೆ ಗೊತ್ತಿಲ್ಲ ಎಂದು ಯತ್ನಾಳ್ ಟೀಕಿಸಿದ್ದರು.
2023ರ ಡಿಸೆಂಬರ್ ನಲ್ಲಿ ಯತ್ನಾಳ್ ಅವರು ಬಿಎಸ್ ಯಡಿಯೂರಪ್ಪ ವಿರುದ್ಧ ಕೋವಿಡ್ ಸಂದರ್ಭದಲ್ಲಿ ವೈಯಕ್ತಿಕವಾಗಿ ಹಣ ಮಾಡಿಕೊಂಡಿದ್ದರು ಎಂದು ಆರೋಪಿಸುವ ಮೂಲಕ ವಿವಾದ ಹುಟ್ಟುಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lawrwnce: ಬಿಷ್ಣೋಯಿ ಗ್ಯಾಂಗ್ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ
Mangaluru: ಟ್ರೇಡಿಂಗ್ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು
ಪಾತಕಿ ಲಾರೆನ್ಸ್ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?
MUST WATCH
ಹೊಸ ಸೇರ್ಪಡೆ
Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Lawrwnce: ಬಿಷ್ಣೋಯಿ ಗ್ಯಾಂಗ್ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ
Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.