ಬಸವಣ್ಣರ ಬೋಧನೆಗಳು ಜೀವನಕ್ಕೆ ಪ್ರೇರಣೆ: ಪೂಜಾ ಗಾಂಧಿ
ಕನ್ನಡಿಗ ಗಣಪತಿ ಭಟ್ ಅವರಿಗೆ ಸಮ್ಮಾನ
Team Udayavani, Oct 19, 2024, 12:02 PM IST
ಲಂಡನ್: ಲ್ಯಾಂಬೆತ್ನಲ್ಲಿರುವ ಬಸವೇಶ್ವರ ಪುತ್ಥಳಿಗೆ ಕನ್ನಡ ಚಲನಚಿತ್ರ ನಟಿ ಪೂಜಾ ಗಾಂಧಿ ಹಾಗೂ ವಿಜಯ ಘೋರಪಡೆ ದಂಪತಿ ಅವರು ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.
ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಯುಕೆ ಮೂಲದ ಬಸವ ಸಮಿತಿ ಸಂಯುಕ್ತವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಟಿ ಪೂಜಾ ಗಾಂಧಿ ಭಾಗವಹಿಸಿ ಮಾತನಾಡಿದದರು. 12ನೇ ಶತಮಾನದಲ್ಲಿ ಬಸವಣ್ಣನವರ ಮಾನವ ಹಕ್ಕುಗಳು, ಲಿಂಗ ಸಮಾನತೆ ಮತ್ತು ಜಾತಿ ಬೇಧದ ವಿರುದ್ಧ ನಡೆಸಿದ ಹೋರಾಟವು ಸಮ ಸಮಾಜವನ್ನು ನಿರ್ಮಿಸುವಲ್ಲಿ ಪಾತ್ರವಹಿಸಿತ್ತು.
ಬಸವಣ್ಣನವರ ಬೋಧನೆಗಳನ್ನು ಪ್ರತಿಯೊಬ್ಬರು ಪ್ರೇರಣೆಯಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಈ ವೇಳೆ ಯುನೈಟೆಡ್ ಕಿಂಗ್ಡಂನಲ್ಲಿ ಕನ್ನಡ ಭಾಷೆ ಮತ್ತು ಪರಂಪರೆಯನ್ನು ಉತ್ತೇಜಿಸುವಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗ ಗಣಪತಿ ಭಟ್ ಅವರನ್ನು ಇಲ್ಲಿನ ಐಕಾನಿಕ್ ಬಸವೇಶ್ವರ ಪ್ರತಿಮೆ ಬಳಿ ಸಮ್ಮಾನಿಸಲಾಯಿತು. ಜತೆಗೆ ಕನ್ನಡ ಸಂಸ್ಕೃತಿಯ ಉತ್ತೇಜನ ಮತ್ತು ಸಮುದಾಯದ ಏಕತೆಗಾಗಿ ಗಣಪತಿ ಭಟ್ ಅವರ ಸೇವೆಯನ್ನು ಪ್ರಶಂಸಿಸಲಾಯಿತು.
ಲ್ಯಾಂಬೆತ್ನ ಮಾಜಿ ಮೇಯರ್ ಡಾ| ನೀರಜ್ ಪಾಟೀಲ್, ಕನ್ನಡಿಗ ಯುಕೆ ಅಧ್ಯಕ್ಷ ಗಣಪತಿ ಭಟ್, ಯುಕೆ ಮೂಲದ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಅಭಿಜಿತ್ ಸಲೀಮತ್, ಮಿರ್ಗಿ ರಂಗನಾಥ್, ಶರಣ್ ಭೇಮಳ್ಳಿ, ಯುಕೆ ಕನ್ನಡ ಬಳಗ, ಬ್ರಿಟಿಷ್ ಇಂಡಿಯನ್ ಮತ್ತು ಕನ್ನಡ ಸಮುದಾಯದ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ
BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ
Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..
S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.